Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜೂ.3 ರಂದು ಒಂದ್ ಊರಲ್ ಒಂದು ಲವ್ ಸ್ಟೋರಿ ಸಿನಿಮಾ ಬಿಡುಗಡೆ : ನಿರ್ಮಾಪಕ ಡಾ.ರೇವಣ್ಣ

Facebook
Twitter
Telegram
WhatsApp

ಚಿತ್ರದುರ್ಗ : ಚೇತನ್ ಮೂವಿಸ್ ಅರ್ಪಿಸುವ ಒಂದ್ ಊರಲ್ ಒಂದು ಲವ್ ಸ್ಟೋರಿ ಸಿನಿಮಾ ಜೂ.3 ರಂದು ರಾಜ್ಯಾದ್ಯಂತ 45 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದ್ದು, ಪ್ರೇಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಿಸಿ ಪ್ರೋತ್ಸಾಹಿಸುವಂತೆ ಚಿತ್ರದ ನಿರ್ಮಾಪಕ ಡಾ.ರೇವಣ್ಣ ಬಳ್ಳಾರಿ ಮನವಿ ಮಾಡಿದರು.

ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಶ್ರೀವೀರಭದ್ರೇಶ್ವರ ಸಿನಿ ಕಂಬೈನ್ಸ್‍ನ ಈ ಚಿತ್ರದಲ್ಲಿ ದಾವಣಗೆರೆಯ ಫೃಥ್ವಿ, ಕಳಶದ ಪಲ್ಲವಿಗೌಡ ನಾಯಕ-ನಾಯಕಿಯಾಗಿ ನಟಿಸಿದ್ದಾರೆ. ಸಮಾಜ ಕಲಬೆರಕೆಯಾಗಿದ್ದು, ಹದಿ ಹರೆಯದ ಯುವಕ-ಯುವತಿಯರು ಚಿಕ್ಕ ವಯಸ್ಸಿನಲ್ಲಿಯೇ ಪ್ರೀತಿಯ ಮೋಹಕ್ಕೆ ಬಲಿಯಾಗಿ ಅತ್ತ ವಿದ್ಯೆಯೂ ಇಲ್ಲ. ಇತ್ತ ಜೀವನವೂ ಇಲ್ಲ. ಎರಡನ್ನು ಕಳೆದುಕೊಂಡು ಜೀವನದಲ್ಲಿ ಸಮಸ್ಯೆ ಸವಾಲುಗಳನ್ನು ಎದುರಿಸುತ್ತಿರುವುದನ್ನು ಸಾಕಷ್ಟು ನೋಡುತ್ತಿದ್ದೇವೆ. ಹಾಗಾಗಿ ಯುವ ಸಮೂಹಕ್ಕೆ ಉತ್ತಮ ಸಂದೇಶವನ್ನು ನೀಡಬೇಕೆಂಬ ಆಸೆಯಿಟ್ಟುಕೊಂಡು ಚಿತ್
ರ ತಯಾರಿಸಲಾಗಿದೆ.

ನನಗೆ ಬದುಕು ಕಟ್ಟಿಕೊಟ್ಟ ನಾಡು ಚಿತ್ರದುರ್ಗ ಜಿಲ್ಲೆಯವನಾಗಿರುವುದರಿಂದ ಮೊದಲಿನಿಂದಲೂ ಕಲೆ, ಸಾಹಿತ್ಯದಲ್ಲಿ ತುಡಿತವಿತ್ತು. ಮದಕರಿ ಕಲಾ ಸಂಪದ ಕಟ್ಟಿಕೊಂಡು ಅನೇಕ ವರ್ಷಗಳ ಕಾಲ ಸಾಹಿತ್ಯಕ್ಕೆ ಸೇವೆ ಸಲ್ಲಿಸಿದ್ದೇನೆ ಎಂದು ಹೇಳಿದರು.

ಕಾಮಿಡಿ, ಫೈಟ್ ಸೀನ್ ಇರುವ ಒಂದ್ ಊರಲ್ ಒಂದು ಲವ್ ಸ್ಟೋರಿ ಚಿತ್ರದಲ್ಲಿ ಆರು ಹಾಡುಗಳಿವೆ. ದಾವಣಗೆರೆ, ಕಾರಿಗನೂರು, ಚಿರಡೋಣಿ, ಹದಡಿ, ಬಸವಾಪಟ್ಟಣ, ಮಲ್ಪೆ, ಮುಂಡುಗೋಡುವಿನಲ್ಲಿ ಚಿತ್ರೀಕರಣವಾಗಿದೆ.

ಸಂಪೂರ್ಣವಾಗಿ ಹಳ್ಳಿ ಚಿತ್ರ ಇದಾಗಿದೆ. ಚಿತ್ರದುರ್ಗ, ದಾವಣಗೆರೆ, ಮೈಸೂರು, ಬೆಂಗಳೂರು, ಕೊಳ್ಳೆಗಾಲ, ಶಿವಮೊಗ್ಗ, ಭದ್ರಾವತಿ ಸೇರಿದಂತೆ ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ಪ್ರೇಕ್ಷಕರು ಹರಸಿ ಹಾರೈಸುವಂತೆ ಡಾ.ರೇವಣ್ಣ ಬಳ್ಳಾರಿ ವಿನಂತಿಸಿದರು.

ಶಿವಕುಮಾರ್, ಪಂಕಜ ಪತ್ರಿಕಾಗೋಷ್ಟಿಯಲ್ಲಿ ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!