Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾರ್ಚ್ 10 ರಂದು ಮಲ್ಲಾಡಿಹಳ್ಳಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವಾರ್ಷಿಕ ಸಾಮಾನ್ಯ ಸಭೆ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.17 :  ಕನ್ನಡ ಸಾಹಿತ್ಯ ಪರಿಷತ್ತಿನ ವಾರ್ಷಿಕ ಸಾಮಾನ್ಯ ಸಭೆಯನ್ನು ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕು ಮಲ್ಲಾಡಿಹಳ್ಳಿಯಲ್ಲಿ ಮಾ.10 ರಂದು ಭಾನುವಾರ ಏರ್ಪಡಿಸಲಾಗಿದೆ ಎಂದು ಚಿತ್ರದುರ್ಗ ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಮೊದಲ ಬಾರಿಗೆ ರಾಜ್ಯ ಕಸಾಪ ವಾರ್ಷಿಕ ಸಾಮಾನ್ಯ ಸಭೆ ಏರ್ಪಡಿಸಲಾಗಿದೆ. ರಾಜ್ಯ ಮತ್ತು ನೆರೆ ರಾಜ್ಯದ ಎಲ್ಲ ಆಜೀವ ಸದಸ್ಯರು ಇದರಲ್ಲಿ ಭಾಗವಹಿಸಲು ಅವಕಾಶವಿದೆ. ಸಾಮಾನ್ಯ ಸಭೆಯ ತಿಳುವಳಿಕೆ ಪ್ರಕಟಣೆಯನ್ನು ಕಸಾಪ ತನ್ನ ವೆಬ್‍ಸೈಟ್ ನಲ್ಲಿ ಈಗಾಗಲೇ ಪ್ರಕಟಿಸಿದೆ.

ಆಯಾ ಜಿಲ್ಲೆ, ತಾಲ್ಲೂಕು ಮತ್ತು ಹೋಬಳಿ ಅಧ್ಯಕ್ಷರು ತಮ್ಮ ವ್ಯಾಪ್ತಿಯಲ್ಲಿನ ಕಚೇರಿ ಸೂಚನಾ ಫಲಕಗಳಲ್ಲಿ ಸಭಾ ಸೂಚನಾ ತಿಳುವಳಿಕೆಯ ಪತ್ರವನ್ನು ಪ್ರಕಟಿಸಲು ಸೂಚಿಸಲಾಗಿದೆ. ವಾರ್ಷಿಕ ಸಭೆಯಲ್ಲಿ ಹಿಂದಿನ ವರ್ಷದ ವಾರ್ಷಿಕ ಸಭೆಯ ದೃಢೀಕರಣ ಹಾಗೂ ಲೆಕ್ಕ ಪತ್ರಗಳ ಮಂಡನೆ ಸೇರಿದಂತೆ ಒಂಬತ್ತು ಅಂಶಗಳು ಕಾರ್ಯಸೂಚಿಯಲ್ಲಿವೆ.

ವಾರ್ಷಿಕ ಸಭೆಗೆ ಹಾಜರಾಗುವ ಸದಸ್ಯರು ಕಡ್ಡಾಯವಾಗಿ ಗುರುತಿನ ಪತ್ರ ತರಬೇಕು. ಪ್ರಶ್ನೆಗಳನ್ನು ಕೇಳಬಯಸುವ ಸದಸ್ಯರು ತಮ್ಮ ಪ್ರಶ್ನೆಯನ್ನು ಕನಿಷ್ಟ ಎರಡು ವಾರಗಳ ಮುಂಚೆ ಅಧ್ಯಕ್ಷರು, ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು, ಇವರಿಗೆ ಕಳುಹಿಸತಕ್ಕದ್ದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ 9449510078, 9980383294, 9538418943, 9880031083

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!