ಚಿತ್ರದುರ್ಗದಲ್ಲಿ ನವೆಂಬರ್ 11 ರಂದು ಉಚಿತ ಹೃದಯ ತಪಾಸಣಾ ಶಿಬಿರ

1 Min Read

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ನವೆಂಬರ್.08  : ಜಿಲ್ಲಾ ವೀರಶೈವ ಲಿಂಗಾಯತ ಹೇಮರಡ್ಡಿ ಮಲ್ಲಮ್ಮ ಸಮಾಜ, ಎಸ್.ಎಸ್.ನಾರಾಯಣ ಆಸ್ಪತ್ರೆ ದಾವಣಗೆರೆ ಇವರ ಸಹಯೋಗದೊಂದಿಗೆ ನವೆಂಬರ್ 11 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಿಟಿ ಕ್ಲಬ್ ಬಿಲ್ಡಿಂಗ್‍ನಲ್ಲಿ ರೋಟರಿ ಬಾಲಭವನ ಹತ್ತಿರವಿರುವ ವೀರಶೈವ ಲಿಂಗಾಯತ ಹೇಮರಡ್ಡಿ ಮಲ್ಲಮ್ಮ ಸಮಾಜ
ದಲ್ಲಿ ಉಚಿತ ಹೃದಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

 

ಎದೆನೋವು, ಉಸಿರಾಟದ ತೊಂದರೆ, ಅನಿಯಮಿತ ಹೃದಯ ಬಡಿತ, ಭಜದಲ್ಲಿ ನೋವು, ದುರ್ಬಲತೆ, ತಲೆಸುತ್ತುವಿಕೆ, ಬೆವರುವುದು, ವಾಕರಿಕೆಯಾಗುವ ಲಕ್ಷಣಗಳಿರುವವರು ತಪ್ಪದೆ ಉಚಿತ ತಪಾಸಣಾ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಜಿಲ್ಲಾ ವೀರಶೈವ ಲಿಂಗಾಯತ ಹೇಮರಡ್ಡಿ ಮಲ್ಲಮ್ಮ ಸಮಾಜದ ಅಧ್ಯಕ್ಷ ಜಿ.ಚಿದಾನಂದಪ್ಪ, ಕಾರ್ಯದರ್ಶಿ ಡಿ.ಟಿ.ಶಿವಾನಂದಪ್ಪ ಇವರುಗಳು ಮನವಿ ಮಾಡಿದ್ದಾರೆ.

ಸುದ್ದಿಒನ್, ಚಿತ್ರದುರ್ಗ, ನವೆಂಬರ್.08  : ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಜಿಲ್ಲಾಧ್ಯಕ್ಷರಾಗಿ ನಾಗರಾಜ ಸಂಗಮ್ ಮೂರು ವರ್ಷದ ಅವಧಿಗೆ ಮರು ನೇಮಕಗೊಂಡಿದ್ದಾರೆ.


ಐಶ್ವರ್ಯ ಫೋರ್ಟ್‍ನಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ರಾಜ್ಯಾಧ್ಯಕ್ಷ ಹುಲಿಕಲ್ ನಟರಾಜ್ ನಾಗರಾಜ ಸಂಗಮ್‍ರವರನ್ನು ಮರು ನೇಮಕಗೊಳಿಸಿದರು.

——————————–
ಸುದ್ದಿಒನ್, ಚಿತ್ರದುರ್ಗ : ಜಿಲ್ಲಾಸ್ಪತ್ರೆಯ ಆವರಣದಲ್ಲಿ ಕಳೆದ ಕೆಲವು ದಿನಗಳ ಹಿಂದೆ ಅಪರಿಚಿತ ವ್ಯಕ್ತಿಯೋರ್ವ ಮದ್ಯಪಾನ ಸೇವಿಸಿದ್ದು, ಆಸ್ಪತ್ರೆಗೆ ಚಿಕಿತ್ಸೆಗೆಂದು ಹೋದ ವ್ಯಕ್ತಿ ಚಿಕಿತ್ಸೆ ಕೊಡಿಸಿ ಒಳರೋಗಿಯಾಗಿ ದಾಖಲಿಸಿದ್ದ ಅಂದಾಜು 40 ವರ್ಷ ವಯಸ್ಸಿನ ಪುರುಷ ಮೃತಪಟ್ಟಿದ್ದಾನೆ.

ಸಾಧಾರಣ ಮೈಕಟ್ಟು, ಕೋಲು ಮುಖ, ಎಣ್ಣೆಗೆಂಪು ಬಣ್ಣ, ನೀಲಿ ಬಣ್ಣದ ಟೀಶರ್ಟ್, ಕಡು ನೀಲಿ ಕಪ್ಪುಬಣ್ಣದ ನೈಟ್ ಫ್ಯಾಂಟ್ ಧರಿಸಿರುತ್ತಾನೆ. ವಾರಸುದಾರರು ಯಾರಾದರು ಇದಲ್ಲಿ ಚಿತ್ರದುರ್ಗ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ನಗರ ಪೊಲೀಸ್ ಠಾಣೆ ಆರಕ್ಷಕ ಉಪ ನಿರೀಕ್ಷಕರು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks