ಚಿತ್ರದುರ್ಗ : ರಾಷ್ಟ್ರೋತ್ಥಾನ ಪರಿಷತ್ ಚಿತ್ರದುರ್ಗ, ರೋಟರಿ ಕ್ಲಬ್ ಚಿನ್ಮೊಲಾದ್ರಿ ಚಿತ್ರದುರ್ಗ ಹಾಗೂ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಸಂಯುಕ್ತಾಶ್ರಯದಲ್ಲಿ ನ.26 ರಂದು ಸಂಜೆ 6 ಗಂಟೆಗೆ ನಗರದ ರೋಟರಿ ಬಾಲಭವನದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕರಾಗಿದ್ದ ದಿ.ಹೊ.ವೆ.ಶೇಷಾದ್ರಿ ಅವರ ನಾ.ಡಿಸೋಜ ಸಂಪಾದನೆಯ ‘ಪ್ರಬಂಧ ಸಂಚಯ’ ಎಂಬ ಲೇಖನಗಳ ಸಂಗ್ರಹ ಬಿಡುಗಡೆ ಮಾಡಲಾಗುವುದು.
ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಗೌರವಾಧ್ಯಕ್ಷ ಕಣಜನಹಳ್ಳಿ ನಾಗರಾಜ್ ಕೃತಿ ಬಿಡುಗಡೆ ಮಾಡುವರು. ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಸಂತೋಷ್ ತಮ್ಮಯ್ಯ ಕೃತಿ ಕುರಿತು ಮಾತನಾಡುವರು. ಸರ್ಕಾರಿ ಕಲಾ ಕಾಲೇಜು ಸ್ನಾತಕೋತ್ತರ ಕೇಂದ್ರ ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ.ಕರಿಯಪ್ಪ ಮಾಳಿಗೆ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ನೂತನ ಅಧ್ಯಕ್ಷ ಕೆ.ಎಂ. ಶಿವಸ್ವಾಮಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಕಾರ್ಯಕ್ರಮದಲ್ಲಿ ಸಾಹಿತ್ಯಾಭಿಮಾನಿಗಳು ಭಾಗವಹಿಸಲು ಜ್ಞಾನಭಾರತಿ ವಿದ್ಯಾ ಮಂದಿರದ ಆಡಳಿತ ಮಂಡಳಿ ಸದಸ್ಯ ಡಾ.ಕೆ.ರಾಜೀವಲೋಚನ್, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಯೋಗೇಶ್ ಸಹ್ಯಾದ್ರಿ, ರೋಟರಿ ಕ್ಲಬ್ ಅಧ್ಯಕ್ಷ ಚೆಲುವರಾಜು ಮನವಿ ಮಾಡಿದ್ದಾರೆ.
ಸುದ್ದಿಒನ್ ಲವಂಗ ಮತ್ತು ಬೆಲ್ಲವನ್ನು ಒಟ್ಟಿಗೆ ಸೇವಿಸುವುದರಿಂದ ಶೀತ ಮತ್ತು ಕೆಮ್ಮು ನಿವಾರಣೆಯಾಗುತ್ತದೆ. ಅವು ಉರಿಯೂತದ ಗುಣಲಕ್ಷಣಗಳನ್ನು ಹೊಂದಿದ್ದು…
ಈ ರಾಶಿಯವರಿಗೆ ಆಸ್ತಿ ಹೂಡಿಕೆಗಾಗಿ ಶುಭದಿನ, ಸಂಗಾತಿ ಜೊತೆ ಟ್ರಿಪ್ ಸಕ್ಸಸ್, ಈ ರಾಶಿಯವರಿಗೆ ಏಕಾಏಕಿ ಮದುವೆಯ ಸಂದೇಶ, ಭಾನುವಾರದ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಬೆಂಗಳೂರು: ಮುಖ್ಯಮಂತ್ರಿಗಳ ಸಲಹೆಗಾರರಾಗಿದ್ದ ಶಾಸಕ ಬಿ.ಆರ್. ಪಾಟೀಲ್ ಅವರು ಇಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಕಲಬುರಗಿ…