Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕುಂಚಿಟಿಗ ಸಮುದಾಯವನ್ನು ಓಬಿಸಿಗೆ ಸೇರಿಸುವಂತೆ ಒತ್ತಾಯಿಸಿ ಅಕ್ಟೋಬರ್ 13 ರಂದು ಚಿತ್ರದುರ್ಗದಲ್ಲಿ ಉಪವಾಸ ಸತ್ಯಾಗ್ರಹ : ಜಗನ್ನಾಥ್

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,                         
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. (ಅಕ್ಟೋಬರ್.11) :  ಕುಂಚಿಟಿಗ ಸಮುದಾಯವನ್ನು ಕೇಂದ್ರ ಸರ್ಕಾರ ಓಬಿಸಿಗೆ ಸೇರಿಸುವಂತೆ ಆಗ್ರಹಿಸಿ ಇಂದಿನಿಂದ ಹಿರಿಯೂರಿನಿಂದ ಚಿತ್ರದುರ್ಗದವರೆಗೆ ಪಾದಯಾತ್ರೆಯನ್ನು ಪ್ರಾರಂಭಿಸಿದ್ದು, ಆ. 13 ರಂದು ಚಿತ್ರದುರ್ಗದಲ್ಲಿ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕಲಿಗೆ ಸಂಘದ ಪ್ರಧಾನ ಕಾರ್ಯದರ್ಶಿ ಜಗನ್ನಾಥ್ ತಿಳಿಸಿದ್ದಾರೆ.

ಚಿತ್ರದುರ್ಗ ನಗರದ ಒಕ್ಕಲಿಗ ಸಂಘದ ಆವರಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದ 18 ಜಿಲ್ಲೆಗಳಲ್ಲಿ 46 ತಾಲ್ಲೂಕುಗಳಲ್ಲಿ 26 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಇದ್ದು ಸಮುದಾಯವನ್ನು ಕೇಂದ್ರ ಸರ್ಕಾರ ಓಬಿಸಿಗೆ ಸೇರ್ಪಡೆ ಮಾಡುವಂತೆ ಆಗ್ರಹಿಸಿ 26 ವರ್ಷದಿಂದ ಹೋರಾಟ ನಡೆಯುತ್ತಿದೆ ಇದರ ಅಂಗವಾಗಿ ರಾಜ್ಯ ಸರ್ಕಾರ ಕುಂಚಿಟಿಗ ಕುಲ ಶಾಸ್ತ್ರ ಅಧ್ಯಯನ ವರದಿಯನ್ನು ತಯಾರಿಸಿ ಅದನ್ನು ರಾಜ್ಯ ಸಚಿವ ಸಂಪುಟದಲ್ಲಿ ಮಂಡಿಸಿ ಅನುಮೋದನೆಯನ್ನು ಮಾಡಲಾಗಿದೆ. ಈಗ ಕೇಂದ್ರ ಸರ್ಕಾರ ನಮ್ಮ ಸಮುದಾಯವನ್ನು ಓಬಿಸಿಗೆ ಸೇರ್ಪಡೆ ಮಾಡಬೇಕಿದೆ ಎಂದು ಆಗ್ರಹಿಸಿದರು.

ಈಗ ಕೇಂದ್ರ ಸರ್ಕಾರದ ಮುಂದೆ ನಮ್ಮ ಸಮುದಾಯವನ್ನು ಓಬಿಸಿಗೆ ಸೇರ್ಪಡೆ ಮಾಡಬೇಕಿದೆ. ಇದನ್ನು ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ಚಿದಾನಂದ ಗೌಡ, ಜವಾಬ್ದಾರಿಯನ್ನು ತೆಗೆದುಕೊಂಡು ದೆಹಲಿ ವಿಶೇಷ ಪ್ರತಿನಿಧಿ ಜಯಚಂದ್ರ ಮಾರ್ಗದರ್ಶನದಲ್ಲಿ ಕೇಂದ್ರ ಸಚಿವರಾದ ನಾರಾಯಣಸ್ವಾಮಿ ಸಹಕಾರದೊಂದಿಗೆ ಮುಂಬರುವ 2024ರ ಲೋಕಸಭಾ ಚುನಾವಣೆಗೂ ಮುನ್ನಾ ಕೇಂದ್ರ ಸರ್ಕಾರದ ಓಬಿಸಿ ಮೀಸಲಾತಿ ಪಟ್ಟಿಯಲ್ಲಿ ಸೇರಿಸಬೇಕಿದೆ. ಇಂದಿನಿಂದ ಪ್ರಾರಂಭವಾಗಿರುವ ಪಾದಯಾತ್ರೆಯ ನೇತೃತ್ವವನ್ನು ಓಬಿಸಿ ಹೋರಾಟಗಾರರಾದ ಕಸವನಹಳ್ಳಿ ರಮೇಶ್ ಮತ್ತು ಕುಲಶಾಸ್ತ್ರ ಅಧ್ಯಯನಕಾರ ಎಸ್.ವಿ.ರಂಗನಾಥ್ ವಹಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದರು.

ಆ. 11 ರ ಇಂದು ಬೆಳಿಗ್ಗೆ 6 ಗಂಟೆಯಿಂದ ಹಿರಿಯೂರಿನಿಂದ ಪಾದಯಾತ್ರೆ ಪ್ರಾರಂಭವಾಗಿದ್ದು, ಇಂದು ಸಂಜೆ ರಾ.ಹೆ.4ರ ಬುರುಜನರೂಪ್ಪ ಶ್ರೀ ರಕ್ಷಾ ಗಣಪತಿ ದೇವಸ್ಥಾನದಲ್ಲಿ ವಾಸ್ತವ್ಯ ಮಾಡಲಿದ್ದು ಆ. 12ರ ಗುರುವಾರ ಬೆಳಿಗ್ಗೆ 6 ಗಂಟೆಯಿಂದ ಪಾದಯಾತ್ರೆ ಪ್ರಾರಂಭವಾಗಲಿದ್ದು, ಅಂದು ರಾತ್ರಿ ಚಿತ್ರದುರ್ಗದಲ್ಲಿ ವಾಸ್ತವ್ಯ ಮಾಡಲಿದ್ದು, ಆ. 13ರ ಶುಕ್ರವಾರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಕುಂಚಿಟಿಗ ಸಮುದಾಯವನ್ನು ಕೇಂದ್ರ ಸರ್ಕಾರ ಓಬಿಸಿಗೆ ಸೇರಿಸುವಂತೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸಿ ಮನವಿಯನ್ನು ಸಲ್ಲಿಸಲಾಗುವುದು ಎಂದು ಜಗನ್ನಾಥ್ ಹೇಳಿದರು.

ಗೋಷ್ಟಿಯಲ್ಲಿ ಅಧ್ಯಕ್ಷ ಜಿ.ಪಿ.ಚೇತನ, ಮಾಜಿ ಗೌರವಾದ್ಯಕ್ಷರಾದ ಹೆಚ್.ಆರ್.ತಿಮ್ಮಯ್ಯ, ಮಾಜಿ ಅಧ್ಯಕ್ಷರಾದ ಜಿ.ಹನುಮಂತಪ್ಪ, ಓ.ಎಲ್.ಜ್ಞಾನೇಶ್ವ ಕುಮಾರ್, ಸಹಾ ಕಾರ್ಯದರ್ಶಿ ಎಂ.ಡಿ.ಕುಮಾರ್, ನಿರ್ದೇಶಕರಾದ ಪರಮಶ್ವರ, ಚೇತನ, ರಂಗಧಾಮಯ್ಯ ವ್ಯವಸ್ಥಾಪಕರಾದ ನರೇಂದ್ರಬಾಬು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!