ಸೆಪ್ಟೆಂಬರ್ 12 ರಂದು ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಯ ಸಮಾಜಶಾಸ್ತ್ರ ಅಧ್ಯಾಪಕರಿಗೆ ಪಠ್ಯಕ್ರಮ ಕಾರ್ಯಾಗಾರ

 

ಸುದ್ದಿಒನ್, ಚಿತ್ರದುರ್ಗ, ಸೆ.10 : ಪದವಿ ವಿಧ್ಯಾರ್ಥಿಗಳಿಗೆ 5 ಮತ್ತು 6 ನೇ ಸೆಮಿಸ್ಟರ್ ನ ಸಮಾಜಶಾಸ್ತ್ರ ಪಠ್ಯಕ್ರಮ ಕಾರ್ಯಾಗಾರವನ್ನು ದಾವಣಗೆರೆ ವಿ.ವಿ‌.ವ್ಯಾಪ್ತಿಯ ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಯ ಸಮಾಜಶಾಸ್ತ್ರ ಅಧ್ಯಾಪಕರಿಗೆ ಸೆಪ್ಟೆಂಬರ್ 12 ರಂದು ನಗರದ ಸರ್ಕಾರಿ ಕಲಾ ಕಾಲೇಜಿನಲ್ಲಿ ನಡೆಯಲಿದೆ.

ದಾವಣಗೆರೆ ವಿಶ್ವವಿದ್ಯಾಲಯ ಸ್ನಾತಕೋತ್ತರ ಸಮಾಜಶಾಸ್ತ್ರ ವಿಭಾಗ,ಮತ್ತು ದಾವಣಗೆರೆ ವಿಶ್ವವಿದ್ಯಾಲಯ ಸಮಾಜಶಾಸ್ತ್ರ ಅಧ್ಯಾಪಕರ ಸಂಘ.(ರಿ)ದಾವಣಗೆರೆ ಇವರ ಸಹಯೋಗದೊಂದಿಗೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರೊ. ಎ.ರಾಮೇಗೌಡ,ವಿಶ್ರಾಂತ ಸಮಾಜಶಾಸ್ತ್ರ ಪ್ರಾಧ್ಯಾಪಕರು, ಕುವೆಂಪು ವಿಶ್ವವಿದ್ಯಾಲಯ, ಶಿವಮೊಗ್ಗ ಇವರು ನೆರೆವೇರುಸುವರು. ಅಧ್ಯಕ್ಷತೆಯನ್ನು ಪ್ರೊ.ಬಿ.ಟಿ.ತಿಪ್ಪೇರುದ್ರಸ್ವಾಮಿ, ಪ್ರಾಂಶುಪಾಲರು, ಸರ್ಕಾರಿ ಕಲಾ ಕಾಲೇಜು, ಚಿತ್ರದುರ್ಗ ವಹಿಸುವರು.

ಡಾ.ಹುಚ್ಚೆಗೌಡ, ಸಂಯೋಜಕರು, ಸಮಾಜಶಾಸ್ತ್ರ ವಿಭಾಗ, ದಾವಣಗೆರೆ ವಿ.ವಿ.ತೋಳಹುಣಸೆ, ದಾವಣಗೆರೆ, ಡಾ.ಧನಂಜಯ, ಜಿ.ಬಿ.ಪ್ರಾಂಶುಪಾಲರು, ಸ.ಪ್ರ.ದ.ಕಾಲೇಜು, ಹೊನ್ನಾಳಿ, ಪ್ರೊ.ಜಿ.ಡಿ.ಸುರೇಶ್, ಐ.ಕ್ಯೂ.ಎ.ಸಿ
ಸಂಚಾಲಕರು, ಡಾ.ಹೆಚ್.ತಿಪ್ಪೇಸ್ವಾಮಿ,  ಕಾರ್ಯದರ್ಶಿ, ದಾವಣಗೆರೆ ವಿ.ವಿ.ಸಮಾಜಶಾಸ್ತ್ರ ಅಧ್ಯಾಪಕರ ಸಂಘ,
ಪ್ರೊ.ಎಲ್.ನಾಗರಾಜಪ್ಪ, ಕಾರ್ಯದರ್ಶಿ, ಅಧ್ಯಾಪಕರ ಸಂಘ, ಸರ್ಕಾರಿ ಕಲಾ ಕಾಲೇಜು, ಗೆಜೆಟೆಡ್ ಮ್ಯಾನೇಜರ್ ಮಾರ್ಟಿನ್ ಸ್ಯಾಮುಯೆಲ್‌ ವೇದಿಕೆಯಲ್ಲಿ ಇರುತ್ತಾರೆ.

ಡಾ.ಧರಣೇಂದ್ರಯ್ಯ ಇವರ ಅಧ್ಯಕ್ಷತೆಯಲ್ಲಿ ಅಂತಿಮ ಪದವಿಯ ವಿವಿಧ ಪತ್ರಿಕೆಗಳನ್ನು ಡಾ.ಟಿ.ಮಂಜುಳಾ, ಡಾ.ಕೆ.ಸಿ.ಶರಣಪ್ಪ, ಡಾ.ಸರೇಶ್.ಸಿ ಪದವಿ ಐದನೇ ಸೆಮಿಸ್ಟರ್ ನ ಸಮಾಜಶಾಸ್ತ್ರದ ಪದವಿ ಪತ್ರಿಕೆಗಳನ್ನು

ಪ್ರೊ.ಸಿ.ವೈ. ಯಶೋಧ ಅವರ ಅಧ್ಯಕ್ಷತೆಯಲ್ಲಿ ಡಾ.ತಿಪ್ಪೇಸ್ವಾಮಿ, ಡಾ.ಸಿದ್ದಪ್ಪ ಡಿ.ಓ.ಪ್ರೊ.ಟಿ.ನಾಗರಾಜ್ ಆರನೇ ಸೆಮಿಸ್ಟರ್ ನ ಸಮಾಜಶಾಸ್ತ್ರದ ಪದವಿ ಪತ್ರಿಕೆಗಳನ್ನು ಮಂಡಿಸಲಿದ್ದಾರೆ.

ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಡಾ.ಶ್ಯಾಮರಾಜ ಟಿ, ಸಹ ಸಂಚಾಲಕರು ಪ್ರೊ.ಎಸ್.ಆನಂದ, ಪ್ರೊ‌.ನಯಾಜ್ ಅಹಮದ್ ಹಾಗೂ ದಾವಣಗೆರೆ, ಚಿತ್ರದುರ್ಗ ಜಿಲ್ಲೆಯ ಸಮಾಜಶಾಸ್ತ್ರ ಅಧ್ಯಾಪಕರು ಈ ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದಾರೆ ಎಂದು ಕಾರ್ಯಾಗಾರದ ಸಂಚಾಲಕ ಹಾಗೂ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಎಸ್.ಆರ್.ಲೇಪಾಕ್ಷ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ :
ಡಾ.ಎಸ್.ಆರ್.ಲೇಪಾಕ್ಷ,ಸಂಚಾಲಕರು ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರು, ಸರ್ಕಾರಿ ಕಲಾ ಕಾಲೇಜು, ಚಿತ್ರದುರ್ಗ, 9986572664 ಸಂಪರ್ಕಿಸಲು ಕೋರಿದೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

56 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago