Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೇಣುಕಾಸ್ವಾಮಿ‌ ಕೊಲೆಯಾದ ದಿನ ದರ್ಶನ್ ಜೊತೆ ಪಾರ್ಟಿಯಲ್ಲಿದ್ದ ಚಿಕ್ಕಣ್ಣ : ಪೊಲೀಸರಿಂದ ವಿಚಾರಣೆ..!

---Advertisement---

ಬೆಂಗಳೂರು: ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಎಂಬ ಕಾರಣಕ್ಕೆ ಚಿತ್ರದುರ್ಗದಿಂದ ನೀಟಾಗಿ ಪ್ಲ್ಯಾನ್ ಮಾಡಿ ಬೆಂಗಳೂರಿಗೆ ಕರೆತಂದಿದ್ದ ದರ್ಶನ್ ಗ್ಯಾಂಗ್, ಚಿತ್ರ, ವಿಚಿತ್ರವಾಗಿ ಆ ವ್ಯಕ್ತಿಯನ್ನು ಕೊಂದು ಬಿಸಾಕಿತ್ತು. ಸುಮನಹಳ್ಳಿ ಮೋರಿಗೆ ಬಿಸಾಡಿದ್ದೀವಿ ಎಂದುಕೊಂಡ ಗ್ಯಾಂಗ್ ದಡದಲ್ಲಿಯೇ ಬಿಸಾಡಿ ಹೋಗಿತ್ತು. ಹೆಣ ಮೋರಿಗೆ ಬಿದ್ದಿದ್ದರೆ ಗ್ಯಾಂಗ್ ಅಷ್ಟು ಸುಲಭಕ್ಕೆ ಸಿಕ್ಕಿ ಬೀಳುತ್ತಾ ಇರಲಿಲ್ಲವೇನೋ. ಈ ಕೊಲೆ ಕೇಸಲ್ಲಿ ದಿನೇ ದಿನೇ ಟ್ವಿಸ್ಟ್ ಸಿಗುತ್ತಲೆ ಇದೆ. ಒಬ್ಬೊಬ್ಬರನ್ನೇ ಪೊಲೀಸರು ತಮ್ಮ ಅತಿಥಿಯನ್ನಾಗಿ ಮಾಡಿಕೊಳ್ಳುತ್ತಿದ್ದಾರೆ.

ಇಡೀ ಚಿತ್ರರಂಗ ಈ ಬಗ್ಗೆ ಮಾತನಾಡುವುದಕ್ಕೆ ಶುರು ಮಾಡಿದೆ. ದರ್ಶನ್ ಮಾಡಿದ್ದು ತಪ್ಪು, ಆ ಹೆಣ್ಣು ಮಗುವಿಗೆ ಅನ್ಯಾಯವಾಗಿದೆ, ನ್ಯಾಯ ಸಿಗಬೇಕು. ದರ್ಶನ್ ಗೆ ಶಿಕ್ಷೆಯಾಗಬೇಕು ಎಂದೇ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಪೊಲೀಸರು ಕೂಡ ಈ ಕೇಸಿನ ಮೂಲೆ ಮೂಲೆಯಲ್ಲೂ ತನಿಖೆ ನಡೆಸುತ್ತಿದ್ದಾರೆ.

 

ಇದೀಗ ಇಂದು ಹಾಸ್ಯ ನಟ ಚಿಕ್ಕಣ್ಣ ಅವರಿಗೂ ಪೊಲೀಸ್ ನೋಟೀಸ್ ನೀಡಿದ್ದರು‌. ಯಾಕಂದ್ರೆ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ದಿನ ದರ್ಶನ್ ಅಂಡ್ ಗ್ಯಾಂಗ್ ಪಾರ್ಟಿ ಮಾಡುತ್ತಿದ್ದರು. ಆರೋಪಿ ಸ್ಥಾನದಲ್ಲಿರುವ ವಿನಯ್ ಒಡೆತನದ ಸ್ಟೋನಿ ಬ್ರೂಕ್ ಪಬ್ ನಲ್ಲಿ ಎಲ್ಲರೂ ಸೇರಿ ವೀಕೆಂಡ್ ಪಾರ್ಟಿ ಮಾಡುತ್ತಿದ್ದರು. ಆ ಪಾರ್ಟಿಯಲ್ಲಿ ಬೆಳಗ್ಗೆಯಿಂದ ಸಂಜೆ ತನಕ ಚಿಕ್ಕಣ್ಣ ಕೂಡ ಜೊತೆಗೆ ಇದ್ದರು. ಹೀಗಾಗಿ ಪೊಲೀಸರು ನೋಟೀಸ್ ನೀಡಿದ್ದರು. ಹೀಗಾಗಿ ನೋಟೀಸ್ ನೀಡಿ ವಿಚಾರಣೆ ನಡೆಸಿದ್ದಾರೆ. ಪಬ್ ನಲ್ಲಿದ್ದಾಗ ದರ್ಶನ್ ಅಂಡ್ ಗ್ಯಾಂಗ್ ಕೊಲೆ ಬಗ್ಗೆ ಏನಾದರೂ ಬಾಯ್ಬಿಟ್ರಾ ಎಂಬುದನ್ನು ವಿಚಾರಿಸಿದ್ದಾರೆ. ಸ್ಟೋನಿ ಬ್ರೂಕ್ ರೆಸ್ಟೊರೆಂಟ್ ಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...