Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸ್ಪಾಟ್ ನಲ್ಲೇ ಡೈಲಾಗ್ ಡೆಲಿವರಿ : ಚಿತ್ರದುರ್ಗದ ಗಗನ ಬಾರಿ ಟ್ಯಾಲೆಂಟ್ ಗೆ ವೇದಿಕೆಯಲ್ಲೇ ಅಡ್ವಾನ್ಸ್ ನೀಡಿದ ತರುಣ್ ಸುಧೀರ್

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.08 : ಜೀ ಕನ್ನಡದಲ್ಲಿ ಕಳೆದ ವಾರದಿಂದ ಮಹಾನಟಿ ರಿಯಾಲಿಟಿ ಶೋ ಶುರುವಾಗಿದೆ. ಒಳ್ಳೆಯ ಪ್ರತಿಭೆಗಳನ್ನೇ ಆಯ್ಕೆ ಮಾಡಿ, ಈ ಶೋ ನಡೆಸಲಾಗುತ್ತಿದೆ. ನಾನಾ ಜಿಲ್ಲೆಯಿಂದ ಫೈನಲಿಸ್ಟ್ ಗಳು ತಮ್ಮ ನಟನಾ ಕೌಶಲ್ಯ ತೋರಿಸುತ್ತಿದ್ದಾರೆ. ರಮೇಶ್ ಅರವಿಂದ್, ಪ್ರೇಮಾ, ತರುಣ್ ಸುದೀರ್, ನಿಶ್ವಿಕಾ ನಾಯ್ಡು ತೀರ್ಪುಗಾರರಾಗಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಮೊಳಕಾಳ್ಮೂರು ತಾಲ್ಲೂಕಿನ ಬಿ.ಜಿ.ಕೆರೆ ಗ್ರಾಮದ ಗಗನ ಬಾರಿ ಎಂಬ ಕಲಾವಿದೆ ಬಂದಿದ್ದಾರೆ. ಅವರಿಗೆ ರಮೇಶ್ ಅರವಿಂದ್ ಅವರು ಅಂಬಾನಿ ಮದುವೆಯಲ್ಲಿದ್ದೀನಿ, ಅಲ್ಲಿನ ವಾತಾವರಣವನ್ನು ವಿವರಿಸಿ ಎಂದು ಹೇಳಿದ್ದಾರೆ. ಈಗ ಗಗನ ಬಾರಿ ಆ ಕ್ಷಣದಲ್ಲಿಯೇ ಎಲ್ಲವನ್ನು ಊಹೆ ಮಾಡಿಕೊಳ್ಳಬೇಕು. ಊಹೆ ಮಾಡಿಕೊಂಡು ಜಡ್ಜಸ್ ಗಳು ನೀಡಿದ ಸಮಯಕ್ಕೆ ಸರಿಯಾಗಿ ಆ ಸ್ಕಿಟ್ ಅನ್ನು ಮುಗಿಸಬೇಕು. ಅವರೇ ಸ್ಕ್ರಿಪ್ಟ್ ರೈಟರ್, ಅವರೇ ನಟನಾ ಮಾಸ್ಟರ್, ಅವರೇ ಡೈಲಾಗ್ ರೈಟರ್ ಕೂಡ ಆಗಿರುತ್ತಾರೆ. ಯೋಚನೆ ಮಾಡುವುದಕ್ಕೂ ಹೆಚ್ಚಿನ ಸಮಯವೇನು ಇರುವುದಿಲ್ಲ. ಅವರ ಪ್ರತಿಭೆ, ಟೈಮ್ ಸೆನ್ಸ್ ಕೂಡ ಇದರಲ್ಲಿ ಚೆಕ್ ಮಾಡಿದಂತೆ ಆಗುತ್ತದೆ. ಆದರೆ ಜಡ್ಜಸ್ ಗಳ ನಿರೀಕ್ಷೆ ಮೀರಿ ಅಭಿನಯಿಸುತ್ತಿದ್ದಾರೆ.

 

ರಮೇಶ್ ಅರವಿಂದ್ ಅವರು ಗಗನ ಬಾರಿಗೆ ಅಂಬಾನಿ ಮದುವೆಯಲ್ಲಿನ ವಾತಾವರಣವನ್ನು ವಿವರಿಸುವಂತೆ ಹೇಳಿದಾಗ, ‘ಅಂಬಾನಿ ಮಗನ ಮದುವೆಗೆ ಬಂದಿದ್ದೀನಿ ಕಣೇ. ಅಮಿರ್ ಖಾನ್, ಶಾರುಖ್ ಖಾನ್ ಬ್ಯಾಗ್ರೌಂಡ್ ಡ್ಯಾನ್ಸರ್ಸ್ ಹ, ಜಾಹ್ನವಿ ಕಪೂರ್ ನ ಹೋಗೋ ಬರೋರಿಗೆಲ್ಲಾ ಹೂ ಹಾಕೋಕೆ ನಿಲ್ಸವ್ರೆ’ ಅಂತ ತಮ್ಮದೇ ಸ್ಟೈಲ್ ನಲ್ಲಿ ಫುಲ್ ಜೋಶ್ ಆಗಿ ಹೇಳಿದ್ದಾರೆ. ಇದನ್ನು ಕೇಳುತ್ತಿದ್ದಂತೆ ಪ್ರೇಮಾ, ರಮೇಶ್ ಅರವಿಂದ್ ನಕ್ಕು ಎಂಜಾಯ್ ಮಾಡಿದ್ದಾರೆ.

ಸ್ಪಾಟ್ ನಲ್ಲೇ‌ ಡೈಲಾಗ್ ಬರೆದುಕೊಳ್ಳುವುದು ಅಂದ್ರೆ ಸುಮ್ನೆ ಅಲ್ಲ. ಇದು ತರುಣ್ ಸುಧೀರ್ ಅವರನ್ನು ಇಂಪ್ರೆಸ್ ಮಾಡಿದೆ. ಗಗನಾ ಬಾರಿ ಡೈಲಾಗ್ ಗೆ ಫಿದಾ ಆಗಿದ್ದಾರೆ. ವೇದಿಕೆ ಮೇಲೆ ಬಂದು ರೈಟರ್ ಆಗಿ ನೀನು ಸಿನಿಮಾ ಇಂಡಸ್ಟ್ರಿಗೆ ಬಾರಮ್ಮ. ಯಾವಾಗ ಬೇಕಾದರೂ ಬಾ ಅಂತ ಹೇಳಿ ಅಡ್ವಾನ್ಸ್ ಹಣವನ್ನು ನೀಡಿದ್ದಾರೆ. ಆ ಅಡ್ವಾನ್ಸ್ ತೆಗೆದುಕೊಂಡ ಗಗನ ಬಾರಿ, ಈ ಹಣ ನಂಗೆ ಐದು ಕೋಟಿಗೆ ಸಮ ಎಂದು ಕಣ್ಣೀರು ಹಾಕಿದ್ದಾರೆ. ಇದನ್ನು ನೋಡಿದ ಚಿತ್ರದುರ್ಗದ ನೆಟ್ಟಿಗರೊಬ್ಬರು ನಮ್ಮ ದುರ್ಗದ ಹುಡುಗಿ ಅಂದ್ರೆ ಸುಮ್ನೇನಾ ಅಂತ ಕಮೆಂಟ್ ಹಾಕುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

error: Content is protected !!