ಬೆಳಗಾವಿಯಲ್ಲಿ ಕಲುಷಿತ ನೀರು ಕುಡಿದು 94 ಜನ ಅಸ್ವಸ್ಥ.. ಒಂದು ಸಾವು.. 10 ಲಕ್ಷ ಪರಿಹಾರ ಘೋಷಣೆ..!

suddionenews
1 Min Read

ಬೆಳಗಾವಿ: ಜಿಲ್ಲೆಯ ಮುದೇನೂರು ಗ್ರಾಮದಲ್ಲಿನ ಕುಡಿಯುವ ನೀರಿನ ಪೈಪ್ ಒಡೆದು, ಅದಕ್ಕೆ ಚರಂಡಿ ನೀರು ಸೇರ್ಪಡೆಯಾಗಿದೆ. ಈ ನೀರನ್ನು ಕುಡಿದ ಊರಿನ ಮಂದಿ ಅಸ್ವಸ್ಥರಾಗಿದ್ದಾರೆ. ಒಬ್ಬ ವ್ಯಕ್ತಿ ಇದರಿಂದಾಗಿ ಮೃತಪಟ್ಟಿರುವ ಘಟನೆ ನಡೆದಿದೆ.

ವರ್ಷದ ಶಿವಪ್ಪ ಎಂಬಾತ ಕಲುಷಿತ ನೀರು ಕುಡಿದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರ ಕುಟುಂಬಕ್ಕೆ ಸರ್ಕಾರ ಪರಿಹಾರ ಘೋಷಣೆ ಮಾಡಿದೆ. ಶಿವಪ್ಪ ಕುಟುಂಬಕ್ಕೆ 10 ಲಕ್ಷ ರೂಪಾಯಿ ಹಣ ನೀಡಿದೆ. ಇನ್ನು ಕೇವಲ 4 ದಿನಗಳ ಅಂತರದಲ್ಲಿ 94 ಜನರು ಅಸ್ವಸ್ಥರಾಗಿದ್ದಾರೆ. 44 ಪುರುಷರು, 30 ಮಹಿಳೆಯರು, 12 ಬಾಲಕರು ಹಾಗೂ 8 ಬಾಲಕಿಯರು ಸೇರಿದಂತೆ 94 ಜನ ಅಸ್ವಸ್ಥರಾಗಿದ್ದಾರೆ.

ಆಸ್ಪತ್ರೆಗೆ ದಾಖಲಾದ ಬಹುತೇಕರಲ್ಲಿ ವಾಂತಿ, ಬೇಧಿ ಸಮಸ್ಯೆ ಕಾಡಿದೆ. ಪರಿಸ್ಥಿತಿ ಗಂಭೀರವಾದವರನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಲ್ಲಿನ ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ. ಇನ್ನು ಮೃತ ಶಿವಪ್ಪ ಕುಟುಂಬಕ್ಕೆ ಸರ್ಕಾರ 10 ಲಕ್ಷ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದೆ.

Share This Article
Leave a Comment

Leave a Reply

Your email address will not be published. Required fields are marked *