Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾಡುವ ಕೆಲಸವನ್ನು ಶ್ರದ್ದೆಯಿಂದ ಮಾಡಿದರೆ ನೂರರಷ್ಟು ಪ್ರಗತಿ ಸಾಧ್ಯ : ಅರುಣ್‍ಕುಮಾರ್

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಜ. 18 : ನಾವು ಮಾಡುವ ಕೆಲಸವನ್ನು ಶ್ರದ್ದೆಯಿಂದ ಮಾಡಿದಾಗ ನೂರರಷ್ಟು ಪ್ರಗತಿಯನ್ನು ಸಾಧಿಸಬಹುದಾಗಿದೆ ಎಂದು ಅಹೋಬಲ ಟಿ.ವಿ.ಎಸ್ ಹಾಗೂ ಅಹೋಬಲ ಸ್ಟೀಲ್ಸ್ ಮತ್ತು ಸಿಮೆಂಟ್ಸ್ ಮ್ಯಾನೇಜಿಂಗ್ ಡೈರೆಕ್ಟರ್ ಅರುಣ್‍ಕುಮಾರ್ ಪಿ.ವಿ ತಿಳಿಸಿದರು.

ಭಾರತ ಸರ್ಕಾರ, ನೆಹರು ಯುವ ಕೇಂದ್ರ ಚಿತ್ರದುರ್ಗ ಮತ್ತು ಮದಕರಿ ಯುವಕ ಸಂಘ (ರಿ) ಚಿತ್ರದುರ್ಗ ಇವುಗಳ ಸಂಯುಕ್ತಾಶ್ರಯದಲ್ಲಿ ಬಸವೇಶ್ವರ ಟಾಕೀಸ್ ರಸ್ತೆಯ ಸಿಲಿಕಾನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದ್ದ, ರಾಷ್ಟ್ರೀಯ ಯುವ ದಿನಾಚರಣೆ ಹಾಗೂ ಯುವ ಸಪ್ತಾಹ ಮತ್ತು ಕೌಶಲ್ಯ ಅಭೀವೃಧ್ದಿ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇಂದಿನ  ದಿನಮಾನದಲ್ಲಿ ಕಂಪ್ಯೂಟರ ಜ್ಞಾನ ಅತಿ ಅಗತ್ಯವಾಗಿದೆ ಎಲ್ಲಿ ಹೋದರು ಸಹಾ ಕಂಪ್ಯೂಟರ್ ಬಗ್ಗೆ ಕೇಳುತ್ತಾರೆ ಆದ್ದರಿಂದ ಕಂಪ್ಯೂಟರ್ ಬಗ್ಗೆ ತಿಳಿಯುವುದು ಅಗತ್ಯವಾಗಿದೆ. ಇದರೊಂದಿಗೆ ಬರೀ ಕಂಪ್ಯೂಟರ್ ಬಗ್ಗೆ ತಿಳಿಯುವುದು ಮಾತ್ರವಲ್ಲದೆ ಅದಕ್ಕಿಂತ ಹೆಚ್ಚಾಗಿ ಜಾವ ಸೇರಿದಂತೆ ಇತರೆ ವಿಷಯಗಳ ಬಗ್ಗೆ ತಿಳಿಯುವ ಪ್ರಯತ್ನವನ್ನು ಮಾಡಿ ಇದರಿಂದ ನಿಮ್ಮ ಬದುಕಿಗೆ ಮುಂದೆ ಉಪಯೋಗವಾಗುತ್ತದೆ ಎಂದು ಕಿವಿ ಮಾತು ಹೇಳಿದರು.

ಭಾರತ ಸರ್ಕಾರದ ನೆಹರು ಯುವ ಕೇಂದ್ರದ ಜಿಲ್ಲಾ ಯವಜನ ಅಧಿಕಾರಿಗಳು ಸುಹಾಸ್ ಎನ್ ಮಾತನಾಡಿ, ವಿವೇಕಾನಂದರಂತೆ ಎಲ್ಲಾ ಯುವ ಜನತೆಯೂ ಸಹಾ ದೇಶದ ಬಗ್ಗೆ ಅಭೀಮಾನವನ್ನು ಬೆಳಸಿಕೊಳ್ಳಬೇಕಿದೆ. ವಿವೇಕಾನಂದರು ದೇಶದ ಬಗ್ಗೆ ಆಪಾರವಾದ ಕಾಳಜಿಯನ್ನು ಹೊಂದಿದ್ದರು, ಅಷ್ಟೇ ಪ್ರಮಾಣದಲ್ಲಿ ದೇಶಕ್ಕೆ ಕೊಡುಗೆಯನ್ನು ಸಹಾ ನೀಡಿದ್ದಾರೆ. ಚಲನಚಿತ್ರ ನಟರನ್ನು ಮಾದರಿಯನ್ನಾಗಿ ಇಟ್ಟುಕೊಳ್ಳುವುದಕ್ಕಿಂತ ಸ್ವಾಮಿ ವಿವೇಕಾನಂದರನ್ನು ಮಾದರಿಯನ್ನಾಗ ಇಟ್ಟುಕೊಳ್ಳಿ ಇವರ ಜನ್ಮ ದಿನದ ಅಂಗವಾಗಿ ಜ. 12 ರಿಂದ 19ರವರೆಗೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ನಮ್ಮ ನೆಹರು ಯುವ ಕೇಂದ್ರದಿಂದ ಹಮ್ಮಿಕೊಳ್ಳಲಾಗುತ್ತದೆ. ಇದರ ಪ್ರಯೋಜನವನ್ನು ಪಡೆಯಬೇಕಿದೆ ಎಂದರು.

ಇಂದಿನ  ದಿನಮಾನದಲ್ಲಿ ಶಿಕ್ಷಣದ ಜೊತೆಗೆ ಯಾವುದಾದರೂ ಕೌಶಲ್ಯ ಹೊಂದಿರುವುದು ಅಗತ್ಯವಾಗಿದೆ, ಕೌಶಳ್ಯ ಇಲ್ಲದಿದ್ದರೆ ಏನು ಪ್ರಯೋಜನವಾಗುವುದಿಲ್ಲ, ನಿಮ್ಮಲ್ಲಿ ಕೌಶಲ್ಯ ಇದ್ದರೆ ಬೇರೆಯವರು ಕರೆದು ಕೆಲಸವನ್ನು ನೀಡುತ್ತಾರೆ. ನಮ್ಮಲ್ಲಿ ಲಕ್ಷಾಂತರ ಮಂದಿ ವಿದ್ಯಾವಂತರಿದ್ದಾರೆ ಆದರೆ ಕೌಶಲ್ಯವನ್ನು ಹೊಂದಿರುವವರ ಸಂಖ್ಯೆ ಕಡಿಮೆ ಇದೆ ಇದರಿಂದ ನಿರುದ್ಯೋಗ ತಾಂಡವಾಡುತ್ತಿದೆ, ಆದರೆ  ಕೌಶಲ್ಯವನ್ನು ಹೊಂದಿರುವ ಯಾವ ವ್ಯಕ್ತಿಯೂ ಸಹಾ ನಿರುದ್ಯೋಗಿಯಾಗಿರುವುದಿಲ್ಲ ಆತ ಸ್ವಯಂ ಉದ್ಯೋಗಿಯಾಗಿ ಬೇರೆಯವರಿಗೆ ಕೆಲಸವನ್ನು ನೀಡುವಂತನಾಗಿರುತ್ತಾನೆ ಎಂದು ಸುಹಾಸ್ ತಿಳಿಸಿದರು.

ಕಂಪ್ಯೂಟರ್ ತರಬೇತಿದಾರರಾದ ಜಾವಿದ್ ಉಪನ್ಯಾಸ ನೀಡುತ್ತಾ, ಯುವ ಜನತೆಯಲ್ಲಿ ಇರುವ ಕೌಶಲ್ಯವನ್ನು ಹೊರ ತೆಗೆಯುವ ಕಾರ್ಯವನ್ನು ಕೇಂದ್ರ ಸರ್ಕಾರ ಕೌಶಲ್ಯ ತರಬೇತಿಯನ್ನು ನೀಡುವುದರ ಮೂಲಕ ಮಾಡುತ್ತಿದೆ. ಕೌಶಲ್ಯತೆ ನಿರುದ್ಯೋಗವನ್ನು ದೂರ ಮಾಡುತ್ತದೆ, ಬದುಕನ್ನು ರೂಪಿಸಿಕೊಂಡುತ್ತದೆ. ಯುವ ಜನತೆ ತಮ್ಮಲ್ಲಿನ ಕೌಶಲ್ಯತೆಯನ್ನು ಹೆಚ್ಚಿಗೆ ಮಾಡಿಕೊಳ್ಳಬೇಕಿದೆ, ಇದಕ್ಕಾಗಿ ಇರುವ ತರಬೇತಿಗಳನ್ನು ಪಡೆಯುವಂತೆ ಮನವಿ ಮಾಡಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ಸಿಲಿಕಾನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಂಸ್ಥಾಪಕರಾದ ಡಿ ಗೋಪಾಲಸ್ವಾಮಿ ನಾಯಕ ಮಾತನಾಡಿ, ನಿಮ್ಮಲ್ಲಿನ ಕೌಶಲ್ಯವನ್ನು ಅಭೀವೃದ್ದಿ ಪಡಿಸಿಕೊಂಡು ಕೆಲಸವನ್ನು ಪಡೆಯಿರಿ, ಇದೇ ರೀತಿ ಕೌಶಲ್ಯವನ್ನು ಕಾಲ ಕಾಲಕ್ಕೆ ತಕ್ಕಂತೆ ಅಭೀವೃದ್ದಿಯನ್ನು ಮಾಡಿಕೊಳ್ಳಬೇಕು, ಸರ್ಕಾರಿ ಕೆಲಸಕ್ಕೆ ಪ್ರಯತ್ನಿಸಿ ಸಾಧ್ಯವಾಗದಿದ್ದರೆ ನಿಮ್ಮಕೌಶಲ್ಯದಿಂದ ಸ್ವಯಂ ಆಗಿ ಕೆಲಸವನ್ನು ಪ್ರಾರಂಭ ಮಾಡಿ ಬೇರೆಯವರಿಗೆ ಕೆಲಸವನ್ನು ನೀಡಿ ಎಂದು ಕರೆ ನೀಡಿದರು.

ಮದಕರಿ ಯುವಕ ಸಂಘದ ಅಧ್ಯಕ್ಷರಾದ ಕೆ ಸೋಮಶೇಖರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!