Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಸಿದ್ದರಾಮಯ್ಯರ ವಿರುದ್ಧ ಧಿಕ್ಕಾರ ಕೂಗಿದವರಿಗೆ ಒಂದು ಲಕ್ಷ ಬಹುಮಾನ : ತುಮಕೂರು ಶಾಸಕ ಸುರೇಶ್ ಗೌಡ..!

---Advertisement---

 

ತುಮಕೂರು: ಸಿಎಂ ಸಿದ್ದರಾಮಯ್ಯ ಅವರು ನಾನಾ ಅಭಿವೃದ್ಧಿಗಳಿಗೆ ಚಾಲನೆ ನೀಡುವುದಕ್ಕೆ ಡಿಸೆಂಬರ್2 ರಂದು ತುಮಕೂರಿಗೆ ಬರ್ತಾ ಇದಾರೆ. ಈ ವೇಳೆ ಅವರ ವಿರುದ್ಧ ಧಿಕ್ಕಾರ ಕೂಗುವುದಕ್ಕೆ ಬಿಜೆಪಿ ಶಾಸಕ ಬಿ.ಸುರೇಶ್ ಗೌಡ ಅವರು ಜನ ರೆಡಿ ಮಾಡಿದ್ದಾರೆ. ಇಂಥದ್ದೊಂದು ಆರೋಪದ ಆಡೊಯೋ ಎಲ್ಲೆಡೆ ವೈರಲ್ ಆಗಿದೆ. ಮಾಜಿ ಶಾಸಕರಾದ ಗೌರಿ ಶಂಕರ್ ಈ ಆಡಿಯೋ ರಿಲೀಸ್ ಮಾಡಿದ್ದಾರೆ.

ಸುರೇಶ್ ಗೌಡರದ್ದೇ ಎನ್ನಲಾದ ಈ ಆಡಿಯೋದಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ಧಿಕ್ಕಾರ ಕೂಗಿದರೆ ಅವರಿಗೆ ಒಂದು ಲಕ್ಷ ರೂಪಾಯಿ ಬಹುಮಾನ ಕೊಡುವುದಾಗಿ ಆ ಆಡಿಯೋದಲ್ಲಿ ಹೇಳಿದ್ದಾರೆ. ಅಷ್ಟೇ ಅಲ್ಲ ಬಸ್ ನಲ್ಲಿ ಜನ ಹೋಗಬೇಕು, ಸಿದ್ದರಾಮಯ್ಯ ಮುಂದೆ ಕಪ್ಪು ಬಾವುಟ ಪ್ರದರ್ಶನ ಮಾಡಬೇಕು. ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿ ಎಂದು ಪ್ತಚೋದನೆ ನೀಡರುವುದು ಆ ಆಡಿಯೋದಲ್ಲಿ ಕೇಳಿಸುತ್ತಾ ಇದೆ. ಈ ಆಡಿಯೋ ಇದೀಗ ಕಾಂಗ್ರೆಸ್ ನಾಯಕರನ್ನು ಕೆರಳಿಸಿದೆ.

ಕಾಂಗ್ರೆಸ್ ನಾಯಕ ಗೌರಿ ಶಂಕರ್ ಇಂದು ಸುದ್ದಿಗೋಷ್ಟಿ ನಡೆಸಿ, ಈ ಆಡಿಯೋವನ್ನು ಕೇಳಿಸಿದ್ದಾರೆ. ಶಾಸಕ ಸುರೇಶ್ ಗೌಡ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಸಿಎಂ ಬಂದಾಗ ಪ್ರತಿಭಟನೆ ನಡೆಸುವಂತೆ ಎತ್ತಿ ಕಟ್ಟುತ್ತಿದ್ದಾರೆ. ಆರ್ ಎಸ್ ಎಸ್ ಇದೇನಾ ಹೇಳಿಕೊಟ್ಟಿರುವುದು..? ಅವರ ವಿರುದ್ಧ ಎಫ್ಐಆರ್ ದಾಖಲಿಸಬೇಕು, ತನಿಖೆ ನಡೆಯಬೇಕು. ಪ್ರತಿಭಟನೆ ಮಾಡಲಿ ಅದು ಎಲ್ಲರ ಹಕ್ಕು. ಆದರೆ ಪ್ರತಿಭಟನೆ ಮಾಡುವುದಕ್ಕೇನೆ ಹಣ ನೀಡುವುದು ದೊಡ್ಡ ತಪ್ಪು ಎಂದು ಗೌರಿ ಶಂಕರ್ ಕಿಡಿಕಾರಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...