Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸೋಮಣ್ಣ ಕೊಟ್ಟ ಆ ಒಂದು ಹೇಳಿಕೆಯಿಂದ ವಿಪಕ್ಷದವರಿಂದಲೂ ಚಾಟಿ..ಸ್ವಪಕ್ಷದವರಿಂದಲೂ ಕ್ಲಾಸ್..!

Facebook
Twitter
Telegram
WhatsApp

ಬೆಂಗಳೂರು: ಸಿಂಧಗಿ ಹಾಗೂ ಹಾನಗಲ್ ಉಪಚುನಾವಣೆ ಗೆಲ್ಲೋದು ಸದ್ಯ ಎಲ್ಲಾ ಪಕ್ಷಗಳಿಗೂ ಮುಖ್ಯವಾಗಿದೆ. ಹೀಗಾಗಿಯೇ ಮೂರು ಪಕ್ಷಗಳು ಗೆಲುವಿಗಾಗಿ ಕಸರತ್ತು ನಡೆಸುತ್ತಿವೆ. ಭರವಸೆಗಳನ್ನ ನೀಡ್ತೀವೆ, ವಿರೋಧ ಪಕ್ಷದವರ ಮೇಲೆ ವಾಗ್ದಾಳಿ ನಡೆಸುತ್ತಿವೆ. ಹಲವು ರೀತಿಯ ಹೇಳಿಕೆಗಳನ್ನು ನೀಡ್ತಿದ್ದಾರೆ. ಚುನಾವಣೆಗಾಗಿ ವಿ ಸೋಮಣ್ಣ ನೀಡಿದ ಆ ಒಂದು ಹೇಳಿಕೆ ಮುಜುಗರಕ್ಕೊಳಗಾಗಿದೆ.

ಎರಡು ಕ್ಷೇತ್ರದ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯಗೊಂಡಿದೆ. ನಾಳೆ ಮತದಾನ ನಡೆಯಲಿದೆ. ಯಾರಿಗೆ ವಿಜಯ ಲಭಿಸಲಿದೆ.. ಯಾರ ಕಡೆ ಮತದಾರನ ಒಲವು ಇದೆ ಅನ್ನೋದು ಆ ಬಳಿಕ ತಿಳಿಯಲಿದೆ. ಈ ಬೆನ್ನಲ್ಲೆ ವಿ ಸೋಮಣ್ಣ ಕಡೆ ಗಳಿಗೆಯಲ್ಲಿ ಹೇಳಿಕೆಯೊಂದನ್ನ ನೀಡಿದ್ದಾರೆ. ಆ ಹೇಳಿಕೆ ವಿರೋಧ ಪಕ್ಷದವರಿಗೆ ಆಹಾರವಾಗಿದ್ದಲ್ಲದೆ, ಸ್ವಪಕ್ಷದವರಿಗೂ ಮುಜುಗರಕ್ಕೀಡು ಮಾಡಿದೆ.

ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡೋ ಭರದಲ್ಲಿ ಸಚಿವ ವಿ ಸೋಮಣ್ಣನವರು, ನಾಳೆಯಿಂದ ನಮ್ಮ ಆಟ ಶುರುವಾಗಲಿದೆ ಎಂದಿದ್ದಾರೆ. ಈ ಹೇಳಿಕೆಗೆ ಕುಮಾರಸ್ವಾಮಿ ಕಾಲೆಳೆದಿದ್ದು, ಏನು ನಾಳೆಯಿಂದ ಹಣ ಹಂಚಿಕೆಯ ಆಟವಾ ಎಂದಿದ್ದಾರೆ.

ಅತ್ತ ಸ್ವ ಪಕ್ಷದವರು ಸೋಮಣ್ಣ ನವರಿಗೆ ಕ್ಲಾಸ್ ತೆಗೆದುಕೊಂಡಿದ್ದು, ಅಭಿವೃದ್ಧಿ ಹೆಸರಲ್ಲಿ ಮತ ಕೇಳಿ ಅಂದ್ರೆ ಏನಿದು ಆಟದ ವಿಚಾರ. ಕಡೆ ಕ್ಷಣದಲ್ಲಿ ಇದೆಂಥಾ ಹೇಳಿಕೆ ನೀಡಿದ್ದೀರಿ. ಕಾಂಗ್ರೆಸ್ ನಾಯಕರಿಗೂ ನಿಮಗೂ ಏನು ವ್ಯತ್ಯಾಸವಿದೆ ಎಂದು ಬೇಸರಪಟ್ಟುಕೊಂಡಿದ್ದಾರೆ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆ | ರೈತ ಆತ್ಮಹತ್ಯೆ

ಸುದ್ದಿಒನ್, ಚಳ್ಳಕೆರೆ, ಮೇ. 12 : ತಾಲೂಕಿನ ಬಾಲೇನಹಳ್ಳಿ ಗ್ರಾಮದ ಮೋಹನ್ ಕುಮಾರ್(36) ಎಂಬ ರೈತ ಬೆಳಗಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ಭಾನುವಾರ ಬೆಳಗಿನ ಜಾವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ

ಹೊಸದುರ್ಗ | ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲ್,‌ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

  ಸುದ್ದಿಒನ್, ಚಿತ್ರದುರ್ಗ, ಮೇ. 12  : ಇತ್ತಿಚೀಗಷ್ಟೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಜಿಲ್ಲೆ 21ನೇ ಸ್ಥಾನ ಪಡೆದುಕೊಂಡಿದೆ. ಇತ್ತ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ

ಖ್ಯಾತ ಕಿರುತೆರೆ ನಟಿ ಪವಿತ್ರಾ ಜಯರಾಮ್ ಅಪಘಾತದಲ್ಲಿ ಸಾವು…!

ಬೆಂಗಳೂರು : ಇಂದು ತಾಯಂದಿರ ದಿನ. ಎಲ್ಲರೂ ತಮ್ಮ ತಾಯಂದಿರ ಫೋಟೋ ಹಾಕಿಕೊಂಡು ವಿಶ್ ಮಾಡುತ್ತಿದ್ದಾರೆ. ತಾಯಂದಿರಿಗೆ ಗಿಫ್ಟ್ ಕೊಟ್ಟು ಸಂಭ್ರಮಿಸುತ್ತಿದ್ದಾರೆ. ಆದರೆ ಈ ನಟಿಯ ಮಕ್ಕಳಿಗೆ ಆ ಯೋಗ ಇಲ್ಲ. ಅಮ್ಮನನ್ನು ತಬ್ಬಿ

error: Content is protected !!