Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಶ್ಲೀಲ ವಿಡಿಯೋ ಪ್ರಕರಣ : ಸತ್ಯ ಗೊತ್ತಿಲ್ಲದವರು ಬಾಯಿ ಮುಚ್ಚಿಕೊಂಡಿರಿ ಎಂದ ರಾಜ್ ಕುಂದ್ರಾ..!

Facebook
Twitter
Telegram
WhatsApp

ಅಶ್ಲೀಲ ವಿಡಿಯೋ ಪ್ರಕರಣ : ಸತ್ಯ ಗೊತ್ತಿಲ್ಲದವರು ಬಾಯಿ ಮುಚ್ಚಿಕೊಂಡಿರಿ ಎಂದ ರಾಜ್ ಕುಂದ್ರಾ..!

ಮುಂಬೈ ಬೆಡಗಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ವಿಚಾರ ಎಲ್ಲರಿಗೂ ಗೊತ್ತಿರುವಂತ ವಿಚಾರವೇ ಸರಿ. ಅಶ್ಲೀಲ ವಿಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಒಂದಷ್ಟು ದಿನ ಜೈಲಿನಲ್ಲಿ ಇದ್ದು ಬಂದವರು. ಜಾಮೀನಿನ ಮೇಲೆ ಬಿಡುಗಡೆಯಾಗಿ ಒಂದು ವರ್ಷವಾಗಿದೆ. ಆದರೆ ರಾಜ್ ಕುಂದ್ರಾ ಇಲ್ಲಿಯ ತನಕ ಹೆಚ್ಚು ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿರಲಿಲ್ಲ. ಈ ಬಗ್ಗೆ ಓಪನ್ ಆಗಿ ಮಾತನಾಡಿದ್ದೇ ಇಲ್ಲ. ಆದರೆ ಇದೀಗ ಆ ವಿಚಾರದಲ್ಲಿ ಮೌನಮುರಿದು, ಕೇಳಿದವರಿಗೆ ಖಾರವಾಗಿ ಉತ್ತರಿಸಿದ್ದಾರೆ.

ರಾಜ್ ಕುಂದ್ರಾ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು, ಅದರಲ್ಲಿ ಮುಖ ಮುಚ್ಚಿಕೊಂಡಿರುವ ಫೋಟೋ ಹಂಚಿಕೊಂಡಿದ್ದಾರೆ. ಅದಕ್ಕೆ ಅಸಲಿ ಕಥೆ ಗೊತ್ತಿಲ್ಲದೆ ಇರುವವರು ಬಾಯಿ ಮುಚ್ಚಿಕೊಂಡು ಇರಿ. ಆರ್ಥರ್ ರಸ್ತೆಯ ಜೈಲಿನಿಂದ ಹೊರಬಂದು ಒಂದು ವರ್ಷ. ಕಾಲ ಬಂದಾಗ ಎಲ್ಲದಕ್ಕೂ ನ್ಯಾಯ ಸಿಗಲಿದೆ. ಶೀಘ್ರವೇ ಸತ್ಯ ಹೊರಬೀಳಲಿದೆ. ಒಳ್ಳೆಯದ್ದನ್ನು ಬಯಸಿದವರಿಗೂ ನನ್ನಿಂದ ಧನ್ಯವಾದಗಳು, ಟ್ರೋಲ್ ಮಾಡಿದವರಿಗೂ ಧನ್ಯವಾದ. ಯಾಕೆಂದರೆ ಅವರಿಂದ ನಾನು ಇನ್ನಷ್ಟು ಗಟ್ಟಿಯಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಇನ್ನು ರಾಜ್ ಕುಂದ್ರಾ ಜೈಲಿಗೆ ಹೋದಾಗ ಶಿಲ್ಪಾ ಶೆಟ್ಟಿ ಸಾಕಷ್ಟು ಮುಜುಗರಕ್ಕೊಳಗಾಗಿದ್ದರು. ಸಿಕ್ಕಾಪಟ್ಟೆ ಟ್ರೋಲ್ ಗೆ ಒಳಗಾಗಿದ್ದರು. ಮನಸ್ಸು ನೊಂದಾಗ ಟ್ರೋಲಿಗರಿಗೆ ಖಡಕ್ ವಾರ್ನಿಂಗ್ ಕೂಡ ಮಾಡಿದ್ದರು. ಒಂದಷ್ಟು ದಿನ ಶಿಲ್ಪಾ ಶೆಟ್ಟಿ ಕೂಡ ಸಾರ್ವಜನಿಕ ಜೀವನದಿಂದ ದೂರವೇ ಸರಿದಿದ್ದರು. ಬಳಿಕ ದಿನಕಳೆದಂತೆ ತಮ್ಮ ಸಿನಿಮಾಗ ಕಡೆಗೆ ಗಮನ ಕೊಡಲು ಆರಂಭಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಮೃತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 29 :  ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ

ಚಿತ್ರದುರ್ಗ | ಕಣಿವೆಯಿಂದ ಠಾಣೆಗೆ ಬಂದ ಮಾರಮ್ಮನ ರೋಚಕ ಕಥೆ..!

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 29 :  ಚಿತ್ರದುರ್ಗ ನಗರ ಪೊಲೀಸ್ ಠಾಣೆ ಆವರಣದಲ್ಲಿ ಶ್ರೀ ಕಣಿವೆ ಮಾರಮ್ಮ ದೇವಿ ಆಸೀನಳಾಗಿ ಬಹು ವಿಜೃಂಭಣೆಯಿಂದ ರಾರಾಜಿಸುತ್ತಿದ್ದಾಳೆ, ತಾಯಿ. ಅಸಂಖ್ಯಾತ ಭಕ್ತಜನ ದಿನದಿನವೂ ಅರ್ಚನೆ, ಹರಕೆಗಳಿಂದ ಇದೀಗ

ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ!

ಈ ರಾಶಿ ಒಲ್ಲದ ಮನಸಿಗೆ ಮದುವೆ ಯೋಗ, ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ! ಶುಕ್ರವಾರ- ರಾಶಿ ಭವಿಷ್ಯ ಮಾರ್ಚ್-29,2024 ಸೂರ್ಯೋದಯ: 06:16, ಸೂರ್ಯಾಸ್ತ : 06:25 ಶಾಲಿವಾಹನ ಶಕೆ1944,

error: Content is protected !!