ಬೆಂಗಳೂರು: ಈರುಳ್ಳಿ ಬೆಲೆಯಲ್ಲಿ ದಿನೇ ದಿನೇ ಏರಿಕೆಯಾಗುತ್ತಲೇ ಇದೆ. ಇದು ಮನೆಯಲ್ಲಿ ಅಡುಗೆ ಮಾಡುವವರ ಪಾಲಿಗೆ, ಹೊಟೇಲ್ ಉದ್ಯಮಿಗಳಿಗೆ ಹೆಚ್ಚು ತಲೆ ನೋವಾಗಿದೆ. ಹೀಗೆ ದಿನನಿತ್ಯ ಬಲಸುವ ಪದಾರ್ಥಗಳು ಹೀಗೆ ಬೆಲೆ ಏರಿಕೆಯಾಗುತ್ತಲೇ ಇದ್ದರೆ ಜನಸಾಮಾನ್ಯರು ಬದುಕುವುದು ಹೇಗೆ ಎಂಬ ಪ್ರಶ್ನೆ ಎದುರಾಗಿದೆ. ಈಗ ಈರುಳ್ಳಿಯಂತು ದಿನೇ ದಿನೇ ಏರಿಕೆಯತ್ತಲೇ ಮುಖ ಮಾಡಿದೆ.
ದೆಹಲಿ, ಮುಂಬೈ ಸೇರಿ ಪ್ರಮುಖ ನಗರಗಳಲ್ಲಿ ಈರುಳ್ಳಿ ಬೆಲೆ ಜಾಸ್ತಿಯಾಗಿದೆ. ಬೆಂಗಳೂರಿನಲ್ಲಿಯೂ ಹೊರತಾಗಿಲ್ಲ. ಬೆಂಗಳೂರು ನಗರದಲ್ಲಿಯೂ ಈರುಳ್ಳಿ ಬೆಲೆ ಜಾಸ್ತಿಯಾಗಿದ್ದು, 40-50 ರೂಪಾಯಿಯಷ್ಟಿದ್ದ ಈರುಳ್ಳಿ ಬೆಲೆ ಈಗ 80-90 ರೂಪಾಯಿ ಆಗಿದೆ. ಈ ಬೆಲೆ ಏರಿಕೆ ಸಹಜವಾಗಿಯೇ ರೈತರ ಮೊಗದಲ್ಲಿ ಸಂತಸ ತಂದಿದೆ. ಆದರೆ ಗ್ರಾಹಕರಿಗೆ ಕಣ್ಣೀರು ತರಿಸಿದೆ.
ಈ ಸಮಯಕ್ಕೆ ಹೋಲಿಕೆ ಮಾಡಿಕೊಂಡರೆ ಸಾಮಾನ್ಯವಾಗಿ ಬೆಲೆ ಕಡಿಮೆಯಾಗಬೇಕಿತ್ತು. ಆದರೆ ಈಗ ನೋಡೊದರೆ ಬೆಲೆ ಗಗನ ಕುಸುಮವಾಗುತ್ತಲೆ ಇದೆ. ಕೆಜಿ ಈರುಳ್ಳಿಗೆ 80 ರೂಪಾಯಿ ಕೊಟ್ಟು ತೆಗೆದುಕೊಂಡರೆ ಮಿಡಲ್ ಕ್ಲಾಸ್ ಮಂದಿ ಬದುಕುವುದಾದರೂ ಹೇಗೆ..? ಕೆಜಿ ಈರುಳ್ಳಿ ಒಂದು ವಾರಗಳ ಕಾಲ ಬಳಕೆಗೆ ಬರುವುದು ಹೆಚ್ಚು. ಹೀಗಿರುವಾಗ ಬಡವರ ಬದುಕು ಹೇಗೆ ಸಾಗುತ್ತದೆ ಎಂಬ ಚಿಂತೆ ಹಲವರಿಗಾಗಿದೆ. ಹೆಚ್ಚು ಮಳೆಯಿಂದಾಗಿ ಈರುಳ್ಳಿ ಬೆಳೆಯೆಲ್ಲಾ ನಾಶವಾಗಿದೆ. ಈಗ ಏನು ಮಾರಾಟವಾಗುತ್ತಿದೆ ಇದೆಲ್ಲಾ ಹಳೆಯ ಸ್ಟಾಕ್ ಆಗಿದೆ. ಉತ್ತಮ ಗುಣಮಟ್ಟದ ಈರುಳ್ಳಿಗೆ ಒಳ್ಳೆಯ ಬೆಲೆಯೂ ಸಿಗುತ್ತಿದೆ. ಆಸರೆ ಕೊಂಡುಕೊಳ್ಳುವವರಿಗೇನೆ ಈರುಳ್ಳಿ ಕಣ್ಣೀರು ತರಿಸುತ್ತಿರುವುದು. ಆದಷ್ಟು ಬೇಗ ದಿನಬಳಕೆಯ ಸಾಮಾಗ್ರಿಗಳ ಮೇಲೆ ಬೆಲೆ ಹತೋಟಿಗೆ ಬಂದರೆ ಸಾಕು ಎನ್ನುತ್ತಿದ್ದಾರೆ ಗೃಹಿಣಿಯರು.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…