Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶೇ. 20 ರಷ್ಟು ನೀರು ಮಾತ್ರ ಭೂಮಿಯಲ್ಲಿದೆ :  ಎನ್.ಜೆ.ದೇವರಾಜರೆಡ್ಡಿ

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

 

ಸುದ್ದಿಒನ್,ಚಿತ್ರದುರ್ಗ, (ಆ.18) : ಶೇ. 80 ರಷ್ಟು ನೀರನ್ನು ಭೂಮಿಯಿಂದ ಹೊರ ತೆಗೆದಿದ್ದೇವೆ. ಇನ್ನು ಶೇ.20 ರಷ್ಟು ನೀರು ಮಾತ್ರ ಭೂಮಿಯಲ್ಲಿದೆ ಎಂದು ಅಂತರ್ಜಲ ಹಾಗೂ ಮಳೆ ನೀರು ಕೊಯ್ಲು ತಜ್ಞ ಎನ್.ಜೆ.ದೇವರಾಜರೆಡ್ಡಿ ತಿಳಿಸಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಮೆದೇಹಳ್ಳಿ ರಸ್ತೆಯಲ್ಲಿರುವ ವೈ.ಆರ್.ಆದಿಶೇಷ ರೋಟರಿ ಬಾಲಭವನದಲ್ಲಿ ಶುಕ್ರವಾರ ನಡೆದ ಕೆರೆ ಸಮಿತಿ ಪದಾಧಿಕಾರಿಗಳ ಪ್ರೇರಣಾ ಸಭೆ ಉದ್ಘಾಟಿಸಿ ಮಾತನಾಡಿದರು.

ರೈತರ ಜೀವಾಳ ಕೆರೆಗಳ ಹೂಳು ತೆಗೆಸುವ ಕಾರ್ಯವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗಡೆರವರ ಮಾರ್ಗದರ್ಶನದಂತೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಾಡಿಕೊಂಡು ಬರುತ್ತಿರುವುದು ಅತ್ಯಂತ ಪವಿತ್ರವಾದುದು.

ಇದರಿಂದ ಮಳೆ ನೀರು ಸಂಗ್ರಹವಾಗುವುದಲ್ಲದೆ ಸುತ್ತಮುತ್ತಲಿನ ಹೊಲಗಳಿಗೆ ಫಲವಾತ್ತಾದ ಮಣ್ಣು ಕೂಡ ಸಿಕ್ಕಂತಾಗುತ್ತದೆ. ಆರು ನೂರಕ್ಕೂ ಹೆಚ್ಚು ಕೆರೆಗಳ ಹೂಳು ತೆಗೆಸಿ ಮುಂದಿನ ಪೀಳಿಗೆಗೆ ಜಲ ಸಂಗ್ರಹಿಸುವ ಕೆಲಸ ಮಾಡುತ್ತಿರುವ ಶ್ರೀಕ್ಷೆತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಜೊತೆ ವಿವಿಧ ಸಂಘ ಸಂಸ್ಥೆಗಳು ಹಾಗೂ ರೈತರ ಸಹಭಾಗಿತ್ವ ಅಗತ್ಯ ಎಂದು ಹೇಳಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕೆರೆ/ಶುದ್ದಗಂಗಾ ವಿಭಾಗ ಕೇಂದ್ರ ಕಚೇರಿಯ ನಿರ್ದೇಶಕ ಶಿವಾನಂದ ಆಚಾರ್ಯ ಮಾತನಾಡಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗಡೆರವರ ಮಾರ್ಗದರ್ಶನದಂತೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕೆರೆಗಳ ಹೊಳೆತ್ತುವುದು ಸೇರಿದಂತೆ ಹತ್ತು ಹಲವಾರು ಜನಪರ ಕೆಲಸಗಳಲ್ಲಿ ತೊಡಗಿಕೊಳ್ಳುವ ಮೂಲಕ ನೀರು ಸಂರಕ್ಷಣೆಗೆ ಮಹತ್ವ ಕೊಟ್ಟಿದೆ. ಮಳೆ ಬಾರದ ಜಿಲ್ಲೆಗಳು ನಮ್ಮ ರಾಜ್ಯದಲ್ಲಿ ಸಾಕಷ್ಟಿವೆ. ಬೋರ್‍ವೆಲ್‍ಗಳನ್ನು ಹೆಚ್ಚು ಕೊರೆಸುವ ಕಡೆ ರೈತರು ಗಮನ ಕೊಟ್ಟಾಗಿನಿಂದಲೂ ಕೆರೆಗಳು ಒಣಗುತ್ತಿವೆ. ರಾಜ್ಯದಲ್ಲಿ ಸುಮಾರು 36 ಸಾವಿರ ಕೆರೆಗಳಿದ್ದು, ಅನೇಕ ಕಡೆ ಒತ್ತುವರಿಯಾಗುತ್ತಿದೆ ಎಂದರು.

ಐದಾರು ವರ್ಷಗಳಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಕೆರೆಗಳ ಹೂಳು ತೆಗೆಸುವುದಕ್ಕಾಗಿ 42.10 ಕೋಟಿ ರೂ.ಗಳನ್ನು ಖರ್ಚು ಮಾಡಿದೆ. ಕೆರೆಗಳ ಅತಿಕ್ರಮಣ ನಿಂತಿಲ್ಲ. ರೈತರ ಜೀವಾಳ ಕೆರೆಗಳನ್ನು ಉಳಿಸುವತ್ತ ಕೆರೆ ಸಮಿತಿ ಪದಾಧಿಕಾರಿಗಳು ಗಮನ ಕೊಡಬೇಕೆಂದು ಶಿವಾನಂದ ಆಚಾರ್ಯ ಮನವಿ ಮಾಡಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಪ್ರಾದೇಶಿಕ ನಿರ್ದೇಶಕಿ ಶ್ರೀಮತಿ ಗೀತಾ ಬಿ. ಜಿಲ್ಲಾ ನಿರ್ದೇಶಕ ದಿನೇಶ್ ಪೂಜಾರಿ ವೇದಿಕೆಯಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊಳಲ್ಕೆರೆ | ಸ್ನೇಹ ಪಬ್ಲಿಕ್ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಸುದ್ದಿಒನ್, ಹೊಳಲ್ಕೆರೆ, ಜುಲೈ. 26 : ನಮ್ಮ ರಾಷ್ಟ್ರಧ್ವಜವು ಗಾಳಿಯಿಂದ ಹಾರುತ್ತಿಲ್ಲ ಬದಲಾಗಿ ಅದು ಹಾರುತ್ತಿರುವುದು ಈ ದೇಶಕ್ಕಾಗಿ ಮಡಿದ ವೀರ ಯೋಧರ ಸೈನಿಕರ ಉಸಿರಿನಿಂದ ಎಂದು ಸಂಸ್ಥೆಯ ಕಾರ್ಯದರ್ಶಿ ಜಿ.ಎಸ್. ವಸಂತ್ ಹೇಳಿದರು.

ಖ್ಯಾತ ನಿರೂಪಕಿ ದಿವ್ಯಾ ಆಲೂರು ತಂದೆ‌ ನಿಧನ : ತಾವೇ ಅಂತ್ಯಸಂಸ್ಕಾರ ಮಾಡಿ ಹೇಳಿದ್ದೇನು..?

ಬೆಂಗಳೂರು : ಪೋಷಕರ ಅಂತ್ಯ ಸಂಸ್ಕಾರದ ವಿಚಾರದಲ್ಲಿ ಈಗಲೂ ಮನಸ್ಥಿತಿ ಎಲ್ಲಾ ಕಡೆಯಲ್ಲೂ ಬದಲಾಗಿಲ್ಲ. ತಮಗೆ ಗಂಡು ಮಕ್ಕಳು ಇಲ್ಲದೆ ಇದ್ದರು, ಅಣ್ಣತಮ್ಮಂದಿರಿಗೆ ಇರುವ ಗಂಡು ಮಕ್ಕಳಿಂದಾನೇ ಅಂತ್ಯ ಸಂಸ್ಕಾರ ನಡೆಸುತ್ತಾರೆ. ಸತ್ತವರಿಗೆ ಅಂತ್ಯ

ಖ್ಯಾತ ನಿರೂಪಕಿ ದಿವ್ಯಾ ಆಲೂರು ತಂದೆ‌ ನಿಧನ : ತಾವೇ ಅಂತ್ಯಸಂಸ್ಕಾರ ಮಾಡಿ ಹೇಳಿದ್ದೇನು..?

ಪೋಷಕರ ಅಂತ್ಯ ಸಂಸ್ಕಾರದ ವಿಚಾರದಲ್ಲಿ ಈಗಲೂ ಮನಸ್ಥಿತಿ ಎಲ್ಲಾ ಕಡೆಯಲ್ಲೂ ಬದಲಾಗಿಲ್ಲ. ತಮಗೆ ಗಂಡು ಮಕ್ಕಳು ಇಲ್ಲದೆ ಇದ್ದರು, ಅಣ್ಣತಮ್ಮಂದಿರಿಗೆ ಇರುವ ಗಂಡು ಮಕ್ಕಳಿಂದಾನೇ ಅಂತ್ಯ ಸಂಸ್ಕಾರ ನಡೆಸುತ್ತಾರೆ. ಸತ್ತವರಿಗೆ ಅಂತ್ಯ ಸಂಸ್ಕಾರ ಮಾಡಬೇಕಾದವರು

error: Content is protected !!