ಚಿತ್ರದುರ್ಗ : ನ.06: ದೀಪಾವಳಿಯು ಬೆಳಕಿನ ಹಬ್ಬವಾಗಿದ್ದು, ದೀಪಾವಳಿ ಹಬ್ಬವನ್ನು ಪರಿಸರಸ್ನೇಹಿಯಾಗಿ ಸರಳ ರೀತಿಯಲ್ಲಿ ಮಾಲಿನ್ಯ ರಹಿತವಾಗಿ ಮತ್ತು ಭಕ್ತಿಪೂರ್ವಕವಾಗಿ ಆಚರಿಸಬೇಕು, ಹಸಿರು ಪಟಾಕಿಯನ್ನು ಹೊರತುಪಡಿಸಿ, ಇತರೆ ಪಟಾಕಿಯ ಬಳಕೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅವರು ತಿಳಿಸಿದ್ದಾರೆ.
ಪ್ರತಿ ವರ್ಷದಂತೆ ಈ ವರ್ಷವೂ ದೀಪಾವಳಿಯನ್ನು ಜಿಲ್ಲೆಯಾದ್ಯಂತ ಸಡಗರದಿಂದ ಆಚರಿಸಲಾಗುತ್ತಿದ್ದು, ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಗಳು ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯ ಉಂಟು ಮಾಡಿ ಪರಿಸರಕ್ಕೆ ಹಾನಿ ಮಾಡುತ್ತಿದೆ ಹಾಗೂ ಜನರ ಆರೋಗ್ಯ ಹದಗೆಡಿಸುತ್ತಿದೆ, ಅಲ್ಲದೆ ಪ್ರಾಣಿ-ಪಕ್ಷಿಗಳ ಕಲರವಕ್ಕೆ ಘಾಸಿ ಉಂಟು ಮಾಡುತ್ತಿದೆ. ಹೀಗಾಗಿ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಸರಳ ರೀತಿಯಲ್ಲಿ ಮಾಲಿನ್ಯ ರಹಿತವಾಗಿ ಮತ್ತು ಭಕ್ತಿ ಪೂರ್ವಕವಾಗಿ ಆಚರಿಸವುದು ಸೂಕ್ತವಾಗಿರುತ್ತದೆ.
ಹಸಿರು ಪಟಾಕಿ ಬಳಕೆಗೆ ಮಾತ್ರ ಅವಕಾಶ:
ದೀಪಾವಳಿ ಹಬ್ಬ ಆಚರಿಸುವ ಸಂಬಂಧ ಸರ್ವೋಚ್ಛ ನ್ಯಾಯಾಲಯವು ನೀಡಿರುವ ನಿರ್ದೇಶನಗಳಂತೆ ಹಾಗೂ ರಾಜ್ಯ ಸರ್ಕಾರವು ಪಟಾಕಿ ಬಳಕೆ ಕುರಿತಂತೆ ನೀಡಿರುವ ಆದೇಶದ ಮೇರೆಗೆ ಜವಾಬ್ದಾರಿಯುತ ನಾಗರಿಕರು ಮಾರ್ಗಸೂಚಿ ಅನುಸರಿಸುವಂತೆ ಮನವಿ ಮಾಡಿದ್ದಾರೆ. ಸರ್ಕಾರದ ನಿರ್ದೇಶನದಂತೆ ಹಸಿರು ಪಟಾಕಿಗಳನ್ನು ಹೊರತುಪಡಿಸಿ, ಬೇರೆ ಯಾವುದೇ ರೀತಿಯ ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ.
ಹಸಿರು ಪಟಾಕಿಗಳ ಗುರುತಿಸುವಿಕೆ:
ಪಟಾಕಿ ಬಾಕ್ಸ್ಗಳ ಮೇಲೆ ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್ಐಆರ್) ಮತ್ತು ನ್ಯಾಷನಲ್ ಎನ್ವಿರಾನ್ಮೆಂಟಲ್ ಇಂಜಿನಿಯರಿಂಗ್ ರಿಸರ್ಚ್ ಇನ್ಸಿಟಿಟ್ಯೂಟ್ (ಎನ್ಇಇಆರ್ಐ) ಇವರ ಲೋಗೋ ಹಾಗೂ ನೊಂದಿತ ಸಂಖ್ಯೆಯೊಂದಿಗೆ ಮುದ್ರಿತವಾಗಿರಬೇಕು. ಅಧಿಕೃತ ಮಾರಾಟಗಾರರು ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರದಿಂದ ನೀಡುವ ಪರವಾನಗಿಯಲ್ಲಿ ನಿಗಧಿಪಡಿಸಿರುವ ದಿನಾಂಕ ಮತ್ತು ಸ್ಥಳಗಳಲ್ಲಿ ಮಾತ್ರ ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ಇಡಬೇಕು.
ನಿಷೇಧಿತ ಪಟಾಕಿಗಳ ಮಾರಾಟ ಕಂಡುಬಂದಲ್ಲಿ ಅಂತಹ ಪಟಾಕಿಗಳನ್ನು ವಶಪಡಿಸಿಕೊಳ್ಳಲಾಗುವುದು ಮತ್ತು ನಿಯಮಗಳನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಹಬ್ಬದ ಸಮಯದಲ್ಲಿ ರಾತ್ರಿ 8 ಗಂಟೆಯಿಂದ 10 ಗಂಟೆವರೆಗೆ ಮಾತ್ರ ಹಸಿರು ಪಟಾಕಿಗಳನ್ನು ಸ್ಪೋಟಿಸಲು ಅವಕಾಶ ನೀಡಿದ್ದು, ಉಳಿದ ಸಮಯದಲ್ಲಿ ಪಟಾಕಿಗಳ ಸ್ಪೋಟ ನಿಷೇಧಿಸಲಾಗಿದೆ.
ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಪಟಾಕಿ ಸ್ಪೋಟ ಸಂಪೂರ್ಣ ನಿಷೇಧಿಸಲಾಗಿದೆ. 125 ಡೆಸಿಬಲ್ಗಳಿಗಿಂತಲೂ ಹೆಚ್ಚಿನ ಶಬ್ದ ಮಾಡುವ ಪಟಾಕಿಗಳನ್ನು ಕೂಡ ನಿಷೇಧಿಸಲಾಗಿದೆ. ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆ, ವೃದ್ಧಾಶ್ರಮಗಳ ಹತ್ತಿರ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ.
ಈಗಾಗಲೇ ಪರಿಸರ ಅಧಿಕಾರಿಗಳು ಪಟಾಕಿ ಅಂಗಡಿ ಮಾಲೀಕರೊಂದಿಗೆ ಸಭೆ ನಡೆಸಿ, ಕಡ್ಡಾಯವಾಗಿ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡುವಂತೆ ಹಾಗೂ ಸರ್ಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಲಾಗಿದೆ. ಪರಿಸರ ಮತ್ತು ಸಾರ್ವಜನಿಕರ ಆರೋಗ್ಯ ಹಿತದೃಷ್ಠಿಯಿಂದ ಪರಿಸರಸ್ನೇಹಿ ದೀಪಾವಳಿ ಆಚರಣೆಗಾಗಿ ಜಿಲ್ಲೆಯ ನಾಗರೀಕರ ಸಹಕಾರ ಹಾಗೂ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸರ್ವೋಚ್ಛ ನ್ಯಾಯಾಲಯದ ಆದೇಶ ಮತ್ತು ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಲಾಗಿದೆ.
ಸಾಧ್ಯವಾದಷ್ಟು ಹಣತೆ ದೀಪ ಹಚ್ಚುವ ಮೂಲಕ ಬೆಳಕಿನ ಹಬ್ಬ ದೀಪಾವಳಿಯನ್ನು ಪರಿಸರ ಸ್ನೇಹಿಯಾಗಿ ಆಚರಿಸೋಣ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಮನವಿ ಮಾಡಿದ್ದಾರೆ.
ಸುದ್ದಿಒನ್ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 6 ವಿಕೆಟ್ಗಳಿಂದ ಹೀನಾಯವಾಗಿ ಸೋಲಿಸಿತು. ಇದರೊಂದಿಗೆ, ತಂಡವು 2017…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…
ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…
ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…
ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…
ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಬ್ಯಾಟ್ನಿಂದ ರನ್ಗಳನ್ನು ನಿರೀಕ್ಷಿಸುತ್ತಾರೆ.…