Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಡತನ ಮತ್ತು ಹವಾಮಾನ ಬದಲಾವಣೆಗೆ ಸೌರಶಕ್ತಿಯಿಂದ ಮಾತ್ರ ಪರಿಹಾರ ಸಾಧ್ಯ :  ರಾಬ್ ಷೇಯ್ಡರ್

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಏ.22) : ಬಡತನ ಮತ್ತು ಹವಾಮಾನ ಬದಲಾವಣೆಗೆ ಸೌರಶಕ್ತಿಯಿಂದ ಮಾತ್ರ ಪರಿಹಾರ ಸಾಧ್ಯ ಎಂದು ಲೆಮೆಲ್ಸನ್ ಫೌಂಡೇಶನ್ ಕಾರ್ಯನಿರ್ವಾಹಕ ನಿರ್ದೇಶಕ ರಾಬ್ ಷೇಯ್ಡರ್ ತಿಳಿಸಿದರು.

ದವಳಗಿರಿ ಬಡಾವಣೆಯಲ್ಲಿರುವ ಗಾಯತ್ರಿ ಶಿವರಾಂ ಇನ್ನರ್‍ವೀಲ್ಹ್ ಭವನದಲ್ಲಿ ಸೆಲ್ಕೋ ಫೌಂಡೇಶನ್ ವತಿಯಿಂದ ನಿನ್ನೆ ನಡೆದ ಸೌರ ನವೋದ್ಯಮಿಗಳ ಮತ್ತು ಹೊಸ ತಂತ್ರಜ್ಞಾನಗಳ ಸಮಾಗಮ ಉದ್ಘಾಟಿಸಿ ಮಾತನಾಡಿದರು.

ಉದ್ಯೋಗದಲ್ಲಿ ಗ್ರಾಮೀಣ ಭಾಗದ ಮಹಿಳೆಯರು ಯಶಸ್ಸು ಕಂಡುಕೊಳ್ಳಲು ಹೊಸ ತಂತ್ರಜ್ಞಾನದ ಕುರಿತು ಮಾಹಿತಿ ನೀಡುವ ಅಗತ್ಯವಿರುವುದರಿಂದ ಸೆಲ್ಕೋ ಫೌಂಡೇಶನ್ ಅತ್ಯುತ್ತಮ ಕೆಲಸ ಮಾಡುತ್ತಿದೆ ಎಂದು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಗಾಯತ್ರಿ ಶಿವರಾಂ ಮಾತನಾಡಿ ಮಹಿಳೆಯರು ತಮ್ಮಲ್ಲಿರುವ ಕೀಳರಿಮೆ ಬಿಟ್ಟು ಆತ್ಮವಿಶ್ವಾಸದಿಂದ ಮುನ್ನುಗಿದಾಗ ಮಾತ್ರ ಜೀವನದಲ್ಲಿ ಯಶಸ್ಸು ಸಾಧಿಸಬಹುದು ಎಂದು ಹೇಳಿದರು.

ನಬಾರ್ಡ್‍ನ ಜಿಲ್ಲಾ ಅಭಿವೃದ್ದಿ ವ್ಯವಸ್ಥಾಪಕಿ ಕವಿತಾ ಶಶಿಧರ್ ಮಾತನಾಡುತ್ತ ಮಾರುಕಟ್ಟೆ ಮತ್ತು ಉತ್ಪನ್ನ ಎರಡು ಕ್ಷೇತ್ರಗಳಲ್ಲಿಯೂ ಮಹಿಳೆಯರು ಹೆಚ್ಚು ಗಮನ ಹರಿಸಿದಾಗ ಆದಾಯ ಹೆಚ್ಚಿಸಿಕೊಂಡು ಸ್ವಾವಲಂಭಿಯಾಗಿ ಬದುಕಬಹುದು. ಜೊತೆಗೆ ಕೃಷಿ, ಆಹಾರ ಉತ್ಪನ್ನಗಳ ತಯಾರಿಕೆಗೆ ಸರ್ಕಾರದಿಂದ ಅನೇಕ ಸೌಲಭ್ಯಗಳಿದ್ದು, ಇಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಮಾಹಿತಿ ತಿಳಿದುಕೊಳ್ಳಬಹುದು ಎಂದರು.

ಸೆಲ್ಕೋ ಸಂಸ್ಥೆಯ ಡಿ.ಜಿ.ಎಂ. ಗುರುಪ್ರಕಾಶ್‍ಶೆಟ್ಟಿ, ಪ್ರಸನ್ನ ಹೆಗಡೆ, ಏರಿಯಾ ಮ್ಯಾನೇಜರ್ ಮಂಜುನಾಥ್ ಭಾಗ್ವತ್, ಸೆಲ್ಕೋ ಫೌಂಡೇಶನ್ ಅಧಿಕಾರಿ ಸ್ನೇಹ, ಸುಪ್ರಿಯಾಗೌಡ, ಇನ್ನು ಮುಂತಾದವರು ವೇದಿಕೆಯಲ್ಲಿದ್ದರು.

ಯಶಸ್ವಿ ಮಹಿಳಾ ಉದ್ಯಮಿಗಳ ಜೊತೆ ಸಂವಾದ ಏರ್ಪಡಿಸಲಾಗಿತ್ತು.
ಅನೇಕ ಉದ್ಯಮಿಗಳು ಹಾಗೂ ಹೊಸದಾಗಿ ಸ್ವಂತ ಉದ್ಯೋಗ ಕೈಗೊಳ್ಳುವ ನೂರಕ್ಕೂ ಹೆಚ್ಚು ಮಹಿಳೆಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಶಕ್ತಿ ಆಧಾರಿತ ಕೃಷಿ, ಹೈನುಗಾರಿಕೆ, ಕೋಲ್ಡ್‍ಪ್ರೆಸ್ಡ್ ಎಣ್ಣೆಗಾಣ, ಕಿರು ಉದ್ಯಮಿಗಳಿಗೆ ಸಂಬಂಧಿಸಿದ 20 ಕ್ಕೂ ಹೆಚ್ಚು ತಂತ್ರಜ್ಞಾನಗಳ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!