Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆಪರೇಷನ್ ಕಮಲದ ವಿಚಾರ : ಸಚಿವ ಎಂಬಿ ಪಾಟೀಲ್ ಹೇಳಿದ್ದೇನು..?

---Advertisement---

 

ಬೆಂಗಳೂರು: ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿಯ ಬೆನ್ನಲ್ಲೇ ಆಪರೇಷನ್ ಕಮಲ, ಆಪರೇಷನ್ ಹಸ್ತದ ಚರ್ಚೆಯೂ ಜೋರಾಗಿದೆ. ಈ ಬಾರಿ ಬಿಜೆಪಿ ಸೋಲಿಸಲು ವಿಪಕ್ಷಗಳೆಲ್ಲಾ ಒಂದಾಗಿವೆ. ಈ ಸಂಬಂಧ ಮಾತನಾಡಿರುವ ಸಚಿವ ಎಂಬಿ ಪಾಟೀಲ್, ಆಪರೇಷನ್ ನಂತರ ಇವರ ಕಥೆ ಏನಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆಯಲ್ಲ ಎಂದೇ ಹೇಳಿದ್ದಾರೆ.

ಆಪರೇಷನ್ ಕಮಲ ಮಾಡುವುದಕ್ಕೆ 65 ಶಾಸಕರು ಬೇಕು. ಅಷ್ಟು ಶಾಸಕರು ಬಿಜೆಪಿಯವರಿಗೆ ಸಿಕ್ತಾರಾ..? ಐದು ಜನ ಶಾಸಕರು ಕೂಡ ಸಿಗಲ್ಲ. ಬಿಜೆಪಿ ಮುಳುಗುತ್ತಿರೊ ಹಡಗಲ್ಲ, ಈಗಾಗಲೇ ಮುಳುಗಿರುವ ಹಡಗು. ಮಾಜಿ ಶಾಸಕ ರೇಣುಕಾಚಾರ್ಯ ನಿನ್ನೆ ಹೇಳಿಕೆ ನೀಡಿಲ್ವಾ. ಬಿಜೆಪಿಯಲ್ಲಿ ಯಾವುದೇ ನಾಯಕ ಇಲ್ಲ ಅಂತ.‌ ಬಿಜೆಪಿಯಲ್ಲಿ ಏನು ಉಳಿದಿಲ್ಲ, ಸಂಪೂರ್ಣ ನಿರ್ನಾಮ ಆಗುತ್ತಾರೆ ಎಂದಿದ್ದಾರೆ.

ಇದೇ ವೇಳೆ ಐಟಿ ದಾಳಿ ಬಗ್ಗೆ ಮಾತನಾಡಿ, ಐಟಿ ದಾಳಿಯಾಗಿದೆ. ಐಟಿಯವರೇ ತನಿಖೆ ನಡೆಸುತ್ತಾರೆ. ಇದು 40₹ ಕಮಿಷನ್ ಹಣ. ಹಾಗಾಗಿ ಅದು ಬಿಜೆಪಿಯವರ ಹಣನೇ ಅದು. ನಮ್ಮ ಕಾಲದಲ್ಲಿ ಆಗಿರುವುದು ಅಲ್ಲ. ನಮ್ಮ ಕಾಲದಲ್ಲಿ ಇನ್ನೂ ಟೆಂಡರೇ ಆಗಿಲ್ಲ ಎಂದಿದ್ದಾರೆ.

ಐಟಿ ದಾಳಿ ವೇಳೆ ಸಿಕ್ಕ ಹಣದ ಬಗ್ಗೆ ದಿನೇಶ್ ಗುಂಡೂರಾವ್ ಕೂಎ ಪ್ರತಿಕ್ರಿಯೆ ನೀಡಿದ್ದು, ಕರ್ನಾಟಕವನ್ನು ಯಾವ ರೀತಿಯಲ್ಲಿ ಎಟಿಎಂಗಿಂತ ದುರುಪಯೋಗ ಮಾಡಿಸಿಕೊಂಡ್ರು ಅನ್ನೋದು ಜನರಿಗೂ ಗೊತ್ತಿದೆ. ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ. ಹೀಗಾಗಿ ಕಾಂಗ್ರೆಸ್ ಗೆ ಮಸಿ ಬಳಿಯುವ ಪ್ರಯತ್ನ ನಡೆಸುತ್ತಿದ್ದಾರೆ. ಐಟಿ, ಸಿಬಿಐ ಎಲ್ಲಾ ಅವರ ಕೈಯಲ್ಲೇ ಇರುವುದು. ಐಟಿ, ಸಿಬಿಐ ಅವರ ನಿರ್ದೇಶನದಂತೆ ನಡೆಯುತ್ತದೆ. ಸಿಬಿಐ ಗೆ ಐಟಿ‌ ಅವರೆ ಪ್ರಕರಣವನ್ನು ನೀಡಬೇಕು. ರೇಡ್ ಸಂದರ್ಭ ಯಾರಲ್ಲಿ ಹಣ ಸಿಕ್ಕಿದೆ ಅವರು ಯಾರೂ ಕಾಂಗ್ರೆಸ್ ನವರಲ್ಲ ,ಯಾರೇ ತಪ್ಪು‌ ಮಾಡಿದರೆ ಅವರ ವಿರುದ್ಧ ಕ್ರಮ ಆಗಲಿ . ಅದನ್ನ ಸ್ವಾಗತ ಮಾಡುತ್ತೇವೆ ಎಂದು ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...