ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ, ಮೇ.15 : ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಆಪರೇಷನ್ ಸಿಂಧೂರ ಯಶಸ್ವಿ ಮಾಡಿದ ನಮ್ಮ ಸೈನಿಕರಿಗೆ ಧನ್ಯವಾದ ಅರ್ಪಣೆಗಾಗಿ ರಕ್ತದಾನ ಶಿಬಿರವನ್ನು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಕಾರೇಹಳ್ಳಿ ಉಲ್ಲಾಸ್ ಅವರ ನೇತೃತ್ವದಲ್ಲಿ ರಕ್ತದಾನ ಶಿಬಿರವನ್ನು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿತ್ತು
ಈ ಶಿಬಿರದಲ್ಲಿ 74ಕ್ಕೆ ಹೆಚ್ಚು ಯುವಕ ರಕ್ತದಾನಿಗಳು ತಮ್ಮ ರಕ್ತವನ್ನು ದಾನ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸೈಯದ್ ಸಾಧಿಕ್, ರಾಜ್ಯ ಕಾರ್ಯದರ್ಶಿಗಳಾದ ವೈಶಾಖ ಯಾದವ್ ಚಿತ್ರದುರ್ಗ ವಿಧಾನಸಭಾ ಯುವ ಕಾಂಗ್ರೆಸ್ನ ಅಧ್ಯಕ್ಷರು ಆದರ್ಶ್ , ಪವನ್, ವೀರೇಶ್ ,ಗಿರೀಶ್ , ಧನಂಜಯ ಹಾಗೂ ಚಿತ್ರದುರ್ಗ ಗ್ರಾಮಾಂತರ ಅಧ್ಯಕ್ಷರಾದ ಮಹಾಂತೇಶ್ , ರೋಹನ್ ನಗರ ಅಧ್ಯಕ್ಷರಾದ ಪವನ್ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಸಂಪತ ಕುಮಾರ್ ಮಧು ಗೌಡ ಮೈಲಾರಪ್ಪ ನರಸಿಂಹ ಹಾಗೂ ಅನೇಕ ಯುವ ಮುಖಂಡರುಗಳು ಭಾಗವಹಿಸಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










