Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಬೆಳೆ ವಿಮೆ ಮಾಡಿಸಲು ರೈತರಿಗೆ ಅವಕಾಶ : ಯಾವೆಲ್ಲಾ ಬೆಳೆಗೆ ಡೆಡ್ಲೈನ್ ಯಾವಾಗ..?

---Advertisement---

ರೈತರ ನಿರೀಕ್ಷಿಸಿದ ಬೆಳೆಯ ಫಸಲು ಕೆಲವೊಮ್ಮೆ ಕೈಗೆ ಸಿಗುವುದೇ ಕಷ್ಟವಾಗುತ್ತದೆ.‌ ಅದರಲ್ಲೂ ಈ ಮಳೆಗಾಲದಲ್ಲಿ ಬೆಳೆಯಿವ ಬೆಳೆಗಳು ಅಂದುಕೊಂಡಮಟ್ಟಿಗೆ ಲಾಭ ತಂದುಕೊಡಲ್ಲ. ಮಳೆ ಜಾಸ್ತಿಯಾಗಿ ಬೆಳೆ ಹಾನಿಯಾಗುವುದೋ ಒಮ್ಮೊಮ್ಮೆ ಮಳೆಯೇ ಇಲ್ಲದೆ ಬರಗಾಲ ಬರುವುದೋ ಆಗುತ್ತದೆ. ಹೀಗಾಗಿ ಬೆಳೆ ವಿಮೆ ಇದ್ದರೆ ರೈತರು ನೆಮ್ಮದಿಯ ಉಸಿರಾಡಬಹುದು.

 

ಇದೀಗ ಹಿಂಗಾರು ಮಳೆಯ ಬೆಳೆ ವಿಮೆ ಮಾಡಿಸಲು ರೈತರಿಗೆ ಅವಕಾಶ ನೀಡಲಾಗಿದೆ. ಫಸಲ್ ಭೀಮಾ ಯೋಜನೆಯಡಿ ಹಲವು ಬೆಳೆಗಳನ್ನು ಗುರುತಿಸಲಾಗಿದೆ. ಜೊತೆಗೆ ಬೆಳೆ ವಿಮೆಗೆ ಕೊನೆಯ ದಿನಾಂಕಗಳನ್ನು ಗುರುತಿಸಲಾಗಿದೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಹಿಂಗಾರು ಹಾಗೂ ಮುಂಗಾರು ಮುಂಗಾರು ಹಂಗಾಮಿನ ಬೆಳೆ ವಿಮೆಗೆ ಹೆಸರು ನೋಂದಾಯಿಸಲು ಕರೆ ನೀಡಲಾಗಿದೆ. ಈ ಯೋಜನೆಗೆ ಬೆಳೆ ಸಾಲ ಪಡೆದ ರೈತರು ಹಾಗೂ ಸಾಲ ಪಡೆಯದೆ ಇರುವ ರೈತರು ಅರ್ಜಿ ಹಾಕಬಹುದು.

ಶೇಂಗಾ, ಭತ್ತ, ಮುಸುಕಿನ ಜೋಳ, ಸೂರ್ಯಕಾಂತಿ, ಕುಸುಮೆ, ಈರುಳ್ಳಿ ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳಬಹುದು. ಜೋಳ, ಮುಸುಕಿನ ಜೋಳ, ಸೂರ್ಯಕಾಂತಿ ಕುಸುಮೆ ಬೆಳೆಗೆ ಡಿಸೆಂಬರ್ 16ರ ಒಳಗೆ ಅರ್ಜಿ ಹಾಕಬೇಕು. ಮಳೆಯಾಶ್ರಿತ ಬೆಳೆಯಾದ ಜೋಳಕ್ಕೆ ನವೆಂಬರ್ 15, ಕಡಲೆ ಡಿಸೆಂಬರ್ 31, ಈರುಳ್ಳಿ ನವೆಂಬರ್ 30 ಕೊನೆಯ ದಿನವಾಗಿದೆ. ಬೇಸಿಗೆ ಬೆಳೆಗಳಾದ ಭತ್ತ, ನೆಲಗಡಲೆ (ಶೇಂಗಾ), ಸೂರ್ಯಕಾಂತಿ ಮತ್ತು ಈರುಳ್ಳಿ ಬೆಳೆಗಳಿಗೆ 2025ರ ಫೆಬ್ರವರಿ 28ರ ತನಕ ನೋಂದಣಿಗೆ ಅವಕಾಶವಿದೆ. ರೈತರು ಈ ಯೋಜನೆಯ ಲಾಭ ಪಡೆಯಲು ಯಾವುದೇ ಸ್ಥಳೀಯ ಬ್ಯಾಂಕ್/ ಸಾರ್ವಜನಿಕ ಸೇವಾ ಕೇಂದ್ರಗಳನ್ನು ಸಂಪರ್ಕಿಸಬಹುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...