Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಅಯೋಧ್ಯೆಯಲ್ಲಿ ರಮಾನಂದ ಸಂಪ್ರದಾಯದ ಪೂಜೆಗೆ ವಿರೋಧ : ಶಂಕರಚಾರ್ಯ ಪೀಠದ ವಾದವೇನು..?

---Advertisement---

 

 

ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯಾಗುತ್ತಿದೆ. ಈ ದಿನಕ್ಕಾಗಿಯೇ ದೇಶದ ಕೋಟ್ಯಾಂತರ ಮಂದಿ ಕಾಯುತ್ತಿದ್ದಾರೆ. ರಾಮನ ಭಕ್ತರು ರಾಮನನ್ನು ಕಣ್ತುಂಬಿಕೊಳ್ಳಲು, ಅಯೋಧ್ಯೆಗೆ ಹೊರಡಲು ಸಜ್ಜಾಗುತ್ತಿದ್ದಾರೆ. ದೇಶದ ಮೂಲೆ ಮೂಲೆಯಿಂದಾನೂ ಅಂದು ಅಯೋಧ್ಯೆಗೆ ಭಕ್ತರು ಬರುತ್ತಾರೆ. ರಾಮ್ ಲಲ್ಲಾ ಮೂರ್ತಿಯ ಪ್ರತಿಷ್ಟಾಪನೆಯಾಗಲಿದೆ. ರಮಾನಂದ ಸಂಪ್ರದಾಯದಂತೆ ರಾಮ್ ಲಲ್ಲಾ ಪ್ರತಿಷ್ಠಾಪನೆ ಮಾಡಲು, ರಾಮಜನ್ಮ ಭೂಮಿ ಟ್ರಸ್ಟ್ ನಿರ್ಧಾರ ಮಾಡಿದೆ. ಇದೀಗ ಇದಕ್ಕೆ ವಿರೋಧ ವ್ಯಕ್ತವಾಗಿದೆ.

ದೇಶದ ಶಂಕರಾಚಾರ್ಯ ಪೀಠದ ಸ್ಚಾಮಿಗಳು ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಶಂಕರಾಚಾರ್ಯರ ನಾಲ್ಕು ಪೀಠಗಳ ಪೈಕಿ ಮೂರು ಪೀಠಗಳು ರಮಾನಂದ ಸಂಪ್ರದಾಯದಂತೆ ಪ್ರತಿಷ್ಠಾಪನೆ ಮಾಡಲು ವಿರೋಧ ವ್ಯಕ್ತ ಪಡಿಸುತ್ತಿದೆ. ಆದರೆ ಶೃಂಗೇರಿ ಶಾರದಾ ಪೀಠದ ಸ್ವಾಮೀಜಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದೇವೆ ಎಂದಿದ್ದಾರೆ. ನಾವೂ ಪ್ರಧಾನಿ ಮೋದಿ ವಿರೋಧಿಗಳಲ್ಲ. ಧರ್ಮದ ವಿರುದ್ಧವಾಗಿ ರಾಮ್ ಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆಯಾಗಬಾರದು. ರಮಾನಂದ ಸಂಪ್ರದಾಯದ ಪ್ರಕಾರ ಮಾಡುವುದಾದರೇ ಚಂಪತ್ ರಾಯ್, ನೃಪೇಂದ್ರ ಮಿಶ್ರಾ ಟ್ರಸ್ಟ್ ನ ಸ್ಥಾನಗಳಿಗೆ ರಾಜೀನಾಮೆ ನೀಡಲಿ ಎಂದು ಉತ್ತರಾಖಂಡ ಶಂಕರಾಚಾರ್ಯ ಪೀಠದ ಅವಿಮುಕ್ತೇಶ್ವರಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ‌.

ಪುರಿಯ ಶಂಕರಾಚಾರ್ಯ ಪೀಠದ ನಿಶ್ವಲಾನಂದ ಸ್ವಾಮೀಜಿ ಕೂಡ ಪ್ರಾಣ ಪ್ರತಿಷ್ಠಾಪನೆಗೆ ಗೈರಾಗಲಿದ್ದಾರೆ. ನಮಗೆ ಮಂದಿರ ಲೋಕಾರ್ಪಣೆಗೆ ಆಹ್ವಾನ ಬಂದಿದೆ. ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ‌ನಾವು ಭಾಗಿಯಾಗಲ್ಲ. ಧಾರ್ಮಿಕ ವಿಧಿ-ವಿಧಾನಗಳ ಪ್ರಕಾರ ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ನಡೆಯುತ್ತಿಲ್ಲ. ಇದಕ್ಕೆ ನಮ್ಮ ಸಹಮತಿ ಇಲ್ಲ. ಶಾಸ್ತ್ರ, ಧಾರ್ಮಿಕ ವಿಧಿ ವಿಧಾನಗಳು ಸರಿಯಾಗಿ ನಡೆಯಬೇಕು ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment