Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅ.20 ರಂದು ಚಿತ್ರದುರ್ಗಕ್ಕೆ ಓಪಿಎಸ್ ಸಂಕಲ್ಪ ಯಾತ್ರೆ : ಜಿಲ್ಲಾಧ್ಯಕ್ಷ ಡಾ ಎಸ್. ಆರ್ .ಲೇಪಾಕ್ಷ

Facebook
Twitter
Telegram
WhatsApp

 

ಚಿತ್ರದುರ್ಗ, (ಅ.19) : ಕರ್ನಾಟಕ ರಾಜ್ಯ ಸರ್ಕಾರಿ ಎನ್ ಪಿಎಸ್  ನೌಕರರ ಸಂಘ, ಬೆಂಗಳೂರು ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ಎನ್ ಪಿಎಸ್ ರದ್ದುಪಡಿಸಿ ಹಳೆ ಪಿಂಚಣಿ(ಓ.ಪಿ.ಎಸ್) ಜಾರಿಗೊಳಿಸಲು ರಾಜ್ಯಾದ್ಯಂತ ಓಪಿಎಸ್ ಸಂಕಲ್ಪ ಯಾತ್ರೆ ಹಮ್ಮಿಕೊಂಡಿದೆ.

ಡಿಸೆಂಬರ್  19 ರಂದು ಫ್ರೀಡಂ ಪಾರ್ಕ್ ಬೆಂಗಳೂರಿನಲ್ಲಿ “ಮಾಡು ಇಲ್ಲವೇ ಮಡಿ” ಹೋರಾಟಕ್ಕೆ ಸಿದ್ಧತೆ ಗೊಳಿಸಲು ಜಾಗೃತಿ ಮಾಡುವ ನಿಟ್ಟಿನಲ್ಲಿ ಈ ಯಾತ್ರೆಯು ಚಿತ್ರದುರ್ಗ ಜಿಲ್ಲೆಗೆ ದಿನಾಂಕ ಅಕ್ಟೋಬರ್ 20 ರಂದು ಗುರುವಾರದಂದು ಆಗಮಿಸಲಿದೆ.

ಅಂದು ಬೆಳಿಗ್ಗೆ 10:00 ಗಂಟೆಗೆ ಕನಕದಾಸರ ವೃತ್ತ, ಹೊಳಲ್ಕೆರೆ ರೋಡ್ ನಿಂದ ಸಂಗೊಳ್ಳಿ ರಾಯಣ್ಣ ವೃತ್ತ ನಂತರ ಅಂಬೇಡ್ಕರ್ ವೃತ್ತ ಮದಕರಿ ನಾಯಕ ವೃತ್ತ ಹಾಗೂ ಒನಕೆ ಓಬವ್ವ ವೃತ್ತ ಇಲ್ಲಿ ಮಾಲಾರ್ಪಣೆ ಮಾಡಿ, ಡಿಸಿ ಸರ್ಕಲ್ ಬಳಿ ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಮೊಳಕಾಲ್ಮೂರು, ಚಳ್ಳಕೆರೆ ತಾಲೂಕುಗಳು ಸುಮಾರು 600 ಕ್ಕೂ ಹೆಚ್ಚು ನೌಕರರು ಹಾಗೂ ನಿಗಮ ಮಂಡಳಿಯ ನೌಕರರು ನಗರದಲ್ಲಿ ಪಾದಯಾತ್ರೆ ಮುಖಾಂತರ ಬಹಿರಂಗ ಸಭೆ ಮಾಡುವರು. ತದನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುತ್ತದೆ.

ಆ ನಂತರ ಹಿರಿಯೂರು ಬೈಪಾಸ್ ರ ವರೆಗೆ ಸಂಚರಿಸಿ, ಹಿರಿಯೂರು ಟಿ.ಬಿ. ಸರ್ಕಲ್ ಬಳಿ ಅಂಬೇಡ್ಕರ್ ವೃತ್ತದಲ್ಲಿ ಮಾಲಾರ್ಪಣೆ ಮಾಡಿ ಈ ತಾಲ್ಲೂಕಿನ ನೌಕರರು ವೃತ್ತದ ಬಳಿ ಸೇರಿ ತಾಲ್ಲೂಕು ಕಚೇರಿಯವರೆಗೆ ಪಾದಯಾತ್ರೆಯ ಮುಖಾಂತರ ಸಂಚರಿಸಿ ತಹಶೀಲ್ದಾರ್ ರವರಿಗೆ ಮನವಿ ಸಲ್ಲಿಸಿ, ನಂತರ ಹಿರಿಯೂರು ಬೈಪಾಸ್ ಮುಖಾಂತರ ತುಮಕೂರು ಜಿಲ್ಲೆಗೆ ಪ್ರವೇಶ ಮಾಡಲಿದೆ ಎಂದು ಜಿಲ್ಲಾಧ್ಯಕ್ಷ ಡಾ ಎಸ್. ಆರ್ .ಲೇಪಾಕ್ಷ, ಪ್ರಧಾನ ಕಾರ್ಯದರ್ಶಿ ಹನುಮಂತಪ್ಪ ಸಿ. ಕಲ್ಲೇಶ್ ಮೌರ್ಯ, ಶಿವಣ್ಣ, ಮಮತ, ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್‍ರವರನ್ನು ಗೆಲ್ಲಿಸಿ : ಮಯೂರ್ ಜೈಕುಮಾರ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 17  : ವಿಧಾನಪರಿಷತ್‍ನಲ್ಲಿ ಬಹುಮತ ಬೇಕಾಗಿರುವುದರಿಂದ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು ಕಾಂಗ್ರೆಸ್

ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಮಕ್ಕಳಿಗಿಲ್ಲ ಗ್ರೇಸ್ ಮಾರ್ಕ್ಸ್..!

ಬೆಂಗಳೂರು: ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಕಡಿಮೆ ಬಂದಿದೆ. ಅದರಲ್ಲೂ ಕಳೆದ ವರ್ಷಕ್ಕಿಂತ ಹೆಚ್ಚಿನ ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದರು, ಫಲಿತಾಂಶ ಹೇಳಿಕೊಳ್ಳುವ ಮಟ್ಟಕ್ಕೆ ಬಂದಿಲ್ಲ. ಈ ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಸಿಎಂ

ರಾಜಕೀಯ ನಿಂತ ನೀರಲ್ಲ, ಕೆಲವ ಬದಲಾವಣೆಗಳು ಅನಿವಾರ್ಯ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17 :  ನಾನು ನನ್ನ ಶಾಸಕ ಸ್ಥಾನ ಅವಧಿ ಮುಗಿದ ಮೇಲೆ ಬೇರೆ ಪಕ್ಷಕ್ಕೆ

error: Content is protected !!