Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಂಜಾರ ಸಮಾಜವನ್ನು ಕಡೆಗಣಿಸಿರುವ ಕಾಂಗ್ರೆಸ್ ಪಕ್ಷವನ್ನು ಸೋಲಿಸುವುದೇ ನಮ್ಮ ಗುರಿ : ಎಂ.ಸತೀಶ್‍ಕುಮಾರ್

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552,

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 18 : ಬಂಜಾರ ಸಮಾಜವನ್ನು ಕಡೆಗಣಿಸಿ ರಾಜಕೀಯವಾಗಿ ಪ್ರಾತಿನಿಧ್ಯ ನೀಡದ ಕಾಂಗ್ರೆಸ್ ಸರ್ಕಾರಕ್ಕೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಕ್ಕಪಾಠ ಕಲಿಸಲಾಗುವುದೆಂದು ಜಿಲ್ಲಾ ಬಂಜಾರ ಲಂಬಾಣಿ ಸಂಘದ ಅಧ್ಯಕ್ಷ ಎಂ.ಸತೀಶ್‍ಕುಮಾರ್ ಎಚ್ಚರಿಸಿದರು.

ಬಂಜಾರ ಭವನದಲ್ಲಿ ಬುಧವಾರ ಸಭೆ ನಡೆಸಿ ಮಾತನಾಡಿದ ಅವರು ನಮ್ಮ ದೊಡ್ಡ ಸಮಾಜಕ್ಕೆ ವಿಧಾನಸಭೆಯಲ್ಲಿ ಸಚಿವ ಸ್ಥಾನ ಕೂಡ ಕೊಟ್ಟಿಲ್ಲ. ರಾಜ್ಯದ 28 ಕ್ಷೇತ್ರಗಳಲ್ಲಿ ಎಲ್ಲಯೂ ನಮ್ಮ ಜನಾಂಗದವರು ಸ್ಪರ್ಧಿಸಲು ಟಿಕೆಟ್ ಕೊಡದೆ ದ್ರೋಹವೆಸಗಿರುವ ಕಾಂಗ್ರೆಸ್‍ಗೆ ಈ ಸಾರಿ ನಮ್ಮ ಮತವಿಲ್ಲ. ಬದಲಿಗೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಗೋವಿಂದ ಕಾರಜೋಳರವರನ್ನು ಗೆಲ್ಲಿಸುವುದು ನಮ್ಮ ಗುರಿ ಎಂದು ಹೇಳಿದರು.

ಕರ್ನಾಟಕ ರಾಜ್ಯ ತಾಂಡ ಅಭಿವೃದ್ದಿ ನಿಗಮದ ಮಾಜಿ ನಿರ್ದೇಶಕ ಗಿರೀಶ್ ಮಾತನಾಡಿ ಕಾಂಗ್ರೆಸ್ ಹಠಾವೋ ಬಂಜಾರ ಬಚಾವೋ ಎಂಬುದು ನಮ್ಮ ಘೋಷಣೆ. ನಮ್ಮ ಜನಾಂಗದ ಮತ ಪಡೆದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ತಾಂಡ ಅಭಿವೃದ್ದಿ ನಿಗಮಕ್ಕೆ ಅನುದಾನ ನೀಡಿಲ್ಲ. ನಿಗಮಕ್ಕೆ ಅಧ್ಯಕ್ಷರನ್ನು ನೇಮಕ ಮಾಡದೆ ಕಡೆಗಣಿಸುತ್ತಿದೆ.

ನಮ್ಮ ಜನಾಂಗಕ್ಕೆ ಸಚಿವ ಸ್ಥಾನವಿಲ್ಲ. ಲೋಕಸಭೆ ಚುನಾವಣೆಯಲ್ಲಿಯೂ ಸ್ಪರ್ಧಿಸಲು ಅವಕಾಶವಿಲ್ಲ. ಸದಾಶಿವ ಆಯೋಗದ ವರದಿ ಜಾರಿಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡಿರುವ ಕಾಂಗ್ರೆಸ್‍ನ್ನು ಈ ಚುನಾವಣೆಯಲ್ಲಿ ಸೋಲಿಸಿ ಬಿಜೆಪಿ.ಯ ಗೋವಿಂದ ಕಾರಜೋಳರನ್ನು ಗೆಲ್ಲಿಸುತ್ತೇವೆಂದರು.

ಶಂಕರ್‍ನಾಯ್ಕ, ಉಮಾಪತಿ, ತಣಿಗೆಹಳ್ಳಿ ಕುಮಾರ್‍ನಾಯ್ಕ, ಪರಮೇಶ್ವರ್‍ನಾಯ್ಕ, ಮದನ್, ಬೇವಿನಹಳ್ಳಿ ಮಂಜುನಾಥ್, ಓಂಕಾರ್‍ನಾಯ್ಕ ಇನ್ನು ಅನೇಕರು ಸಭೆಯಲ್ಲಿ ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

ಹೆಚ್ಚಾದ ಬಿಸಿಲು ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ರಕ್ಷಿಸಿಕೊಳ್ಳಿ : ವಿ.ಎ.ಪ್ರಕಾಶ್‍ರೆಡ್ಡಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಈ ವರ್ಷದ ಬೇಸಿಗೆ ಬಿಸಿಲು ಅತಿಯಾಗಿರುವುದರಿಂದ ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ಬೆಳಿಗ್ಗೆ ಆರು

error: Content is protected !!