ಬ್ರಾಹ್ಮಣರ ಬಗ್ಗೆ ನಮ್ಮ ಕುಟುಂಬಕ್ಕೆ ಗೌರವ ಇದೆ.. ಆದರೆ ಪೇಶ್ವೆ DNA ಬಗ್ಗೆ : ಕುಮಾರಸ್ವಾಮಿ ಮತ್ತೆ ಹೇಳಿದ್ದೇನು..?

ಹುಬ್ಬಳ್ಳಿ: ಚುನಾವಣೆಯ ಹೊಸ್ತಿಲಲ್ಲೇ ಮಾಜಿ ಸಿಎಂ ಕುಮಾರಸ್ವಾಮಿ ಬ್ರಾಹ್ಮಣ ಸಿಎಂ ವಿಚಾರ ತೆಗೆದು ಬಿಜೆಪಿ ನಾಯಕರ ತಲೆಗೆ ಹುಳ ಬಿಟ್ಟಿದ್ದರು. ಈ ವಿಚಾರ ಬಾರೀ ವಿವಾದಕ್ಕೆ ಕಾರಣವಾಗಿತ್ತು. ಹೋದಲ್ಲಿ ಬಂದಲ್ಲಿ ಕುಮಾರಸ್ವಾಮಿಗೆ ಪ್ರಶ್ನೆ ಎದುರಾಗಿತ್ತು. ಪಕ್ಷಕ್ಕೆ ಡ್ಯಾಮೇಜ್ ಆಗದಂತೆ ನೋಡಿಕೊಳ್ಳಲು ಬಿಜೆಪಿ ನಾಯಕರು ಯತ್ನಿಸಿದರು. ಆದ್ರೆ ಕುಮಾರಸ್ವಾಮಿ ಮತ್ತೆ ಅದನ್ನೇ ಪುನರುಚ್ಚರಿಸಿದ್ದಾರೆ. ಆ ಹೇಳಿಕೆಗೆ ಬದ್ಧರಾಗಿದ್ದಾರೆ.

ಈ ಬಗ್ಗೆ ಮತ್ತೆ ಮಾತನಾಡಿದ ಕುಮಾರಸ್ವಾಮಿ, ನನ್ನ ಹೇಳಿಕೆಗೆ ನಾನು ಬದ್ಧ. ಬ್ರಾಹ್ಮಣರ ಬಗ್ಗೆ ನಮ್ಮ ಕುಟುಂಬಕ್ಕೆ ಅಪಾರ ಗೌರವವಿದೆ. ಪೇಶ್ವೆ ಡಿಎನ್ಎ ಬಗ್ಗೆ ನನ್ನ ಪ್ರಶ್ನೆಗೆ ಬಿಜೆಪಿ ನಾಯಕರು ಮೊದಲು ಉತ್ತರ ಕೊಡಲಿ. ಬ್ರಾಹ್ಮಣ ಸಮುದಾಯಕ್ಕೆ ಅತ್ಯಂತ ಗೌರವ ಕೊಡುತ್ತೇವೆ. ಈಗಲೂ ಅದನ್ನು ಅತ್ಯಂತ ಸ್ಪಷ್ಟತೆಯಿಂದ ಹೇಳುತ್ತೇನೆ. ಮೊದಲಿನಿಂದಲೂ ನಾವೂ ಬ್ರಾಹ್ಮಣರ ಹೋಣಿಗಳಲ್ಲೇ ಬೆಳೆಸಿದ್ದೇವೆ. ನಾವೂ ಇದ್ದದ್ದು ಅಲ್ಲಿಯೇ. ಆ ಕಲ್ಚರ್ ಏನು ಅಂತ ಗೊತ್ತಿದೆ.

ಆದ್ರೆ ಪೇಶ್ವ ಕಲ್ಚರ್ ಇದೆಯಲ್ಲ ಆ ಡಿಎನ್ಎ ಅದರ ಬಗ್ಗೆ ಉತ್ತರ ಕೊಡಿ ಅಂದ್ರೆ ಯಾರು ಕೊಡ್ತಿಲ್ಲ. ನಾನು ಬ್ರಾಹ್ಮಣರು ಸಿಎಂ ಆಗಬೇಕು ಅಂತ ಏನು ಹೇಳ್ತಿಲ್ಲ. ಆದ್ರೆ ಪೇಶ್ವೆ ಡಿಎನ್ಎ ಆಗಬಾರದು. ನನ್ನ ರಾಜ್ಯ ಹಾಳಾಗಬಾರದು. ಪ್ರಹ್ಲಾದ್ ಜೋಶಿ ಬಗ್ಗೆಯೂ ಹೇಳುತ್ತಿಲ್ಲ. ಪೇಶ್ವೆ ಡಿಎನ್ಎ ಏನಿದೆ, ಅಂಥವರು ಈ ರಾಜ್ಯಕ್ಕೆ ಅಲ್ಲ ಎಂದಿದ್ದಾರೆ.

suddionenews

Recent Posts

ಕಾಯಕ ಪ್ರಜ್ಞೆ ಮೈಗೂಡಿಸಿಕೊಂಡರೆ ಬಸವ ತತ್ವ ಪಾಲಿಸಿದಂತೆ : ಸಂಸದ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ. ಫೆ. 25 :…

4 minutes ago

ಮಾರ್ಚ್ 01 ರಿಂದ 09 ರವರೆಗೆ ವನಕಲ್ಲು ಮಲ್ಲೇಶ್ವರ ಜಾತ್ರಾ ಮಹೋತ್ಸವ : ಬಸವ ರಮಾನಂದ ಮಹಾಸ್ವಾಮಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

15 minutes ago

ಚಿತ್ರದುರ್ಗ ತಹಶೀಲ್ದಾರ್ ಡಾ.ನಾಗವೇಣಿ ವರ್ಗಾವಣೆ…!

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

23 minutes ago

ವೇಷಗಾರ ಸಮುದಾಯದ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಖಂಡಿಸಿ ಚಿತ್ರದುರ್ಗದಲ್ಲಿ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

25 minutes ago

ಸಂವಿಧಾನಕ್ಕೆ ಅಪಾಯವಾದರೆ ಜನಸಾಮಾನ್ಯರ ಪಾಡೇನು ?  ಜೆ.ಯಾದವರೆಡ್ಡಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

33 minutes ago

ಹೊಳಲ್ಕೆರೆ | ಫೆಬ್ರವರಿ 26 ರಿಂದ ಮಾರ್ಚ್ 01 ರವರೆಗೆ ಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

1 hour ago