Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎರಡು ಕ್ಷೇತ್ರದಲ್ಲೂ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲ್ಲುತ್ತಾರೆ: ಅಶ್ವಥ್ ನಾರಾಯಣ್

Facebook
Twitter
Telegram
WhatsApp

ಬೆಂಗಳೂರು: ಸಿಂದಗಿ ಹಾಗೂ ಹಾನಗಲ್ ಉಪಚುನಾವಣೆಯಲ್ಲಿ ಜನರ ಆಶೀರ್ವಾದ ನಮ್ಮ ಪರವಾಗಿದೆ. ಚುನಾವಣೆ ಕೆಲಸ ಚೆನ್ನಾಗಿ ಆಗುತ್ತಿದೆ. ನಮ್ಮ ಅಭ್ಯರ್ಥಿ ಗೆಲ್ಲುತ್ತಾರೆ ಎಂದು ಸಚಿವ ಅಶ್ವಥ್ ನಾರಾಯಣ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಎರಡು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಖಚಿತ ಎಂದರು. ವಿಧಾನಸೌಧಕ್ಕೆ ಬೀಗ ಹಾಕಲಾಗಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಆರೋಪ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರದಲ್ಲಿ ಎಲ್ಲಾ ರೀತಿ‌ ಕೆಲಸ ನಡೆಯುತ್ತಿದೆ. ಯಾವುದೂ ಕುಂಠಿತವಾಗಿಲ್ಲ. ಯಾವುದಕ್ಕೂ ಸಮಸ್ಯೆಯಾಗಿಲ್ಲ. ಜನಪರವಾಗಿ ಸರ್ಕಾರದಲ್ಲಿ ಎಲ್ಲಾ ರೀತಿ ಕೆಲಸ, ಯಾವುದೇ ತಡೆ ಇಲ್ಲದೆ ನಡೆಯುತ್ತಿದೆ. ವ್ಯವಸ್ಥೆಯಲ್ಲಿ ಸರ್ವರಿಗೂ ಸಲ್ಲುವಂತಾಗುತ್ತಿದೆ. ಚುನಾವಣೆಯಿಂದ ನಾಗರಿಕರಿಗೂ, ಇಲಾಖೆಗೂ ಸಮಸ್ಯೆಯಾಗದಂತೆ ಸಚಿವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.

ಶಿಕ್ಷಣದ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಬೇಕು ಎಂದು ಹಾಸನದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ವಿಚಾರವಾಗಿ ಮಾತನಾಡಿ, ಸಮಾಜದಲ್ಲಿ ಇಂಥ ಕೆಲಸ ಮಾಡಬೇಕು, ಅಂತ ಕೆಲಸ ಮಾಡಬೇಕು ಅನ್ನೋ ತಾರತಮ್ಯ ಹೋಗಬೇಕು ಎಂದು ಆ ವಿದ್ಯಾರ್ಥಿ ಮಾತನಾಡಿದ್ದಾನೆ. ಯಾರು ಯಾವ ಕೆಲಸ ಬೇಕಾದರೂ ಮಾಡಬಹುದು. ಕಸ ಹೊಡೆಯೋ ಕೆಲಸವಾದರೂ ಮಾಡಬಹುದು, ದೊಡ್ಡ ಕೆಲಸ ಬೇಕಿದ್ದರೂ ಮಾಡಬಹುದು. ತನಗೆ ಇಷ್ಟವಾದ ಕೆಲಸವನ್ನು ಮಾಡಲು ಬಿಡಬೇಕು ಎಂದು ಆ ವಿದ್ಯಾರ್ಥಿ ತನ್ನ ಭಾವನೆಯನ್ನ ವ್ಯಕ್ತಪಡಿಸಿದ್ದಾನೆ.

ಈಗ ಸಮಾಜದಲ್ಲಿ ಸುಧಾರಣೆ ಆಗುತ್ತಿದೆ. ಇನ್ನೊಂದಿಷ್ಟು ಸಮಯ ತಗೆದುಕೊಳ್ಳುತ್ತದೆ. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಇಂಥ ಅವಕಾಶಗಳು ಸಿಗುತ್ತಿದೆ. ಎನ್‌ಇಪಿನಲ್ಲಿ ಯಾರಿಗೆ ಯಾವ ಕ್ಷೇತ್ರದಲ್ಲಿ ಆಸಕ್ತಿ ಇದೆಯೋ, ಆ ಕೆಲಸ ಮಾಡಲು ಶಾಲೆಯ ಅವಧಿಯಲ್ಲಿ ಆಯ್ಕೆ ಮಾಡಿಕೊಂಡು ಮುಂದೆ ಸಾಗುವ ಅವಕಾಶವಿದೆ. 10 ವರ್ಷದಲ್ಲಿ ಇದರ ಸುಧಾರಣೆಯನ್ನು ನಾವು ಕಾಣಲಿದ್ದೇವೆ. ಆ ವಿದ್ಯಾರ್ಥಿಯ ಭಾವನೆಯನ್ನು ನಾನು ಗೌರವಿಸುತ್ತೇನೆ. ಆದರೆ ಆ ವಿದ್ಯಾರ್ಥಿ ದುಡುಕಿಬಿಟ್ಟ ಅನ್ನಿಸುತ್ತದೆ. ಹೀಗೆ ದುಡುಕಬಾರದಿತ್ತು. ತನ್ನ ಅಭಿಪ್ರಾಯ ಹೇಳಕೊಳ್ಳಬಹುದಿತ್ತು. ಪ್ರಾಣ ಕಳೆದುಕೊಳ್ಳುವಂತ ಅವಶ್ಯಕತೆ ಇರಲಿಲ್ಲ. ಅವರ ಕುಟುಂಬಕ್ಕೆ ನಾನು ಸಾಂತ್ವನ ಹೇಳ್ತೀನಿ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

ಇದು ಪಿಕ್ ಪಾಕೆಟ್ ಸರ್ಕಾರ : ಹಿರಿಯೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಸುದ್ದಿಒನ್, ಹಿರಿಯೂರು, ಏಪ್ರಿಲ್, 19  : ಗ್ಯಾರಂಟಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು ಕುಟುಂಬದ ಮುಖ್ಯಸ್ಥರಿಂದ ಪ್ರತಿ ತಿಂಗಳು  5 ರಿಂದ 6 ಸಾವಿರ ವಸೂಲಿ ಮಾಡುತ್ತಿದ್ದಾರೆ . ಇದು

error: Content is protected !!