Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಾಸಣ್ಣನವರ ವ್ಯಕ್ತಿತ್ವ ಮತ್ತು ಸಜ್ಜನಿಕೆಯ ರಾಜಕಾರಣಕ್ಕೆ ನಮ್ಮ ಬೆಂಬಲ : ಶಶಿಧರ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೋಟೆ ರಂಗಸ್ವಾಮಿ, ಗುಬ್ಬಿ
ಮೊ.ನಂ : 9901953364

ಗುಬ್ಬಿ : ಪ್ರತಿಯೊಬ್ಬರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜನ ಸಂಪರ್ಕಕ್ಕೆ ಸಿಗುವ ವ್ಯಕ್ತಿ ವಾಸಣ್ಣನವರು ಮಾತ್ರ ಎಂದು ಮುಖಂಡ  ಶಶಿಧರ್ ತಿಳಿಸಿದರು.

ತಾಲೂಕಿನ ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕಾರ್ಯಕ್ರಮದಲ್ಲಿ ಮಾತನಾಡಿ ಜೆಡಿಎಸ್ ನಲ್ಲಿ ಜಿಲ್ಲಾ ಯೂತ್ ಘಟಕದ ಉಪಾಧ್ಯಕ್ಷನಾಗಿ ಪಕ್ಷ ಸಂಘಟನೆಯಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಿದ್ದು ಕುಮಾರಸ್ವಾಮಿ ಅವರ ಮೋಸದ ರಾಜಕಾರಣದಿಂದ ಬೇಸತ್ತು ರಾಜೀನಾಮೆ ಸಲ್ಲಿಸಿ ವಾಸಣ್ಣನವರ ವ್ಯಕ್ತಿತ್ವ ಮತ್ತು ಸಜ್ಜನಿಕೆಯ ರಾಜಕಾರಣ ಮನಗಂಡು ಬೆಂಬಲಿಸುವುದಾಗಿ ತಿಳಿಸಿದರು.

ಗ್ರಾಮ ಪಂಚಾಯಿತಿ ಸದಸ್ಯ ಸಿದ್ದಲಿಂಗಯ್ಯ ಮಾತನಾಡಿ ವಾಸಣ್ಣನವರು ನಮ್ಮ ಭಾಗಕೆ 6 ಕೋಟಿ ಅಧಿಕ ಅನುದಾನ ಬಿಡುಗಡೆಗೊಳಿಸಿ ಸಿಸಿ ರಸ್ತೆ ಬಾಕ್ಸ್ ಚರಂಡಿ ಓವರ್ ಟ್ಯಾಂಕ್ ನಿರ್ಮಾಣ ಸೇರಿದಂತೆ ಅನೇಕ ಕಾಮಗಾರಿಗಳು ಪ್ರಗತಿಯಲ್ಲಿವೆ ಇಂತಹ ಅಭಿವೃದ್ಧಿ ಹರಿಕಾರ ನಮ್ಮ ವಾಸಣ್ಣನವರನ್ನು ಜನರು ಯಾವತ್ತೂ ಕೈಬಿಡುವುದಿಲ್ಲ ಅತ್ಯಧಿಕ ಮತಗಳಿಂದ ಗೆಲ್ಲುತ್ತಾರೆ ಎಂದು ತಿಳಿಸಿದರು.

ಮುಖಂಡ ಮಾರ ಶೆಟ್ಟಿಹಳ್ಳಿ ಬಸವರಾಜ್ ಮಾತನಾಡಿ ಯಾವುದೇ ಸಂಘರ್ಷಗಳಾಗದಂತೆ ಎಲ್ಲಾ ಜನಾಂಗವನ್ನು ಸರಿ ಸಮಾನವಾಗಿ ಕಂಡಿದ್ದಾರೆ ಎಲ್ಲಾ ಜನಾಂಗವು ಸಹ ವಾಸಣ್ಣನವರ ಪರವಾಗಿ ಇದೆ ಎಂದರು.

ದೊಡ್ಡಕೆಂಪಯ್ಯಮಾತನಾಡಿ ವಾಸಣ್ಣನವರಿಗೆ ಜನ ಬೆಂಬಲ ಹಾಗೂ ಜನಾಶೀರ್ವಾದ ಇದೆ ಯಾರಿಗೂ ಹೆದರುವ ಅವಶ್ಯಕತೆ ವಾಸಣ್ಣನವರನ್ನು ಮಂತ್ರಿ ಮಾಡಿ ಕೆಂಪು ಲೈಟಿನ ಕಾರನ್ನು ಕೊಟ್ಟು ಅಧಿಕಾರ ಮಾಡಲು ಬಿಡದೆ ಕುಮಾರಸ್ವಾಮಿಯವರು ತಾಲೂಕಿನ ಜನತೆಗೆ ಮೋಸ ಮಾಡಿದ್ದಾರೆ ಎಂದು  ತಿಳಿಸಿದರು.

ಕುಂದರನಹಳ್ಳಿ ನಟರಾಜ್ ಮಾತನಾಡಿ ಈ  ಭಾಗದ ಎಲ್ಲಾ ಕಾರ್ಯಕರ್ತರು ಸಹ ವಾಸಣ್ಣನವರನ್ನು ಬೆಂಬಲಿಸಲು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇವೆ ನಮ್ಮ ಗುರಿ ವಾಸಣ್ಣನವರನ್ನು ಗೆಲ್ಲಿಸುವುದು ಬಿಟ್ಟರೆ ಸುಳ್ಳು ವದಂತಿಗಳಿಗೆ  ತಲೆಕೆಡಿಸಿಕೊಳ್ಳುವುದಿಲ್ಲ  ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಾಸಣ್ಣ ಅಭಿಮಾನಿ ಬಳಗದ ಮುಖಂಡ ಕೆ ಆರ್ ವೆಂಕಟೇಶ್, ಜಯಣ್ಣ, ಗುರುಪ್ರಸಾದ್, ಸಣ್ಣರಂಗಯ್ಯ, ರಾಜಣ್ಣ, ಚಿಕ್ಕಣ್ಣ, ದೊಡ್ಡಕೆಂಪಯ್ಯ,  ಮುಂತಾದವರು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...