Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಕೆ ಶಿವಕುಮಾರ್ ಸಿಎಂ ಆದ್ರೆ ನಮ್ಮ ಬೆಂಬಲ : ಕುಮಾರಸ್ವಾಮಿ ಹೇಳಿಕೆ

---Advertisement---

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಈಗಾಗಲೇ ನಾನೇ ಸಿಎಂ ಎಂಬ ವಿಚಾರವಾಗಿ ಸಾಕಷ್ಟು ಪರ ವಿರೋಧ ಕೇಳಿ ಬರುತ್ತಿದೆ. ಸಿಎಂ ಸಿದ್ದರಾಮಯ್ಯ ನಾನೇ ಸಿಎಂ ಐದು ವರ್ಷ ಎಂದು ಹೇಳಿದ್ದಾರೆ. ಇದಕ್ಕೆ ಡಿಕೆಶಿ ಮುನಿಸಿಕೊಂಡವರಂತೆ ಕಾಣುತ್ತಿದೆ. ಡಿಕೆಶಿ ಬೆಂಬಲಿಗರು ಕೂಡ ಈಗಾಗಲೇ ಸಿದ್ದರಾಮಯ್ಯ ಮೇಲೆ ಗರಂ ಆಗಿದ್ದಾರೆ. ಇದೀಗ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೊಸ ವಿಚಾರ ಹೇಳಿದ್ದಾರೆ. ಡಿಕೆ ಶಿವಕುಮಾರ್ ಸಿಎಂ ಆದರೆ ಜೆಡಿಎಸ್ ಬೆಂಬಲ ಕೊಡುತ್ತೆ ಎಂದಿದ್ದಾರೆ.

 

ನಾಳೆ ಬೆಳಗ್ಗೆಯೇ ಡಿಕೆ ಶಿವಕುಮಾರ್ ಸಿಎಂ ಆದರೆ ಜೆಡಿಎಸ್ ನ 19 ಶಾಸಕರು ಬೆಂಬಲ ನೀಡುತ್ತಾರೆ. ಡಿಕೆ ಶಿವಕುಮಾರ್ ಅವರಿಗೆ ನಾವೂ ಬೆಂಬಲ ನೀಡುತ್ತೇವೆ ಎಂದಿದ್ದಾರೆ. ನಾನ್ಯಾಕೆ ಅವರಿಗೆ ಅಡ್ಡಿಯಾಗಲಿ, ನಮ್ಮ ಎಂಎಲ್ಎಗಳಿಗೆ ದಿನ ಬೆಳಗಾದ್ರೆ ಪಕ್ಷಕ್ಕೆ ಬನ್ನಿ ಅಂತ ಅರ್ಜಿ ಹಾಕ್ತಾರೆ. ನನಗೇನು ವೈರತ್ವ ಇಲ್ಲ. ನಾವೇ ಡಿಕೆ ಶಿವಕುಮಾರ್ ಅವರಿಗೆ ಬೆಂಬಲ ಕೊಡುತ್ತೇವೆ ಎಂದಿದ್ದಾರೆ.

ಕಾಂಗ್ರೆಸ್ ಸರ್ಕಾರ ರಚನೆಯಾಗುವಾಗಲೇ ಮೊದಲು ಸಿದ್ದರಾಮಯ್ಯ ಅವರು ಸಿಎಂ ಆಗುತ್ತಾರೆ. ಬಳಿಕ ಡಿಕೆ ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂಬ ನಿರ್ಧಾರವಾಗಿದೆ ಎಂದೇ ಹೇಳಲಾಗಿತ್ತು. ಅದಕ್ಕೆಂದೆ ಡಿಕೆ ಶಿವಕುಮಾರ್ ಅವರು ಡಿಸಿಎಂ ಹುದ್ದೆ ಒಪ್ಪಿದ್ದಾರೆ ಎನ್ನಲಾಗಿತ್ತು. ಇದೀಗ ಕಾಂಗ್ರೆಸ್ ನಲ್ಲಿ ಹೊಗೆಯಾಡುತ್ತಿರುವ ಸಿಎಂ ಹುದ್ದೆ ವಿಚಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ತುಪ್ಪ ಸುರಿದಂತೆ ಆಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...