Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಲವಂತವಾಗಿ ಮತಾಂತರ ಮಾಡುತ್ತಿರುವವರ ವಿರುದ್ಧ ನಮ್ಮ ಸಮರ: ಗೂಳಿಹಟ್ಟಿ ಶೇಖರ್

Facebook
Twitter
Telegram
WhatsApp

ಬೆಂಗಳೂರು :ಹುಟ್ಟಿದಾಗಿನಿಂದ ಕ್ರೈಸ್ತರಾಗಿರುವವರ ಧಾರ್ಮಿಕ ಭಾವನೆಗೆ ನೋವು ಬರುವಂತೆ ನಾನು ಮಾತನಾಡುವುದಿಲ್ಲ. ನನ್ನ ಮಾತಿನಿಂದ ನೋವಾಗಿದ್ರೆ ಬಹಿರಂಗವಾಗಿ ಕ್ಷಮೆ ಕೇಳುತ್ತೇನೆ ಎಂದು ಶಾಸಕ ಗೂಳಿಹಟ್ಟಿ ಶೇಖರ್ ಹೇಲಿದರು. ಈ ವೇಳೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ಸರ್ಕಾರ ಮೂಲ ಕ್ರಿಶ್ಚಿಯನ್ ಸಮುದಾಯದವರ ಪರವಾಗಿದೆ. ನಾವೂ ಕೂಡ ಕ್ರೈಸ್ತ ಸಮಾಜ, ಮಿಷನರಿ ಪರವಾಗಿದ್ದೇವೆ.ಆದರೆ ಬಲವಂತವಾಗಿ ಮತಾಂತರ ಮಾಡುತ್ತಿರುವವರ ವಿರುದ್ಧ ನಮ್ಮ ಸಮರ ಇದ್ದೇ ಇರುತ್ತದೆ. ಹಾಗಾಗಿ ಯಾರೂ ಆತಂಕ ಪಡುವ ಅಗತ್ಯ ಇಲ್ಲ ಎಂದು ಹೇಳಿದರು.

ಹುಟ್ಟಿದಾಗಿನಿಂದ ಕ್ರೈಸ್ತರಾಗಿರುವವರ ಧಾರ್ಮಿಕ ಭಾವನೆಗೆ ನೋವು ಬರುವಂತೆ ನಾವು ಮಾತನಾಡುವುದಿಲ್ಲ. ನನ್ನ ಮಾತಿನಿಂದ ನೋವಾಗಿದ್ರೆ ಬಹಿರಂಗವಾಗಿ ಕ್ಷಮೆ ಕೇಳುತ್ತೇನೆ. ಸಣ್ಣ ಪುಟ್ಟ ನೋವಾಗಿದ್ರೆ, ನಮಗೂ ಆಗಿದೆ. ಹಿಂದೂಗಳಾಗಿ ಹುಟ್ಟಿ, ನಾವು ಸಾಕಷ್ಟು ನೋವು ತಿನ್ನುತ್ತಿದ್ದೇವೆ. ನಾನು ಬ್ಯಾಕ್‌ವರ್ಡ್, ಮೈನಾರಿಟಿ ಸಮಿತಿಯಲ್ಲಿದ್ದೇನೆ. ಅಲ್ಲಿರುವ ಕಲ್ಯಾಣ ಕಾರ್ಯಕ್ರಮದಲ್ಲಿ ಪ್ರತೀ ತಿಂಗಳು ಪರಿಶೀಲನಾ ಸಭೆ ಮಾಡುತ್ತೇವೆ.

ಹಿಂದುಳಿದವರು ಶೇ 75 ಇದ್ದಾರೆ. ಅಲ್ಪಸಂಖ್ಯಾತ ಸಮುದಾಯದಲ್ಲಿ ಮುಸ್ಲಿಂ, ಸಿಖ್, ಪಾರ್ಸಿ ಎಲ್ಲರೂ ಬರುತ್ತಾರೆ. ಮುಸ್ಲಿಂ ಕಾರ್ಯಕ್ರಮದಲ್ಲಿ ಶಾದಿ ಮಾಲ್ ಸೇರಿದಂತೆ ಹಲವು ವಿಚಾರ ಚರ್ಚೆಗೆ ಬರಲಿದೆ ಎಂದರು.ಸಹಜವಾಗಿ ಎಷ್ಟು ಮಸೀದಿ, ಚರ್ಚ್ ಇದೆ ಎಂದು ಕೇಳಿದ್ದೇವೆ. ದರ್ಗ, ಚರ್ಚ್, ಸ್ಮಶಾನ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಬೇಕು. ಹಾಗಾಗಿ ಕಮಿಟಿಯಲ್ಲಿ ವರದಿ ಕೇಳಿದ್ದೇವೆ. ಸುಮಾರು 1,790 ಚರ್ಚ್ ಇರುವುದಾಗಿ ಮಾಹಿತಿ ನೀಡಿದ್ದಾರೆ ಎಂದು ವಿವರಿಸಿದರು. ಆದರೆ ಚರ್ಚ್ಗಳ ಮಾಹಿತಿ ಕಲೆಹಾಕುವ ಸಂದರ್ಭದಲ್ಲಿ ಗಲಾಟೆ ನಡೆಸಿದರು ಎಂದು ಅಧಿಕಾರಿಗಳು ತಿಳಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆ | ರೈತ ಆತ್ಮಹತ್ಯೆ

ಸುದ್ದಿಒನ್, ಚಳ್ಳಕೆರೆ, ಮೇ. 12 : ತಾಲೂಕಿನ ಬಾಲೇನಹಳ್ಳಿ ಗ್ರಾಮದ ಮೋಹನ್ ಕುಮಾರ್(36) ಎಂಬ ರೈತ ಬೆಳಗಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ಭಾನುವಾರ ಬೆಳಗಿನ ಜಾವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ

ಹೊಸದುರ್ಗ | ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲ್,‌ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

  ಸುದ್ದಿಒನ್, ಚಿತ್ರದುರ್ಗ, ಮೇ. 12  : ಇತ್ತಿಚೀಗಷ್ಟೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಜಿಲ್ಲೆ 21ನೇ ಸ್ಥಾನ ಪಡೆದುಕೊಂಡಿದೆ. ಇತ್ತ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ

ಖ್ಯಾತ ಕಿರುತೆರೆ ನಟಿ ಪವಿತ್ರಾ ಜಯರಾಮ್ ಅಪಘಾತದಲ್ಲಿ ಸಾವು…!

ಬೆಂಗಳೂರು : ಇಂದು ತಾಯಂದಿರ ದಿನ. ಎಲ್ಲರೂ ತಮ್ಮ ತಾಯಂದಿರ ಫೋಟೋ ಹಾಕಿಕೊಂಡು ವಿಶ್ ಮಾಡುತ್ತಿದ್ದಾರೆ. ತಾಯಂದಿರಿಗೆ ಗಿಫ್ಟ್ ಕೊಟ್ಟು ಸಂಭ್ರಮಿಸುತ್ತಿದ್ದಾರೆ. ಆದರೆ ಈ ನಟಿಯ ಮಕ್ಕಳಿಗೆ ಆ ಯೋಗ ಇಲ್ಲ. ಅಮ್ಮನನ್ನು ತಬ್ಬಿ

error: Content is protected !!