Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಾಲಿನ ದರ ಏರಿಕೆಗೆ ಆಕ್ರೋಶ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

Facebook
Twitter
Telegram
WhatsApp

ಬೆಂಗಳೂರು: ಸಾಮಾನ್ಯ ಜನ ಈ ಬೆಲೆ ಏರಿಕೆಯಿಂದಾನೇ ತತ್ತರಿಸಿ ಹೋಗಿದ್ದಾರೆ‌. ಮೊನ್ನೆಯಷ್ಟೇ ಪೆಟ್ರೋಲ್-ಡಿಸೇಲ್ ದರ ಏರಿಕೆಯಾಗಿದೆ. ಈಗ ಹಾಲಿನ ದರವನ್ನು ಏರಿಕೆ ಮಾಡಲಾಗಿದೆ. 2 ರೂಪಾಯಿ ಏರಿಕೆ ಮಾಡಿ 50 ML ಹಾಲನ್ನು ಜಾಸ್ತಿ ನೀಡಲಾಗುತ್ತಿದೆ. ಆದರೆ ದಿಢೀರನೇ ಎರೆಉ ರೂಪಾಯಿ ಏರಿಕೆಯಾಗಿದ್ದು ಗ್ರಾಹಕರಿಗೆ ಹೆಚ್ಚುವರಿಯಾದಂತೆಯೇ ಆಗಿದೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ. ನಂದಿನಿ ಹಾಲಿನ ಪ್ಯಾಕೆಟ್ ನಲ್ಲಿ ಹಾಲಿನ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. 50 ಮಿಲೀ ಹೆಚ್ಚಳ ಮಾಡಿ, ಅದಕ್ಕೆ 2 ರೂಪಾಯಿ ದರ ನಿಗದಿ ಮಾಡಲಾಗಿದೆ. ಹಾಲಿನ ಬೆಲೆಯಲ್ಲು ಯಾವುದೇ ರೀತಿಯ ಏರಿಕೆ ಮಾಡಿಲ್ಲ. ಹಾಲು ಸಂಗ್ರಹಣಾ ಕೇಂದ್ರದಲ್ಲಿ ರೈತರು ಹೆಚ್ಚುವರಿಯಾಗಿ ತರುವ ಹಾಲನ್ನು ವಾಪಾಸ್ ಕಳುಹಿಸಬಾರದು ಎಂಬ ಉದ್ದೇಶಕ್ಕೆ ಈ ರೀತಿ ಹೆಚ್ಚುವರಿ ಹಾಲನ್ನು ಪಾಕೇಟ್ ನಲ್ಲಿ ಹಾಕಲಾಗುತ್ತಿದೆ.

ಈ ಬಾರಿ ಕಳೆದ ವರ್ಷಕ್ಕಿಂತ ಶೇಕಡ 15ರಷ್ಟು ಹಾಲು ಉತ್ಪಾದನೆಯಲ್ಲಿ ಹೆಚ್ಚಳವಾಗಿದೆ. ಹೀಗೆ ಹೆಚ್ಚುವರಿಯಾಗಿ ಉತ್ಪಾದನೆಯಾಗುವ ಹಾಲನ್ನು ರೈತರಿಂದ ಖರೀದಿ ಮಾಡಬೇಕು. ಹೀಗಾಗಿ ಹಾಲಿನ ಪ್ರಮಾಣವನ್ನು ಹೆಚ್ಚಳ ಮಾಡಿ, ಗ್ರಾಹಕರಿಂದ 2 ರೂಪಾಯಿ ಹೆಚ್ಚುವರಿಯಾಗಿ ಪಡೆಯುತ್ತಿದ್ದೇವೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ವೇಳೆ ರಾಜ್ಯದಲ್ಲಿ ನಿತ್ಯ ಸರಾಸರಿ 72 ಲಕ್ಷ ಲೀಟರ್ ಗಳಷ್ಟು ಹಾಲು ಸಂಗ್ರಹವಾಗುತ್ತಿತ್ತು. ಈ ಹಿಂದೆ ಹಾಲಿನ ಬೆಲೆಯಲ್ಲಿ 3 ರೂಪಾಯಿ ಹೆಚ್ಚಳ ಮಾಡಿ ಆ ಹೆಚ್ಚಳದ ಬೆಲೆಯನ್ನು ನೇರವಾಗಿ ರೈತರಿಗೆ ವರ್ಗಾಯಿಸುವಂತೆ ಮಾಡಲಾಗಿತ್ತು. ಈ ಬಾರಿ ಉತ್ತಮ ಮಳೆಯಾಗುತ್ತಿರುವ ಕಾರಣ ಹಾಲು ಉತ್ಪಾದನೆಯೂ ಹೆಚ್ಚಾಗಲಿದೆ. ಹೀಗಾಗಿ ಈ ನಿರ್ಧಾರ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಚಲಪತಿ ನಿಧನ

  ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 28 :ನಗರದ ತುರುವನೂರು ರಸ್ತೆ ನಿವಾಸಿ, ಶಿಕ್ಷಣ ಇಲಾಖೆ ನಿವೃತ್ತ ನೌಕರ ಚಲಪತಿ (66) ಅನಾರೋಗ್ಯದಿಂದ ಶನಿವಾರ ರಾತ್ರಿ ನಿಧನರಾದರು. ಮೃತರು ಪತ್ನಿ, ವಿಜಯಕರ್ನಾಟಕ ಚಿತ್ರದುರ್ಗ ಜಿಲ್ಲಾ ಪ್ರಸರಾಂಗ

ಮನು ಕುಲದ ಆಯಸ್ಸನ್ನು ಹೆಚ್ಚಿಸಿದ್ದು ವೈದ್ಯರು: ಸಿ.ಎಂ.ಸಿದ್ದರಾಮಯ್ಯ ಪ್ರಶಂಸೆ

ಮೈಸೂರು ಸೆ 28 : ವೈದ್ಯರು ಮತ್ತು ವೈದ್ಯಕೀಯ ಕ್ಷೇತ್ರ ಮನುಕುಲದ ಆಯಸ್ಸನ್ನು ಹೆಚ್ಚಿಸುವಲ್ಲಿ ಯಶಸ್ವಿಯಾಗಿದೆ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರಶಂಸೆ ವ್ಯಕ್ತಪಡಿಸಿದರು.   ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶತಮಾನೋತ್ಸವದ ಸಮಾರೋಪ

ಈ ಬಾರಿಯ ಬಿಗ್ ಬಾಸ್ ಗೆ ಹೋಗ್ತಿದ್ದಾರೆ ಈ ಸ್ಟಾರ್ ಗಳು : ಕನ್ಫರ್ಮ್ ಸುದ್ದಿ ಇದು..!

ಬೆಂಗಳೂರು : ಬಿಗ್ ಬಾಸ್ ಕನ್ನಡ‌ ಸೀಸನ್ 11ಗೆ ಕ್ಷಣಗಣನೆ ಶುರುವಾಗಿದೆ. ಬಿಗ್ ಬಾಸ್ ಮನೆಯೊಳಗೆ ಹೋಗೋದು ಯಾರು ಎಂಬ ಕುತೂಹಲ ಇಡೀ ಕರ್ನಾಟಕದ ಜನತೆಗೆ ಇದೆ. ಇಂದು ಸಂಜೆ ಅದಕ್ಕೆ ಕೊಂಚ ತೆರೆ

error: Content is protected !!