Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಕೆಶಿ ಬಣದಿಂದ ರಾತ್ರೋ ರಾತ್ರಿ ಮೀಟಿಂಗ್ : ಏನೆಲ್ಲಾ ಚರ್ಚೆಯಾಯ್ತು..?

ಡಿಕೆ ಶಿವಕುಮಾರ್
---Advertisement---

ಬೆಂಗಳೂರು: ಹೈಕಮಾಂಡ್ ಹೇಳ್ತಿಲ್ಲ.. ಇವ್ರು ಬಿಡ್ತಿಲ್ಲ.. ಖುರ್ಚಿ ಕದನ ನಿಂತಿದೆ ಅಂತ ಅಂದುಕೊಂಡರೆ ಮತ್ತೆ ಮತ್ತೆ ಸದ್ದು ಮಾಡ್ತಾನೆ ಇದೆ. ಇದೀಗ ಡಿಕೆ ಶಿವಕುಮಾರ್ ಅವರ ಆಪ್ತರೆಲ್ಲಾ ಸೇರಿ ಡಿನ್ನರ್ ಮೀಟಿಂಗ್ ನಡೆಸಿದ್ದಾರೆ. 40 ಶಾಸಕರು ಸೇರಿ ಈ ಸಭೆಯನ್ನ ನಡೆಸಿದ್ದಾರೆ. ಈ ಮೂಲಕ ಶಕ್ತಿ ಪ್ರದರ್ಶನ ನಡೆಸ್ತಿದ್ದಾರೆ ಎನ್ನಲಾಗಿದೆ.

ಹೈಕಮಾಂಡ್ ನಿರ್ಧಾರ ಕೈಗೊಳ್ಳದೆ ಇದ್ದರೆ ದೊಡ್ಡ ಹೆಜ್ಜೆಯನ್ನ ಇಡುವಂತ ಸೂಚನೆಯನ್ನ ನೀಡಿದ್ದಾರೆ. ಮುಂದಿನ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಗೊಂದಲವನ್ನ ಪರಿಹರಿಸಿ. ಗೊಂದಲದ ವಾತಾವರಣದಿಂದ ಪಕ್ಷದ ಮೇಲೆ ದುಷ್ಪರಿಣಾಮ ಬೀರ್ತಾ ಇದೆ. ರಾಜ್ಯದ ಜನರಿಗೂ ಕೆಟ್ಟ ಸಂದೇಶ ರವಾನೆಯಾಗ್ತಾ ಇದೆ. ಮಾತು ಕೊಟ್ಟಿದ್ದರೆ, ಕೊಟ್ಟ ಮಾತನ್ನ ಉಳಿಸಿಕೊಳ್ಳಲಿ ಎಂದು ಶಾಸಕರು ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ.

ಈ ಸಭೆಯ ಬಗ್ಗೆ ಶಾಸಕ ರವಿ ಗಣಿಗ ಪ್ರತಿಕ್ರಿಯೆ ನೀಡಿದ್ದು, ಒಳ್ಳೆ ನಾಟಿಕೊಳಿ ಬಿರಿಯಾನಿ ತರಿಸಿದ್ರು ಚೆನ್ನಾಗಿ ತಿಂದೊ ಅಷ್ಟೇ. ಇದು ಬರ್ತ್ ಡೇ ಪಾರ್ಟಿ ಅಷ್ಟೆ. 30-40 ಜನ ಎಂಎಲ್ಎಗಳು ಬಂದಿದ್ದಾರೆ ಸಿಎಂ ಬದಲಾವಣೆ ಮಾಡೋದಕ್ಕೆ‌ ಆಗುತ್ತಾ. ಬರ್ತ್ ಡೇ ಪಾರ್ಟಿಗೆ ಕರೆದಿದ್ದರು ಬಂದಿದ್ದೆವು, ಊಟ ಮಾಡಿದೆವು ಅಷ್ಟೇ. ಇನ್ನು ಎರಡೂವರೆ ವರ್ಷ ಇದೆ. ಸರ್ಕಾರ ಚೆನ್ನಾಗಿ ನಡೀತಾ ಇದೆ. ಅದರಿಂದ ಅದನ್ನೆಲ್ಲಾ ಮಾತನಾಡೋದು ಪ್ರಿ‌ಮೆಚ್ಯೂರ್ ಅಂತ ಬಾಲಕೃಷ್ಣ ಅವರ ಹೇಳಿಕೆಗೆ ಉತ್ತರ ನೀಡಿದರು. ಮುಂದಿನ ಸಲ ಕಾಂಗ್ರೆಸ್ ಅಧಿಕಾರಕ್ಕೆ ಬರುವುದೇ ಅನುಮಾನ ಎಂಬ ಮಾತನ್ನ ಶಾಸಕ ಬಾಲಕೃಷ್ಣ ಅವರು ಹೇಳಿದ್ದಾರೆ. ಈ ಹೇಳಿಕೆ ಹಲವರಿಗೆ ಶಾಕ್ ನೀಡಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now