Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಿ.ಯು. ಫಲಿತಾಂಶ ಪ್ರಕಟ : ಚಿತ್ರದುರ್ಗ ಜಿಲ್ಲೆಗೆ 31 ನೇ ಸ್ಥಾನ, ಶೇ.72.92 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

Facebook
Twitter
Telegram
WhatsApp

ಚಿತ್ರದುರ್ಗ. ಏ.10: ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗಗಳಿಂದ ಒಟ್ಟು 13,348 ವಿದ್ಯಾರ್ಥಿಗಳ ಪರೀಕ್ಷೆ ಬರೆದಿದ್ದರು. ಈ ಪೈಕಿ 9734 ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಶೇ.72.92 ರಷ್ಟು ವಿದ್ಯಾರ್ಥಿಗಳ ಉತ್ತೀರ್ಣರಾಗುವುದರೊಂದಿಗೆ ರಾಜ್ಯದಲ್ಲಿ 31 ಸ್ಥಾನವನ್ನು ಜಿಲ್ಲೆ ಪಡೆದುಕೊಂಡಿದೆ.

ಕಲಾ ವಿಭಾಗದಲ್ಲಿ ಜಿಲ್ಲೆಗೆ ಶೇ.57.79 ಫಲಿತಾಂಶ ಲಭ್ಯವಾಗಿದ್ದು, ಪರೀಕ್ಷೆ ಬರೆದ 3990 ವಿದ್ಯಾರ್ಥಿಗಳ ಪೈಕಿ 2306 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಗೆ ಶೇ.75.07 ಫಲಿತಾಂಶ ಬಂದಿದ್ದು, ಪರೀಕ್ಷೆ ಬರೆದ 3437 ವಿದ್ಯಾರ್ಥಿಗಳ ಪೈಕಿ 2580 ವಿದ್ಯಾರ್ಥಿಗಳು ಉತ್ತೀರ್ಣರಾಗಿದಾರೆ. ವಿಜ್ಞಾನ ವಿಭಾಗದಲ್ಲಿ ಶೇ.81.88 ಫಲಿತಾಂಶ ಲಭ್ಯವಾಗಿದ್ದು, ಪರೀಕ್ಷೆ ಬರೆದ 5921 ವಿದ್ಯಾರ್ಥಿಗಳ ಪೈಕಿ 4848 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

 

ಇದರ ಹೊರತಾಗಿ ಪರೀಕ್ಷೆಗೆ ಹಾಜರಾದ 965 ಪುನಾರವರ್ತಿತ ವಿದ್ಯಾರ್ಥಿಗಳ ಪೈಕಿ 402 ಹಾಗೂ 385 ಖಾಸಗಿ ವಿದ್ಯಾರ್ಥಿಗಳ ಪೈಕಿ 123 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 2023ರ ನೇ ಸಾಲಿನಲ್ಲಿ ಪಿ.ಯು.ವಾರ್ಷಿಕ ಪರೀಕ್ಷೆಯಲ್ಲಿ ಜಿಲ್ಲೆಗೆ ಶೇ.69.5 ರಷ್ಟು ಫಲಿತಾಂಶ ಲಭ್ಯವಾಗಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!