Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ಪಾದಯಾತ್ರೆ : ತಾರಕ್ಕೇರಿದ ಮೇಕೆ.. ಮಾಂಸ..ಮಸಾಲೆ.. ಜಟಾಪಟಿ..!

Facebook
Twitter
Telegram
WhatsApp

 

ಬೆಂಗಳೂರು: ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ನಾಯಕರು ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಇದನ್ನ ಬಿಜೆಪಿ ನಾಯಕರು ವ್ಯಂಗ್ಯ ಮಾಡುತ್ತಲೆ ಬಂದಿದ್ದಾರೆ. ನಿನ್ನೆಯಷ್ಟೇ ಸಚಿವ ಆರ್ ಅಶೋಕ್ ಡಿ ಕೆ ಶಿವಕುಮಾರ್ ಅವರಿಗೆ ತಿರುಗೇಟು ನೀಡಿದ್ದರು. ಮೇಕೆದಾಟುಗೆ ಮೇಕೆ ಮಾಂಸ ತಿನ್ನಲು ಹೋಗ್ತಿದ್ದಾರೆ. ಅವರಿಗೆ ಮಾಂಸವೂ ಸಿಗಲ್ಲ, ಮೇಕೆಯೂ ಸಿಗಲ್ಲ ಎಂದಿದ್ದರು.

ಇದೀಗ ಸಚಿವ ಅಶೋಕ್ ಅವರ ಮಾತಿಗೆ ಡಿಕೆಶಿ ತಿರುಗೇಟು ನೀಡಿದ್ದು, ಅಶೋಕಣ್ಣನಿಗೆ ಬೆಂಗಳೂರಿನ ಬಗ್ಗೆ ಕಾಳಜಿ ಇದ್ರೆ ತಾನೆ. ಇದು ಅಶೋಕಣ್ಣನಿಗೆ ಅರಿವಿಲ್ಲ. ಯಾರಿಗೂ ಮೇಕೆ ಮಾಂಸ ತಿನ್ನಿಸೋಕೆ ಪ್ರಯತ್ನಿಸಿಲ್ಲ. ನಾವೂ ಜನರಿಗೆ ನೀರು ಕೊಡ್ಬೇಕು ಅಂತ ಬಯಸ್ತಿದ್ದೇವೆ.ವಇದು ಕುಡಿಯುವ ನೀರಿನ ಯೋಜನೆ ಬೆಂಬಲ ಕೊಡಿ ಎಂದಿದ್ದಾರೆ.

ಇತ್ತ ಡಿಕೆಶಿಗೆ ಸಚಿವ ಅಶೋಕ್ ಕೂಡ ತಿರುಗೇಟು ನೀಡಿದ್ದು, ಚಾಟ್ ಮಸಾಲೆ ತೆಗೆದುಕೊಂಡು ಮೇಕೆದಾಟುಗೆ ಹೋಗ್ತಿದ್ದಾರೆ. ಆರು ವರ್ಷ ಆಡಳಿತದಲ್ಲಿದ್ದಾಗ ಏನು ಮಾಡಿದ್ರು. ಕೋಳಿ ಕೇಳಿ ಮಸಾಲೆ ಅರಿಬೇಕಾ ಎಂದಿದ್ದ ಡಿಕೆಶಿ ಮಾತಿಗೆ ನಂಗೆ ಯಾವ ಮಸಾಲೆಯೂ ಬೇಡ ಎಂದ ಅಶೋಕ್ ಟಾಂಗ್ ಕೊಟ್ಟಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!