ಸುದ್ದಿಒನ್ : ಅಮಾಯಕರು ಮತ್ತು ಚಿಕ್ಕ ಮಕ್ಕಳನ್ನು ಕೊಲ್ಲಲು ಇಸ್ಲಾಂ ಹೇಳುವುದಿಲ್ಲ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಪಾಕಿಸ್ತಾನ ಇಸ್ಲಾಂ ಹೆಸರಿನಲ್ಲಿ ಸುಳ್ಳು ಪ್ರಚಾರ ಮಾಡುತ್ತಿದೆ. ಪಾಕಿಸ್ತಾನದ ಸಿದ್ಧಾಂತವನ್ನು ನಾವು ಒಪ್ಪುವುದಿಲ್ಲ ಎಂದು ಹೇಳಿದರು. ಪವಿತ್ರ ಮಾಸದಲ್ಲಿ ಮಕ್ಕಳು ಮತ್ತು ಮುಗ್ಧ ಜನರನ್ನು ಕೊಲ್ಲುವ ಪಾಕಿಸ್ತಾನಕ್ಕೆ ಇಸ್ಲಾಂ ಎಂದು ಕರೆಯಲು ಅರ್ಹವಲ್ಲ ಎಂದು ಅವರು ಹೇಳಿದರು. ಭಾರತ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಪಾಕಿಸ್ತಾನ ದಾಳಿ ಮಾಡಿದರೆ, ಭಾರತ ಇನ್ನೂ ಹೆಚ್ಚು ಪ್ರತಿ ದಾಳಿ ಮಾಡುತ್ತದೆ. ಆ ದೇವರ ಕೃಪೆಯಿಂದ ನಾವು ಈ ಭಾರತದ ನೆಲದಲ್ಲಿ ಜನಿಸಿದ್ದೇವೆ. ಮತ್ತು ಈ ನೆಲಕ್ಕಾಗಿ ನಾವು ನಮ್ಮ ಪ್ರಾಣವನ್ನೇ ತ್ಯಾಗ ಮಾಡುತ್ತೇವೆ ಎಂದು ಅವರು ಹೇಳಿದರು.
ಪಾಕಿಸ್ತಾನದ ಅಭಿಪ್ರಾಯಗಳನ್ನು ತಿರಸ್ಕರಿಸುವಂತೆ ಪ್ರತಿಯೊಬ್ಬ ಭಾರತೀಯರಿಗೂ ಎಐಎಂಐಎಂ ಪಕ್ಷದ ಮುಖ್ಯಸ್ಥ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಕರೆ ನೀಡಿದ್ದಾರೆ. ಹೈದರಾಬಾದ್ನ ಬಶೀರ್ ಬಾಗ್ ಪ್ರೆಸ್ ಕ್ಲಬ್ನಲ್ಲಿ ನಡೆದ ತೆಲಂಗಾಣ ಉರ್ದು ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಓವೈಸಿ, ಮಾಧ್ಯಮ ಅಕಾಡೆಮಿ ಅಧ್ಯಕ್ಷ ಶ್ರೀನಿವಾಸ್ ರೆಡ್ಡಿ ಮತ್ತು ಸರ್ಕಾರಿ ಸಲಹೆಗಾರ ಶಬ್ಬೀರ್ ಅಲಿ ಅವರೊಂದಿಗೆ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಉರ್ದು ಪತ್ರಕರ್ತರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಿದ ನಂತರ ಮಾತನಾಡಿದ ಅವರು, ಇಸ್ಲಾಂ ಧರ್ಮದ ಹೆಸರಿನಲ್ಲಿ ಪಾಕಿಸ್ತಾನ ನರಮೇಧವನ್ನು ಸೃಷ್ಟಿಸುತ್ತಿದೆ ಎಂದು ಟೀಕಿಸಿದರು.
ಭಾರತದಿಂದ ಬೇರ್ಪಟ್ಟ ನಂತರ, ಪಾಕಿಸ್ತಾನ ಇಲ್ಲಿನ ಹಿಂದೂಗಳು ಮತ್ತು ಮುಸ್ಲಿಮರ ನಡುವೆ ದ್ವೇಷವನ್ನು ಪ್ರಚೋದಿಸಲು ಪ್ರಯತ್ನಿಸಿತ್ತಿದೆ. ಪಹಲ್ಗಾಮ್ನಲ್ಲಿ ಅವರ ಕುಟುಂಬ ಸದಸ್ಯರ ಮುಂದೆಯೇ ಅವರನ್ನು ಕ್ರೂರವಾಗಿ ಹತ್ಯೆ ಮಾಡಲಾಯಿತು. ಪ್ರತೀಕಾರವಾಗಿ ಭಾರತೀಯ ಸೈನಿಕರು ಆಪರೇಷನ್ ಸಿಂಧೂರ್ ಮೂಲಕ ಸೂಕ್ತ ಉತ್ತರ ನೀಡುತ್ತಿದ್ದಾರೆ. ಪಾಕಿಸ್ತಾನ ಸೇನೆಯು ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದು, ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಓವೈಸಿ ಹೇಳಿದರು. ಭಾರತೀಯ ಮುಸ್ಲಿಮರು ದೇಶಕ್ಕಾಗಿ ತಮ್ಮ ಪ್ರಾಣವನ್ನು ನೀಡಲು ಸಿದ್ಧರಿದ್ದಾರೆ ಮತ್ತು ಸೈನಿಕರ ಬೆಂಬಲಕ್ಕೆ ನಿಲ್ಲುತ್ತಾರೆ ಎಂದು ಓವೈಸಿ ಸ್ಪಷ್ಟಪಡಿಸಿದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಂದ ಸಂಸದರ ವಿಶೇಷ ಸಭೆ
ಶನಿವಾರ ರಾತ್ರಿ 08.20 ಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಕ್ಕೆ ಪಕ್ಷದ ಸಂಸದರೊಂದಿಗೆ ಸಭೆ ನಡೆಸಲಿದ್ದಾರೆ. ನಡ್ಡಾ ಈ ಸಭೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಲಿದ್ದಾರೆ. ನಡ್ಡಾ ಅವರು ಆಪರೇಷನ್ ಸಿಂಧೂರ್ ಮತ್ತು ಪಾಕಿಸ್ತಾನದೊಂದಿಗಿನ ಇತ್ತೀಚಿನ ಉದ್ವಿಗ್ನತೆಯ ಕುರಿತು ಸಂಸದರೊಂದಿಗೆ ಚರ್ಚಿಸಲಿದ್ದಾರೆ. ಉದ್ವಿಗ್ನತೆಯ ಸಮಯದಲ್ಲಿ ಸಂಸದರಿಗೆ ನಿರ್ದೇಶನ ನೀಡಲಾಗುವುದು.
ಪ್ರಧಾನಿ ಮೋದಿ ಅವರ ಉನ್ನತ ಮಟ್ಟದ ಪರಿಶೀಲನಾ ಸಭೆ :
ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಮೂರು ಸೇನಾ ಮುಖ್ಯಸ್ಥರೊಂದಿಗೆ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿದರು. ಈ ಸಭೆಗೆ ಕೆಲವು ಗಂಟೆಗಳ ಮೊದಲು, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಕೂಡ ಪ್ರಧಾನಿಯವರನ್ನು ಭೇಟಿಯಾದರು. ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಈ ಸಭೆ ನಡೆಯಿತು.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.







