Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆಯಲ್ಲಿ ಪಾಕಿಸ್ತಾನಿ ಪ್ರಜೆಗಳು : ಬೆಂಗಳೂರು ಪೊಲೀಸರಿಂದ ಬಂಧನ..!

Facebook
Twitter
Telegram
WhatsApp

ದಾವಣಗೆರೆ: ನಕಲಿ ದಾಖಲೆ ಸೃಷ್ಟಿಸಿ ಪಾಕಿಸ್ತಾನದ ಮಹಿಳೆ ದಾವಣಗೆರೆಯಲ್ಲಿ ವಾಸವಿದ್ದ ಮಾಹಿತಿ ಪಡೆದಿದ್ದ ಪೊಲೀಸರು ಇಂದು ದಾವಣಗೆರೆಯಲ್ಲಿ ಬಂಧಿಸಿದ್ದಾರೆ. ಹಿಂದೂಗಳ ಹೆಸರಿಟ್ಟುಕೊಂಡು ದಾವಣಗೆರೆಯ ಶಿವಕುಮಾರ ಸ್ವಾಮಿ ಬಡಾವಣೆಯಲ್ಲಿ ವಾಸವಿದ್ದರು ಎಂಬ ಮಾಹಿತಿ ತಿಳಿದು ಬಂದಿದೆ. ಸದ್ಯ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಪಾಕ್ ಮೂಲದ ಮಹಿಳೆ ಫಾತಿಮಾ ದಾವಣಗೆರೆಯ ಅಲ್ತಾಫ್ ಜೊತೆಗೆ ವಿವಾಹವಾಗಿದ್ದಳು. ಇವರ ಜೊತೆಗೆ ಪೊಲೀಸರು ಮೊಹಮ್ಮದ್ ಹನೀಫ್ ಎಂಬಾತನನ್ನು ಬಂಧಿಸಿದ್ದಾರೆ. ಹನೀಫ್, ಸೊಸೆ, ಅಳಿಯನನ್ನೂ ಬಂಧಿಸಲಾಗಿದೆ. ಇವರೆಲ್ಲಾ ಹಿಂದೂ ಹೆಸರಗಳನ್ನು ಇಟ್ಟುಕೊಂಡು ವಾಸವಿದ್ದರು ಎನ್ನಲಾಗಿದೆ.

ರಶೀದ್ ಅಲಿ ಎಂಬಾತ ತನ್ನ ಹೆಸರನ್ನು ಶಂಕರ್ ಶರ್ಮಾ, ಆಯೇಷಾ ಹನೀಫಾ ಎಂಬಾಕೆ ಆಶಾ ಶರ್ಮಾ, ಮೊಹಮ್ಮದ್ ಹನೀಫ್ ಎಂವಾತ ರಾಮ್ ಬಾಬಾ ಶರ್ಮಾ, ರುಬೀನಾ ಎಂಬಾಕೆ ರಾಣಿ ಶರ್ಮಾ ಎಂದು ಎಲ್ಲರೂ ಶರ್ಮಾ ಹೆಸರನ್ನೇ ತಮ್ಮ ಹೆಸರಿನ ಜೊತೆಗೆ ಇಟ್ಟುಕೊಂಡಿದ್ದರು. ಸದ್ಯ ಬೆಂಗಳೂರು ಪೊಲೀಸರಿಗೆ ಪಕ್ಕಾ ಮಾಹಿತಿ ಇದ್ದ ಕಾರಣದಿಂದ ಎಲ್ಲರನ್ನು ಬಂಧಿಸಿದ್ದಾರೆ. ವಿಚಾರ ತಿಳಿದು ಅಕ್ಕ ಪಕ್ಕದವರು ಗಾಬರಿಯಾಗಿದ್ದಾರೆ.

ಇನ್ನು ಇದೇ ತರ ಬೆಂಗಳೂರಿನ ಜಿಗಣಿಯಲ್ಲೂ ಪಾಕಿಸ್ತಾನದ ಪ್ರಜೆಗಳ ಬಂಧನವಾಗಿದೆ. ಈ ಸಂಬಂಧ ಪೊಲೀಸರು ಹೈಅಲರ್ಟ್ ಆಗಿದ್ದು, ಡಿವೈಎಸ್ಪಿ ಮೋಹನ್ ಕುಮಾರ್ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚನೆ ಮಾಡಿಕೊಂಡು ತನಿಖೆಗೆ ಇಳಿದಿದ್ದಾರೆ. ಈ ತನಿಖಾ ತಂಡಗಳು ದೆಹಲಿ, ಚೆನ್ನೈ, ಬೆಳಗಾವಿ, ಮುಂಬೈ ಸೇರಿದಂತೆ ಹಲವೆಡೆ ಮಾಹಿತಿಯನ್ನು ಕಲೆ ಹಾಕಲಿವೆ. ಪಾಕಿಸ್ತಾನದ ಪ್ರಜೆಗಳಿಗೆ ನಕಲಿ ಆಧಾರ್ ಕಾರ್ಡ್ ಮಾಡಿಕೊಟ್ಟವರು ಯಾರು ಎಂಬ ಪ್ರಶ್ನೆಯೆ ಇಲ್ಲಿ ಬಹಳ ಮುಖ್ಯವಾಗಿದೆ. ಈಗ ಅವರ ಹುಡುಕಾಟವೂ ನಡೆಯುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಂಗೇಜ್ ಆದ್ರೂ ಬಿಗ್ ಬಾಸ್ ಖ್ಯಾತಿ ಮಂಜು : ಕೈಹಿಡಿಯುತ್ತಿರುವ ‘ನಂದಿನಿ’ ಯಾರೂ ಗೊತ್ತಾ..?

ಬಿಗ್ ಬಾಸ್ ಸೀಸನ್ 8ರ ವಿನ್ನರ್ ಆಗಿದ್ದ ಮಂಜು ಪಾವಗಡ ಸದ್ಯ ಎಂಗೇಜ್ ಆಗಿದ್ದಾರೆ. ಗುರು ಹಿರಿಯರ ಸಮ್ಮುಖದಲ್ಲಿ ಇಂದು ಮಂಜು ಪಾವಗಡ ನಿಶ್ಚಿತಾರ್ಥ ಮಾಡಿಕೊಂಡಿದ್ದು, ನಂದಿನಿ ಮಜು ಬಾಳಿಗೆ ಎಂಟ್ರಿಯಾಗಿದ್ದಾರೆ. ಸದ್ಯ ನಿಶ್ಚಿತಾರ್ಥದ

Acidity : ಅಸಿಡಿಟಿಯಿಂದ ಬಳಲುತ್ತಿದ್ದೀರಾ ? ಇದನ್ನು ದಿನಕ್ಕೆ ಎರಡು ಬಾರಿ ಮಾಡಿ..!

  ಸುದ್ದಿಒನ್ : ಕೆಲವರು ಸ್ವಲ್ಪ ತಿಂದ ನಂತರ ಜೀರ್ಣಕ್ರಿಯೆ ಸಮಸ್ಯೆಯಿಂದ ಬಳಲುತ್ತಾರೆ. ಇದು ದೇಹದ ಅಸ್ವಸ್ಥತೆ ಮತ್ತು ಎದೆಯುರಿ ಉಂಟುಮಾಡುತ್ತದೆ. ಈ ಹಠಾತ್ ಸಮಸ್ಯೆಯಿಂದ ಪರಿಹಾರ ಪಡೆಯಲು ಈ ಕೆಳಗಿನ ಮನೆಮದ್ದುಗಳನ್ನು ಪ್ರಯತ್ನಿಸಿ

ಈ ರಾಶಿಯವರ ದಾಂಪತ್ಯ ಹಾಲು ಜೇನು ಸೇರಿದ ಹಾಗೆ

ಈ ರಾಶಿಯವರ ದಾಂಪತ್ಯ ಹಾಲು ಜೇನು ಸೇರಿದ ಹಾಗೆ, ಶನಿವಾರ- ರಾಶಿ ಭವಿಷ್ಯ ಅಕ್ಟೋಬರ್-5,2024 ಸೂರ್ಯೋದಯ: 06:10, ಸೂರ್ಯಾಸ್ತ : 05:58 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿನ್ ಅಯಣ ಶರದ

error: Content is protected !!