Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆಯಲ್ಲಿ ಪಾಕಿಸ್ತಾನಿ ಪ್ರಜೆಗಳು : ಬೆಂಗಳೂರು ಪೊಲೀಸರಿಂದ ಬಂಧನ..!

---Advertisement---

ದಾವಣಗೆರೆ: ನಕಲಿ ದಾಖಲೆ ಸೃಷ್ಟಿಸಿ ಪಾಕಿಸ್ತಾನದ ಮಹಿಳೆ ದಾವಣಗೆರೆಯಲ್ಲಿ ವಾಸವಿದ್ದ ಮಾಹಿತಿ ಪಡೆದಿದ್ದ ಪೊಲೀಸರು ಇಂದು ದಾವಣಗೆರೆಯಲ್ಲಿ ಬಂಧಿಸಿದ್ದಾರೆ. ಹಿಂದೂಗಳ ಹೆಸರಿಟ್ಟುಕೊಂಡು ದಾವಣಗೆರೆಯ ಶಿವಕುಮಾರ ಸ್ವಾಮಿ ಬಡಾವಣೆಯಲ್ಲಿ ವಾಸವಿದ್ದರು ಎಂಬ ಮಾಹಿತಿ ತಿಳಿದು ಬಂದಿದೆ. ಸದ್ಯ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಪಾಕ್ ಮೂಲದ ಮಹಿಳೆ ಫಾತಿಮಾ ದಾವಣಗೆರೆಯ ಅಲ್ತಾಫ್ ಜೊತೆಗೆ ವಿವಾಹವಾಗಿದ್ದಳು. ಇವರ ಜೊತೆಗೆ ಪೊಲೀಸರು ಮೊಹಮ್ಮದ್ ಹನೀಫ್ ಎಂಬಾತನನ್ನು ಬಂಧಿಸಿದ್ದಾರೆ. ಹನೀಫ್, ಸೊಸೆ, ಅಳಿಯನನ್ನೂ ಬಂಧಿಸಲಾಗಿದೆ. ಇವರೆಲ್ಲಾ ಹಿಂದೂ ಹೆಸರಗಳನ್ನು ಇಟ್ಟುಕೊಂಡು ವಾಸವಿದ್ದರು ಎನ್ನಲಾಗಿದೆ.

ರಶೀದ್ ಅಲಿ ಎಂಬಾತ ತನ್ನ ಹೆಸರನ್ನು ಶಂಕರ್ ಶರ್ಮಾ, ಆಯೇಷಾ ಹನೀಫಾ ಎಂಬಾಕೆ ಆಶಾ ಶರ್ಮಾ, ಮೊಹಮ್ಮದ್ ಹನೀಫ್ ಎಂವಾತ ರಾಮ್ ಬಾಬಾ ಶರ್ಮಾ, ರುಬೀನಾ ಎಂಬಾಕೆ ರಾಣಿ ಶರ್ಮಾ ಎಂದು ಎಲ್ಲರೂ ಶರ್ಮಾ ಹೆಸರನ್ನೇ ತಮ್ಮ ಹೆಸರಿನ ಜೊತೆಗೆ ಇಟ್ಟುಕೊಂಡಿದ್ದರು. ಸದ್ಯ ಬೆಂಗಳೂರು ಪೊಲೀಸರಿಗೆ ಪಕ್ಕಾ ಮಾಹಿತಿ ಇದ್ದ ಕಾರಣದಿಂದ ಎಲ್ಲರನ್ನು ಬಂಧಿಸಿದ್ದಾರೆ. ವಿಚಾರ ತಿಳಿದು ಅಕ್ಕ ಪಕ್ಕದವರು ಗಾಬರಿಯಾಗಿದ್ದಾರೆ.

ಇನ್ನು ಇದೇ ತರ ಬೆಂಗಳೂರಿನ ಜಿಗಣಿಯಲ್ಲೂ ಪಾಕಿಸ್ತಾನದ ಪ್ರಜೆಗಳ ಬಂಧನವಾಗಿದೆ. ಈ ಸಂಬಂಧ ಪೊಲೀಸರು ಹೈಅಲರ್ಟ್ ಆಗಿದ್ದು, ಡಿವೈಎಸ್ಪಿ ಮೋಹನ್ ಕುಮಾರ್ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚನೆ ಮಾಡಿಕೊಂಡು ತನಿಖೆಗೆ ಇಳಿದಿದ್ದಾರೆ. ಈ ತನಿಖಾ ತಂಡಗಳು ದೆಹಲಿ, ಚೆನ್ನೈ, ಬೆಳಗಾವಿ, ಮುಂಬೈ ಸೇರಿದಂತೆ ಹಲವೆಡೆ ಮಾಹಿತಿಯನ್ನು ಕಲೆ ಹಾಕಲಿವೆ. ಪಾಕಿಸ್ತಾನದ ಪ್ರಜೆಗಳಿಗೆ ನಕಲಿ ಆಧಾರ್ ಕಾರ್ಡ್ ಮಾಡಿಕೊಟ್ಟವರು ಯಾರು ಎಂಬ ಪ್ರಶ್ನೆಯೆ ಇಲ್ಲಿ ಬಹಳ ಮುಖ್ಯವಾಗಿದೆ. ಈಗ ಅವರ ಹುಡುಕಾಟವೂ ನಡೆಯುತ್ತಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

ಮೊಬೈಲ್‌-ಸ್ಕ್ರೀನ್‌ಗೆ ಬ್ರೇಕ್ ನೀಡಿ: ಮಾನಸಿಕ ಆರೋಗ್ಯ ಕಾಪಾಡಲು ‘ಡಿಜಿಟಲ್ ಡಿಟಾಕ್ಸ್’ ಏಕೆ ಮುಖ್ಯ?

ನೀತಿ ಕಥೆ: ನಂಬಿಕೆದ್ರೋಹಕ್ಕೆ ಕ್ಷಮೆಯಿಲ್ಲ (ಯುವರಾಜ ಮತ್ತು ಕರಡಿಯ ಕಥೆ)

Leave a Comment