ಪಾಕಿಸ್ತಾನದಲ್ಲಿ ಈಗ ತುತ್ತು ಅನ್ನಕ್ಕೂ ಪರದಾಟ ಶುರುವಾಗಿದೆ. ಪ್ರವಾಹ, ಆರ್ಥಿಕ ಬಿಕ್ಕಟ್ಟು, ರಾಜಕೀಯ ಬಿಕ್ಕಟ್ಟು ಜನರನ್ನು ಸಂಕಷ್ಟಕ್ಕೆ ತಂದು ನಿಲ್ಲಿಸಿದೆ. ಹಣ ಇರುವವರು, ರಾಜಕಾರಣಿಗಳು ತಮ್ಮ ಜೀವನದ ಸೇಫ್ಟಿ ನೋಡಿಕೊಳ್ಳುತ್ತಿದ್ದಾರೆ. ಆದರೆ ಸಾಮಾನ್ಯ ಜನರ ಸ್ಥಿತಿ ಹದಗೆಟ್ಟು ಹೋಗಿದೆ.
ಅಲ್ಲಿಯೇ ಬೆಳೆಯುವ ಗೋಧಿಯನ್ನು ಈಗ ಜನ ಕೊಂಡು ತಿನ್ನುತ್ತಿದ್ದಾರೆ. ಅದಕ್ಕೆ ಕಾರಣ ಸರ್ಕಾರ ಗೋಧಿಗೆ ನಿಗದಿತ ಬೆಲೆ ಕೊಡದೆ ಇರುವುದೇ ರೈತರಿಗೆ ಸಮಸ್ಯೆಯಾಗಿತ್ತು. ಹೀಗಾಗಿ ಬೆಳೆಗಾರರು ಬೆಳೆಯುವುದನ್ನು ನಿಲ್ಲಿಸಿದ್ದಾರೆ. ಈಗ ಗೋಧಿಯನ್ನು ಬೇರೆ ದೇಶದಿಂದ ಆಮದು ಮಾಡಿಕೊಳ್ಳುತ್ತಿದೆ.
ಈಗಾಗಲೇ ಪಾಕಿಸ್ತಾನದ ಸ್ಥಿತಿ ಕಂಡು ಯುನೈಟೆಡ್ ಅರಬ್ ಎಮಿರೇಟ್ಸ್ ಸಹಾಯ ಹಸ್ತ ಚಾಚಿದೆ. ಸುಮಾರು 16,302 ಕೋಟಿ ನೆರವು ಹಾಗೂ 8.151ಕೋಟಿ ಸಾಲವಾಗಿ ನೀಡಿದೆ. ಸದ್ಯ ಪಾಕಿಸ್ತಾನದಲ್ಲಿ ಒಂದು ಕೆಜಿ ಈರುಳ್ಳಿಗೆ 215 ರೂ, ಒಂದು ಕೆಜಿ ಚಿಕನ್ 700, ಒಂದು ಕೆಜಿ ಗೋಧಿ ಹಿಟ್ಟಿಗೆ 160 ಹೀಗೆ ಎಲ್ಲಾ ಆಹಾರ ಪದಾರ್ಥಗಳ ಬೆಲೆಯೂ ಗಗನಕ್ಕೇರಿದೆ. ಹೀಗಾಗಿ ಜನ ಸಾಮಾನ್ಯರು ರೊಚ್ಚಿಗೆದ್ದಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…