ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಐಪಿಎಲ್ ಆರಂಭವಾದಾಗಿನಿಂದ ಮುಂಬೈ ಇಂಡಿಯನ್ಸ್ ಮೂರು ಬಾರಿ ಸೋಲು ಕಂಡಿದೆ. ಭಾನುವಾರ ಡೆಲ್ಲಿ ವಿರುದ್ಧ ಮುಂಬೈ ಇಂಡಿಯನ್ಸ್ ಆಡಲಿದೆ. ಮತ್ತೆ ಸೋಲು ಕಾಣಬಾರದು ಎಂಬ ಕಾರಣಕ್ಕೆ ಹಾರ್ದಿಕ್ ಪಾಂಡ್ಯ ದೇವರ ಮೊರೆ ಹೋಗಿದ್ದಾರೆ. ಗುಜರಾತ್ ನ ಸೋಮನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಬ್ಯಾಕ್ ಟು ಬ್ಯಾಕ್ ಸೋಲಿನಿಂದಾಗಿ ಹಾರ್ದಿಕ್ ಪಾಂಡ್ಯ ಸಾಕಷ್ಟು ಟೀಕೆಗೆ ಒಳಗಾಗಿದ್ದಾರೆ, ಸಾಕಷ್ಟು ನಿಂದನೆ ಎದುರಿಸಿದ್ದಾರೆ. ಇದೀಗ ಸೋಲಿನ ಭಯದಿಂದ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಗೆಲುವನ್ನು ತಂದು ಕೊಡಲು ಪ್ರಾರ್ಥಿಸಿದ್ದಾರೆ.
Hardik Pandya at Somnath Temple
Very much needs the blessings of Mahadev to revive his career.
Har Har Mahadev 🔥 pic.twitter.com/hOWkqiFaUF
— Kashmiri Hindu (@BattaKashmiri) April 5, 2024
2022, 2023ರ ಐಪಿಎಲ್ ಆವೃತ್ತಿಯಲ್ಲಿ ಹಾರ್ದಿಕ್ ಪಾಂಡ್ಯ ಗುಜರಾತ್ ಟೈಟನ್ಸ್ ತಂಡದ ಕ್ಯಾಪ್ಟನ್ ಆಗಿದ್ದರು. 2024ರ ಐಪಿಎಲ್ ವೇಳೆ ಮುಂಬೈ ಇಂಡಿಯನ್ಸ್ ಪಾಂಡ್ಯರನ್ನು ಗುಜರಾತ್ ಟೈಟನ್ಸ್ ತಂಡದಿಂದ ಕರೆದುಕೊಂಡು ಬಂದು, ಕ್ಯಾಪ್ಟನ್ಸಿ ನೀಡಿದೆ. ರೋಹಿತ್ ಶರ್ಮಾಗೆ ಕ್ಯಾಪ್ಟನ್ಸಿ ಸ್ಥಾನದಿಂದ ಕೊಕ್ ನೀಡಿದ ಮೇಲೆ ಮುಂಬೈ ತಂಡದಲ್ಲಿ ಎಲ್ಲವೂ ಸರಿ ಇಲ್ಲ. ಸರಿಯಾದ ಹೊಂದಾಣಿಕೆ ಸಿಗದ ಪರಿಣಾಮ ಸೋಲು ಅನುಭವಿಸುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇನ್ನು ಭಾನುವಾರ್ ಪಂದ್ಯ ಆರಂಭಕ್ಕೂ ಮುನ್ನ ಸೂರ್ಯಕುಮಾರ್ ಯಾದವ್ ಮುಂಬೈ ಇಂಡಿಯನ್ಸ್ ತಂಡ ಸೇರಲಿದ್ದಾರೆ ಎಂಬ ಮಾತು ಕೇಳಿ ಬಂದಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್