Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸತತ ಸೋಲಿನಿಂದ ಕಂಗೆಟ್ಟ ಪಾಂಡ್ಯ : ಗೆಲುವಿಗಾಗಿ ಸೋಮನಾಥನ ಮೊರೆ

---Advertisement---

ಐಪಿಎಲ್ ಆರಂಭವಾದಾಗಿನಿಂದ ಮುಂಬೈ ಇಂಡಿಯನ್ಸ್ ಮೂರು ಬಾರಿ ಸೋಲು ಕಂಡಿದೆ. ಭಾನುವಾರ ಡೆಲ್ಲಿ ವಿರುದ್ಧ ಮುಂಬೈ ಇಂಡಿಯನ್ಸ್ ಆಡಲಿದೆ. ಮತ್ತೆ ಸೋಲು ಕಾಣಬಾರದು ಎಂಬ ಕಾರಣಕ್ಕೆ ಹಾರ್ದಿಕ್ ಪಾಂಡ್ಯ ದೇವರ ಮೊರೆ ಹೋಗಿದ್ದಾರೆ. ಗುಜರಾತ್ ನ ಸೋಮನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

 

ಬ್ಯಾಕ್ ಟು ಬ್ಯಾಕ್ ಸೋಲಿನಿಂದಾಗಿ ಹಾರ್ದಿಕ್ ಪಾಂಡ್ಯ ಸಾಕಷ್ಟು ಟೀಕೆಗೆ ಒಳಗಾಗಿದ್ದಾರೆ, ಸಾಕಷ್ಟು ನಿಂದನೆ ಎದುರಿಸಿದ್ದಾರೆ. ಇದೀಗ ಸೋಲಿನ ಭಯದಿಂದ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಗೆಲುವನ್ನು ತಂದು ಕೊಡಲು ಪ್ರಾರ್ಥಿಸಿದ್ದಾರೆ.

2022, 2023ರ ಐಪಿಎಲ್​ ಆವೃತ್ತಿಯಲ್ಲಿ ಹಾರ್ದಿಕ್ ಪಾಂಡ್ಯ ಗುಜರಾತ್​​ ಟೈಟನ್ಸ್ ತಂಡದ ಕ್ಯಾಪ್ಟನ್ ಆಗಿದ್ದರು. 2024ರ ಐಪಿಎಲ್​​​​​ ವೇಳೆ ಮುಂಬೈ ಇಂಡಿಯನ್ಸ್​ ಪಾಂಡ್ಯರನ್ನು ಗುಜರಾತ್​ ಟೈಟನ್ಸ್ ತಂಡದಿಂದ ಕರೆದುಕೊಂಡು ಬಂದು, ಕ್ಯಾಪ್ಟನ್ಸಿ ನೀಡಿದೆ. ರೋಹಿತ್ ಶರ್ಮಾಗೆ ಕ್ಯಾಪ್ಟನ್ಸಿ ಸ್ಥಾನದಿಂದ ಕೊಕ್ ನೀಡಿದ ಮೇಲೆ ಮುಂಬೈ ತಂಡದಲ್ಲಿ ಎಲ್ಲವೂ ಸರಿ ಇಲ್ಲ. ಸರಿಯಾದ ಹೊಂದಾಣಿಕೆ ಸಿಗದ ಪರಿಣಾಮ ಸೋಲು ಅನುಭವಿಸುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇನ್ನು ಭಾನುವಾರ್ ಪಂದ್ಯ ಆರಂಭಕ್ಕೂ ಮುನ್ನ ಸೂರ್ಯಕುಮಾರ್ ಯಾದವ್ ಮುಂಬೈ ಇಂಡಿಯನ್ಸ್ ತಂಡ ಸೇರಲಿದ್ದಾರೆ ಎಂಬ ಮಾತು ಕೇಳಿ ಬಂದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...