ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಮೈಸೂರು: ತಂದೆ-ತಾಯಿ, ಇಬ್ಬರು ಮುದ್ದಾದ ಹಡಣ್ಣು ಮಕ್ಕಳು. ಇಸ್ತ್ರಿ ಪೆಟ್ಟಿಗೆಯ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದರು. ಆಡಂಬರದ ಜೀವನವಲ್ಲದೆ ಹೋದರು ಅವರದು ಸುಖ ಸಂಸಾರ. ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಿ, ಒಂದೊಳ್ಳೆ ಉದ್ಯೋಗಕ್ಕೆ ಹೋಗುವಂತೆ ಮಾಡಬೇಕು, ಅವರ ಭವಿಷ್ಯ ಉಜ್ವಲವಾಗಬೇಕು ಎಂದು ಕನಸು ಕಂಡವರು ಆ ಪೋಷಕರು. ಆದರೆ ವಿಧಿ ತಂದೆ-ತಾಯಿ ಜೊತೆಗೆ ಮಕ್ಕಳನ್ನು ಕರೆದುಕೊಂಡು ಬಿಟ್ಟಿದೆ. ಮೈಸೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಮೃತ ಪಟ್ಟಿದ್ದಾರೆ.
ಮೈಸೂರಿನ ಯರಗನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಪ್ರತಿದಿನದಂತೆ ರಾತ್ರಿ ಊಟ ಮಾಡಿ ನಾಲ್ವರು ಮಲಗಿದ್ದಾರೆ. ಪತಿ, ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಮಲಗಿದ್ದಲ್ಲಿಯೇ ಪ್ರಾಣ ಬಿಟ್ಟಿದ್ದಾರೆ. 45 ವರ್ಷದ ಕುಮಾರಸ್ವಾಮಿ, 39 ವರ್ಷದ ಪತ್ನಿ ಮಂಜುಳಾ, 19 ವರ್ಷದ ಅರ್ಚನಾ, 17 ವರ್ಷದ ಸ್ವಾತಿ ಮೃತ ದುರ್ದೈವಿಗಳಾಗಿದ್ದಾರೆ.
ಕುಮಾರಸ್ವಾಮಿ ಅವರ ಕುಟುಂಬ ಅನಿಲ ಸೋರಿಕೆಯಿಂದ ಸಾವನ್ನಪ್ಪಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಅದರ ವಾಸನೆಗೆ ನಿಧನರಾಗಿರಬಹುದು ಎನ್ನಲಾಗಿದೆ. ಈ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸ್ ಕಮಿಷನರ್ ರಮೇಶ್ ಬಾನೋತಾ ಭೇಟಿ ನೀಡಿದ್ದರು. ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಎಫ್ಎಸ್ಎಲ್ ಅಧಿಕಾರಿಗಳು ಕೂಡ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ತನಿಖೆಯ ನಂತರ ಹಾಗೂ ಎಫ್ಎಸ್ಎಲ್ ವರದಿ ಬಂದ ಬಳಿಕವಷ್ಟೇ ಕುಟುಂಬಸ್ಥರ ಸಾವಿಗೆ ಏನು ಕಾರಣ ಎಂಬ ಸ್ಪಷ್ಟ ಮಾಹಿತಿ ಸಿಗಲಿದೆ. ಆದರೆ ಮಕ್ಕಳ ಭವಿಷ್ಯಕ್ಕಾಗಿ ಕಷ್ಟ ಪಡುತ್ತಿದ್ದ ಇಡೀ ಕುಟುಂಬ ಹೀಗೆ ಸಾವನ್ನಪ್ಪಿದ್ದು, ಮೈಸೂರು ಜನತೆಗೆ ಶಾಕ್ ಆಗಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್