Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೈಸೂರಿನಲ್ಲಿ ಮಲಗಿದ್ದಲ್ಲೇ ಸಾವನ್ನಪ್ಪಿದ ತಂದೆ-ತಾಯಿ ಇಬ್ಬರು ಮಕ್ಕಳು..!

Facebook
Twitter
Telegram
WhatsApp

ಮೈಸೂರು: ತಂದೆ-ತಾಯಿ, ಇಬ್ಬರು ಮುದ್ದಾದ ಹಡಣ್ಣು ಮಕ್ಕಳು. ಇಸ್ತ್ರಿ ಪೆಟ್ಟಿಗೆಯ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದರು. ಆಡಂಬರದ ಜೀವನವಲ್ಲದೆ ಹೋದರು ಅವರದು ಸುಖ ಸಂಸಾರ. ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಿ, ಒಂದೊಳ್ಳೆ ಉದ್ಯೋಗಕ್ಕೆ ಹೋಗುವಂತೆ ಮಾಡಬೇಕು, ಅವರ ಭವಿಷ್ಯ ಉಜ್ವಲವಾಗಬೇಕು ಎಂದು ಕನಸು ಕಂಡವರು ಆ ಪೋಷಕರು. ಆದರೆ ವಿಧಿ ತಂದೆ-ತಾಯಿ ಜೊತೆಗೆ ಮಕ್ಕಳನ್ನು ಕರೆದುಕೊಂಡು ಬಿಟ್ಟಿದೆ. ಮೈಸೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಮೃತ ಪಟ್ಟಿದ್ದಾರೆ.

ಮೈಸೂರಿನ ಯರಗನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಪ್ರತಿದಿನದಂತೆ ರಾತ್ರಿ ಊಟ ಮಾಡಿ ನಾಲ್ವರು ಮಲಗಿದ್ದಾರೆ. ಪತಿ, ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಮಲಗಿದ್ದಲ್ಲಿಯೇ ಪ್ರಾಣ ಬಿಟ್ಟಿದ್ದಾರೆ. 45 ವರ್ಷದ ಕುಮಾರಸ್ವಾಮಿ, 39 ವರ್ಷದ ಪತ್ನಿ ಮಂಜುಳಾ, 19 ವರ್ಷದ ಅರ್ಚನಾ, 17 ವರ್ಷದ ಸ್ವಾತಿ ಮೃತ ದುರ್ದೈವಿಗಳಾಗಿದ್ದಾರೆ.

ಕುಮಾರಸ್ವಾಮಿ ಅವರ ಕುಟುಂಬ ಅನಿಲ ಸೋರಿಕೆಯಿಂದ ಸಾವನ್ನಪ್ಪಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಅದರ ವಾಸನೆಗೆ ನಿಧನರಾಗಿರಬಹುದು ಎನ್ನಲಾಗಿದೆ. ಈ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸ್ ಕಮಿಷನರ್ ರಮೇಶ್ ಬಾನೋತಾ ಭೇಟಿ ನೀಡಿದ್ದರು. ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಎಫ್ಎಸ್ಎಲ್ ಅಧಿಕಾರಿಗಳು ಕೂಡ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ತನಿಖೆಯ ನಂತರ ಹಾಗೂ ಎಫ್ಎಸ್ಎಲ್ ವರದಿ ಬಂದ ಬಳಿಕವಷ್ಟೇ ಕುಟುಂಬಸ್ಥರ ಸಾವಿಗೆ ಏನು ಕಾರಣ ಎಂಬ ಸ್ಪಷ್ಟ ಮಾಹಿತಿ ಸಿಗಲಿದೆ. ಆದರೆ ಮಕ್ಕಳ ಭವಿಷ್ಯಕ್ಕಾಗಿ ಕಷ್ಟ ಪಡುತ್ತಿದ್ದ ಇಡೀ ಕುಟುಂಬ ಹೀಗೆ ಸಾವನ್ನಪ್ಪಿದ್ದು, ಮೈಸೂರು ಜನತೆಗೆ ಶಾಕ್ ಆಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮನು ಕುಲದ ಆಯಸ್ಸನ್ನು ಹೆಚ್ಚಿಸಿದ್ದು ವೈದ್ಯರು: ಸಿ.ಎಂ.ಸಿದ್ದರಾಮಯ್ಯ ಪ್ರಶಂಸೆ

ಮೈಸೂರು ಸೆ 28 : ವೈದ್ಯರು ಮತ್ತು ವೈದ್ಯಕೀಯ ಕ್ಷೇತ್ರ ಮನುಕುಲದ ಆಯಸ್ಸನ್ನು ಹೆಚ್ಚಿಸುವಲ್ಲಿ ಯಶಸ್ವಿಯಾಗಿದೆ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರಶಂಸೆ ವ್ಯಕ್ತಪಡಿಸಿದರು.   ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶತಮಾನೋತ್ಸವದ ಸಮಾರೋಪ

ಈ ಬಾರಿಯ ಬಿಗ್ ಬಾಸ್ ಗೆ ಹೋಗ್ತಿದ್ದಾರೆ ಈ ಸ್ಟಾರ್ ಗಳು : ಕನ್ಫರ್ಮ್ ಸುದ್ದಿ ಇದು..!

ಬೆಂಗಳೂರು : ಬಿಗ್ ಬಾಸ್ ಕನ್ನಡ‌ ಸೀಸನ್ 11ಗೆ ಕ್ಷಣಗಣನೆ ಶುರುವಾಗಿದೆ. ಬಿಗ್ ಬಾಸ್ ಮನೆಯೊಳಗೆ ಹೋಗೋದು ಯಾರು ಎಂಬ ಕುತೂಹಲ ಇಡೀ ಕರ್ನಾಟಕದ ಜನತೆಗೆ ಇದೆ. ಇಂದು ಸಂಜೆ ಅದಕ್ಕೆ ಕೊಂಚ ತೆರೆ

ಅಜೀಂ ಪ್ರೇಮ್‍ಜಿ ಫೌಂಡೇಶನ್ ಕಾರ್ಯ ಪ್ರಪಂಚಕ್ಕೆ ಮಾದರಿ: ಕೆ.ರಾಜಶೇಖರ ಹಿಟ್ನಾಳ

  ಸುದ್ದಿಒನ್, ಕೊಪ್ಪಳ, ಸೆಪ್ಟೆಂಬರ್. 28 : ಅಜೀಂ ಪ್ರೇಮ್‍ಜಿ ಫೌಂಡೇಶನ ಮಾಡುತ್ತಿರುವ ಸೇವಾ ಕಾರ್ಯವು ಪ್ರಪಂಚಕ್ಕೆ ಮಾದರಿಯಾಗಿದೆ ಎಂದು ಲೋಕಸಭಾ ಸದಸ್ಯರಾದ ಕೆ.ರಾಜಶೇಖರ ಹಿಟ್ನಾಳ ಹೇಳಿದರು. ಅವರು ನಗರದ ಸಿ.ಪಿ.ಎಸ್.ಶಾಲೆಯಲ್ಲಿ ಅಜೀಂ ಪ್ರೇಮ್‍ಜಿ

error: Content is protected !!