Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಂಸತ್ ಮೇಲೆ ದಾಳಿ ಪ್ರಕರಣ : ಮನೋರಂಜನ್ ಕುಟುಂಬಕ್ಕೆ ಎಚ್ಚರಿಕೆ ನೀಡಿದ ಗುಪ್ತಚರ ಅಧಿಕಾರಿಗಳು

Facebook
Twitter
Telegram
WhatsApp

ಮೈಸೂರು: ಸಂಸತ್ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ನಿವಾಸಿ ಮನೋರಂಜನ್ ಆರೋಪಿಯಾಗಿದ್ದಾರೆ. ಘಟನೆ ನಡೆದ ದಿನವೇ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ಮೈಸೂರಿನ ಮನೋರಂಜನ್ ಕುಟುಂಬಸ್ಥರಿಗೆ ಗುಪ್ತಚರ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಸಂಸತ್ ಮೇಲಿನ ದಾಳಿಗೆ ಸಂಬಂಧಿಸಿದಂತೆ ಮೈಸೂರಿನ ವಿಜಯನಗರದಲ್ಲಿರುವ ಆರೋಪಿ ಮನೋರಂಜನ್ ಮನೆಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಹಲವು ವಿಚಾರಗಳನ್ನು ಕಲೆ ಹಾಕಿದ್ದಾರೆ. ಮನೋರಂಜನ್ ತಂದೆ ಕೂಡ ಮಗ ಮಾಡಿದ ಕೆಲಸಕ್ಕೆ ವಿಷಾಧ ವ್ಯಕ್ತಪಡಿಸಿದ್ದಾರೆ. ತನಿಖೆಯ ವೇಳೆ ಅಧಿಕಾರಿಗಳು ಎಚ್ಚರಿಕೆಯೊಂದನ್ನು ನೀಡಿದ್ದು, ಮೈಸೂರು ಬಿಟ್ಟು ಹೊರಗೆ ಹೋಗದಂತೆ ಸೂಚನೆ ನೀಡಿದ್ದಾರೆ.

ನಮ್ಮ ಸೂಚನೆ ಬರುವ ತನಕ ನೀವೂ ಮೈಸೂರು ಬಿಟ್ಟು ಎಲ್ಲಿಯೂ ತೆರಳಬೇಡಿ. ತುರ್ತು ಪರಿಸ್ಥಿತಿ ಇದ್ದರೆ, ನಮ್ಮ ಗಮನಕ್ಕೆ ತನ್ನಿ. ಅನುಮತಿ ಸಿಕ್ಕ ಮೇಲೆಯೇ ತೆರಳಬೇಕು. ನಿಮ್ಮ ಮನೆಗೆ ಸದ್ಯಕ್ಕೆ ಯಾವುದೇ ರೀತಿಯ ಸಂಬಂಧಿಕರು ಬರದಂತೆ ನೋಡಿಕೊಳ್ಳಿ. ಜೊತೆಗೆ ಪ್ರತಿನಿತ್ಯ ಬರುವ ಕರೆಗಳ ಬಗ್ಗೆ ನಮಗೆ ಮಾಹಿತಿ ನೀಡಿ ಎಂದು ಸೂಚನೆ ನೀಡಿದ್ದಾರಂತೆ. ಈ ಮೂಲಕ ತನಿಖೆ ತೀವ್ರಗೊಂಡಿದ್ದು, ಆರೋಪಿಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಅಷ್ಟೇ ಅಲ್ಲ ಅವರ ಕುಟುಂಭಸ್ಥರ ಮೇಲೂ ಗಮನಹರಿಸಿದ್ದಾರೆ. ಜೊತೆಗೆ ಮುಂದಿನ ಸೂಚನೆಯ ತನಕ ಪೇಪರ್ ಆಗಲಿ, ಪುಸ್ತಕಗಳನ್ನಾಗಲಿ ಮಾರಬಾರದು ಎಂಬ ಸೂಚನೆ ನೀಡಿದ್ದಾರೆ. ಸಾಗರ್ ಹಾಗೂ ಮನೋರಂಜನ್ ಸಂಸತ್ ಅಧಿವೇಶನ ನಡೆಯುವಾಗ ವೀಕ್ಷಕರ ಗ್ಯಾಲರಿಯಿಂದ ಎಂಟ್ರಿಕೊಟ್ಟು, ದಾಂಧಲೆ ಸೃಷ್ಟಿ ಮಾಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!