Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಂಸತ್ ಒಳಗೆ ಗದ್ದಲ : ಎಂಟು ಮಂದಿ ಅಮಾ‌ನತು, ಆರೋಪಿಗಳಿಗೆ ಹತ್ತು ವರ್ಷ ಜೈಲು..!

---Advertisement---

ನವದೆಹಲಿ: ಸಂಸತ್ ಒಳಗೆ ನಡೆದ ಗದ್ದಲಕ್ಕೆ ಸಂಬಂಧಿಸಿದಂತೆ ಇನ್ನು ತನಿಖೆ ನಡೆಯುತ್ತಿದೆ. ಇದರ ಬೆನ್ನಲ್ಲೇ ಎಂಟು ಮಂದಿ ಲೋಕಸಭಾ ಸದಸ್ಯರನ್ನು ಅಮಾನತು ಮಾಡಲಾಗಿದೆ. ರಾಂಪಾಲ್, ಅರವಿಂದ್, ವೀರ್ ದಾಸ್, ಗಣೇಶ್, ಅನಿಲ್, ಪ್ರದೀಪ್, ವಿಮಿತ್ ಮತ್ತು ನರೇಂದ್ರ ಹಾಗೂ ಲೋಕಸಭಾ ಸೆಕ್ರೇಟರಿಯನ್ನು ಅಮಾನತು ಮಾಡಲಾಗಿದೆ.

ಇನ್ನು ಇದರಲ್ಲಿ ಅರೆಸ್ಟ್ ಆಗಿರುವ ಆರೋಪಿಗಳಿಗೆ ದಂಡದ ಜೊತೆಗೆ ಶಿಕ್ಷೆಯನ್ನು ವಿಧಿಸಲಾಗಿದೆ. ಎಲ್ಲಾ ಆರೋಪಿಗಳ ಮೇಲೆ UAPA ಕಾಯ್ದೆಯಡಿ ಕೇಸ್ ದಾಖಲಾಗಿದ್ದು, ಈ ಕೇಸ್ ನಲ್ಲಿ ಸುಲಭವಾಗಿ ಜಾಮೀನು ಸಿಗುವುದಿಲ್ಲ. ದಂಡದ ಜೊತೆಗೆ ಸುಮಾರು ಹತ್ತು ವರ್ಷದವರೆಗೂ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ.

 

ಸಂಸತ್ ಒಳಗೆ ಹೋಗುವುದು ಅಷ್ಟು ಸುಲಭವಲ್ಲ. ಗದ್ದಲ ಎಬ್ಬಿಸಿದ ಆರೋಪಿಗಳಿಗೆ ಸಂಸದರಿಂದ ಪಾಸ್ ಸಿಕ್ಕಿದ್ದೆ ಸುಲಭವಾಗಿ ಒಳಗೆ ಹೋಗುವುದಕ್ಕೆ ಸಾಧ್ಯವಾಗಿತ್ತು. ಆದರೆ ಗದ್ದಲ ಎಬ್ಬಿಸಿದ ಬಳಿಕ ಸಂಸತ್ ನಲ್ಲಿ ಸಾಕಷ್ಟು ಭದ್ರತೆಯನ್ನು ಒದಗಿಸಲಾಗಿದೆ. ಇಂದು ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನೇಮಿಸಲಾಗಿದೆ. ಭದ್ರತೆಗಾಗಿ ಕೇಂದ್ರ ಮೀಸಲು ಪಡೆಯನ್ನು ನೇಮಿಸಲಾಗಿದ್ದು, ಇಂದು ಸಾರ್ವಜನಿಕರಿಗೆ ಪ್ರವೇಶವನ್ನು ರದ್ದು ಮಾಡಲಾಗಿದೆ. ಸಂಸದರಾದರು ಕೂಡ ಪಾಸ್ ತೋರಿಸಿದವರಿಗೆ ಮಾತ್ರ ಒಳಗೆ ಬಿಡಲಾಗುತ್ತಿದೆ. ನಿನ್ನೆ ಘಟನೆಯಿಂದಾಗಿ ಹೆಚ್ಚಿನ ಭದ್ರತೆಯನ್ನು ಒದಗಿಸಲಾಗಿತ್ತಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...