Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಸಂಸತ್ ನಲ್ಲಿ ಹೊಗೆ ಬಾಂಬ್ ದಾಳಿ ಪ್ರಕರಣ: ಬಾಗಲಕೋಟೆಯ DYSP ಮಗ ಪೊಲೀಸರ ವಶಕ್ಕೆ

---Advertisement---

 

 

ಬಾಗಲಕೋಟೆ: ಸಂಸತ್ ಒಳಗೆ ಕಲರ್ ಹೊಗೆ ಬಾಂಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ. ಮನೋರಂಜನ್ ಗೆ ಸಂಬಂಧಿಸಿದವರು, ಸಂಪರ್ಕದಲ್ಲಿದ್ದವರನ್ನೆಲ್ಲಾ ವಿಚಾರಣೆಗೆ ಒಳಪಡಿಸಲಾಗುತ್ತಿದೆ.
ಈ ಸಂಬಂಧ ಬಾಗಲಕೋಟೆಯಲ್ಲೂ ಒಬ್ಬರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ. ಅವರು ಮನೋರಂಜನ್ ರೂಮ್ ಮೇಟ್ ಆಗಿದ್ದರು ಎನ್ನಲಾಗಿದೆ.

ಮನೋರಂಜನ್ ಡೈರಿಯನ್ನು ಪರಿಶೀಲನೆ ಮಾಡುತ್ತಿರುವ ಪೊಲೀಸರು, ಅದರಲ್ಲಿ ನಮೂದಿಸಿದ್ದ ಸಾಯಿಕೃಷ್ಣ ಅವರನ್ನು ಅರೆಸ್ಟ್ ಮಾಡಿದ್ದಾರೆ. ಈ ಸಾಯಿಕೃಷ್ಣ ಬಾಗಲಕೋಟೆಯ ನಿವಾಸಿ. ಇವರ ತಂದೆ ನಿವೃತ್ತ ಡಿವೈಎಸ್ಪಿ. 2008-09ರಲ್ಲಿ ಬೆಂಗಳೂರಿನ ಬಿಐಟಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಮುಗಿಸಿದ್ದರು. ಇಲ್ಲಿಯೇ ಮನೋರಂಜನ್ ಜೊತೆಯಾಗಿದ್ದರು. ಬಳಿಕ ಮನೋರಂಜನ್ ಹಾಗೂ ಸಾಯಿಕೃಷ್ಣ ರೂಮ್ ಮೇಟ್ ಕೂಡ ಆಗಿದ್ದರು.

ಕಾಲೇಜು ಮುಗಿದ ಮೇಲೆ ಫೋನ್ ಸಂಪರ್ಕದಲ್ಲಿ ಇರುವುದು ಪೊಲೀಸರ ವಿಚಾರಣೆಯಲ್ಲಿ ತಿಳಿದಿದೆ. ಇನ್ನು ಮನೋರಂಜನ್ ತಮ್ನ ಡೈರಿಯಲ್ಲಿ ಕೂಡ ಮೆನ್ಶನ್ ಮಾಡಿದ್ದಾರೆ‌. ಸದ್ಯ ಆತನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ಸಂಬಂಧ ಸಾಯಿಕೃಷ್ಣ ಅವರ ಅಕ್ಕ ಪ್ರತಿಕ್ರಿಯೆ ನೀಡಿದ್ದಾರೆ‌. ಮನೋರಂಜನ್ ರೂಮ್ ಮೇಟ್ ಆಗಿದ್ದ ಕಾರಣಕ್ಕೆ ಕರೆದು ವಿಚಾರಣೆ ನಡೆಸಿದ್ದಾರೆ. ಪೊಲೀಸರು ಕೇಳಿದ ಪ್ರಶ್ನೆಗಳಿಗೆಲ್ಲ ಅವನು ಉತ್ತರ ನೀಡಿದ್ದಾನೆ. ಈ ಮುಂಚೆ ಮನೋರಂಜನ್ ಕೂಡ ಸರಿಯಾಗಿಯೇ ಇದ್ದ. ಆದರೆ ಈಗ ಯಾಕೆ ಆ ರೀತಿ ಆದ ಎಂಬುದು ಮಾತ್ರ ಗೊತ್ತಿಲ್ಲ. ನನ್ನ ತಮ್ಮನಿಗೂ ಅದಕ್ಕೂ ಸಂಬಂಧವಿಲ್ಲ. ರೂಮ್ ಮೇಟ್ ಆಗಿದ್ದ ಎಂಬ ಕಾರಣಕ್ಕೆ ಅವನನ್ನು ಕರೆದು ವಿಚಾರಣೆ ಮಾಡಿದ್ದಾರೆ ಅಷ್ಟೆ ಎಂದು ಸಾಯಿಕೃಷ್ಣ ಸಹೋದರಿ ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...