Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಕ್ಷನಾ..? ಸ್ನೇಹಾನಾ..?: ಗೊಂದಲ್ಲಕ್ಕೆ ಸಿಲುಕಿದ್ದಾರಾ ಶ್ರೀರಾಮುಲು..?

Facebook
Twitter
Telegram
WhatsApp

 

ಗಾಲಿ ಜನಾರ್ದನ ರೆಡ್ಡಿ ರಾಜಕೀಯಕ್ಕೆ ಬರಬೇಕು ಎಂದು ತುದಿಗಾಲಿನಲ್ಲಿ ನಿಂತಿದ್ದಾರೆ. ಮತ್ತೆ ಬಿಜೆಪಿಗೆ ಹೋಗಬೇಕು ಎಂಬುದು ಅವರ ಮಹತ್ವಕಾಂಕ್ಷೆಯಾಗಿತ್ತು. ಆದ್ರೆ ಬಿಜೆಪಿ ಅದಕ್ಕೆ ಸ್ವಲ್ಪವೂ ಸೊಪ್ಪು ಹಾಕಲಿಲ್ಲ. ಅದರಿಂದ ಬೇಸತ್ತ ಗಾಲಿ ಜನಾರ್ದನ ರೆಡ್ಡಿ ಇದೀಗ ತಮ್ಮದೇ ಸ್ವಂತ ಪಕ್ಷ ಕಟ್ಟುವುದಕ್ಕೆ ತಯಾರಿ ನಡೆಸಿದ್ದಾರೆ. ರಾಜಕಾರಣಕ್ಕೆ ಬರಲೇಬೇಕೆಂದು ಹಠ ಮಾಡಿದ್ದಾರೆ.

ಬಳ್ಳಾರಿಯಿಂದ ಅಲ್ಲದೆ ಹೋದರು, ಕೊಪ್ಪಳದಿಂದ ಆದರೂ ಸರಿಯೇ ಎಂಬಂತೆ ರೆಡ್ಡಿ ರಾಜಕೀಯ ಎಂಟ್ರಿಗೆ ಸನ್ನದ್ಧರಾಗಿದ್ದಾರೆ. ಅದರ ಭಾಗವಾಗಿ ನಿನ್ನೆಯೆಲ್ಲಾ ನಡೆದ ಸಂಕೀರ್ತನಾ ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಹನುಮನ ಮಾಲೆ ಧರಿಸಿ, ಭಕ್ತರಾಗಿದ್ದಾರೆ. ಮಾಲಾಧಾರಿಗಳ ಜೊತೆ ಪಾದಯಾತ್ರೆ ನಡೆಸಿದ್ದಾರೆ.

ಈ ಮಧ್ಯೆ ಪಂಪಾ ಸರೋವರದಲ್ಲಿ ಒಬ್ಬಂಟಿಯಾಗಿ ಪೂಜೆ ಸಲ್ಲಿಸಿದ್ದಾರೆ. ಅತ್ತ ಮೊಮ್ಮಗಳ ನಾಮಕರಣದಲ್ಲೂ ಶ್ರೀರಾಮುಲು ಕಾಣಿಸಿರಲಿಲ್ಲ. ಇತ್ತ ಆಪ್ತಮಿತ್ರ ಮಾಲೆ ಧರಿಸಿದಾಗಲೂ ಜೊತೆಯಾಗಿಲ್ಲ. ಇಬ್ಬರ ನಡುವೆ ಎಲ್ಲವೂ ಸರಿ ಇಲ್ಲ ಎಂದರು ಅದನ್ನು ಇಬ್ಬರು ಒಪ್ಪುತ್ತಿಲ್ಲ. ನಮ್ಮಿಬ್ಬರ ಸ್ನೇಹ ಎಂದಿಗೂ ಕಡಿಮೆಯಾಗುವುದಕ್ಕೆ ಸಾಧ್ಯವೇ ಇಲ್ಲ ಎನ್ನುತ್ತಾರೆ.

ಆಪ್ತ ಮೂಲಗಳ ಪ್ರಕಾರ, ಶ್ರೀರಾಮುಲು ಪಕ್ಷದ ಆಜ್ಞೆ ಪಾಲಿಸಬೇಕಾ ಅಥವಾ ಆಪ್ತನ ಬಳಿ ಸೇರಬೇಕಾ ಎಂಬ ಗೊಂದಲದಲ್ಲಿದ್ದಾರಂತೆ. ಯಾಕಂದ್ರೆ ಹೈಕಮಾಂಡ್ ನಿಂದ ಖಡಕ್ ಸೂಚನೆಯೊಂದು ರವಾನೆಯಾಗಿದೆಯಂತೆ. ಇದರ ಗೊಂದಲದ ನಡುವೆ ಆಪ್ತನ ಜೊತೆಗೆ ಹೆಚ್ಚು ಕಾಣಿಸಿಕೊಳ್ಳಲು ಆಗುತ್ತಿಲ್ಲ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

error: Content is protected !!