ಪಾರ್ವತಮ್ಮ ರಾಜ್‍ಕುಮಾರ್ ಪುಣ್ಯಸ್ಮರಣೆ : ಅಮ್ಮನ ಆಸೆ ಈಡೇರಿಸಲು ಮುಂದಾದ ರಾಘಣ್ಣ

ಬೆಂಗಳೂರು: ಪಾರ್ವತಮ್ಮ ರಾಜ್‌ಕುಮಾರ್ ಅದೊಂದು ಬರೀ ಹೆಸರಾಗಿ ಉಳಿದಿಲ್ಲ. ಅದೊಂದು ದೊಡ್ಡ ಶಕ್ತಿ. ಚೈತನ್ಯ, ದೊಡ್ಮನೆ ಕುಟುಂಬದ ಪಿಲ್ಲರ್ ಇದ್ದ ಹಾಗಿದ್ದರು. ಇಂದು ಅವರ ಪುಣ್ಯ ಸ್ಮರಣೆ. ಈ ದಿನ ರಾಘವೇಂದ್ರ ರಾಜ್‍ಕುಮಾರ್ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ.

ವಜ್ರೇಶ್ವರಿ ಕಂಬೈನ್ಸ್ ಕೇಳದವರು ಯಾರಾದರೂ ಇದ್ದಾರಾ ಎಂದರೆ ಸಾಧ್ಯವೇ ಇಲ್ಲ. ಗಾಂಧಿನಗರದ ಗಲ್ಲಿ ಗಲ್ಲಿಯಲ್ಲಿರುವ, ಸಿನಿ ಪ್ರೇಮಿಗಳ ಪ್ರತಿಯೊಬ್ಬರಿಗೂ ಗೊತ್ತು. ಅಷ್ಟೇ ಅಲ್ಕ ವಜ್ರೇಶ್ವರಿಯಲ್ಲಿ ಜೀವನ ಕಂಡುಕೊಂಡವರು, ಕಟ್ಟಿಕೊಂಡವರ ಸಂಖ್ಯೆ ಲೆಕ್ಕಕ್ಕೆ ಇಲ್ಲ. ಅಣ್ಣಾವ್ರು, ಪಾರ್ವತಮ್ನ ಹೋದ ಮೇಲೆ ವಜ್ರೇಶ್ವರಿ ಮಂಕಾಗಿತ್ತು. ಇದೀಗ ರಾಘವೇಂದ್ರ ರಾಜ್ ಕುಮಾರ್ ಆ ಸಂಸ್ಥೆಯಿಂದ ಮತ್ತೆ ಸಿನಿಮಾ ಮಾಡಲು ಆರಂಭಿಸುತ್ತಾರಂತೆ.

ಪಾರ್ವತಮ್ಮ ಅವರೇ ಹುಟ್ಟುಹಾಕಿದ್ದ ವಜ್ರೇಶ್ವರಿ ಸಂಸ್ಥೆಯಲ್ಲಿ ಅವರು ಹೋದ ಮೇಲೆ ಯಾವೊಂದು ಸಿನಿಮಾ ನಿರ್ಮಾಣವಾಗಿರಲಿಲ್ಲ. ಇದೀಗ ಆ ಜವಬ್ದಾರಿಯನ್ನು ರಾಘವೇಂದ್ರ ರಾಜ್‍ಕುಮಾರ್ ನಿರ್ವಹಿಸಲು ಮುಂದಾಗಿದ್ದಾರೆ. ವಜ್ರೇಶ್ವರಿ ಸಂಸ್ಥೆ ಎಂದರೆ ಅದರಲ್ಲಿ ಬರುವ ಸಿನಿಮಾ ಒಳ್ಳೆಯ ಸಿನಿಮಾವೇ ಆಗಿರಬೇಕು. ಹೀಗಾಗಿ ಪೂರ್ವ ತಯಾರಿ ಮಾಡಿಕೊಂಡೇ ಬರುತ್ತೀವಿ ಎಂದು ಮಾಹಿತಿ ನೀಡಿದ್ದಾರೆ. ವಜ್ರೇಶ್ವರಿ ಕಂಬೈನ್ಸ್ ನಿಂದ ಸಾಕಷ್ಟು ಹೊಸ ಕಲಾವಿದರ ಸೃಷ್ಟಿಯಾಗಿ ಟಾಪ್ ನಟ-ನಟಿಯರಾಗಿದ್ದರು. ಇದೀಗ ಮತ್ತೆ ಅಂಥದ್ದೊಂದು ಭರವಸೆ ಹುಟ್ಟಿದೆ.

suddionenews

Recent Posts

ರತನ್ ಟಾಟಾ ಉಯಿಲ್ ನಲ್ಲಿ ಮೋಹಿನಿಗೆ 500 ಕೋಟಿ : ಹುಡುಕಾಟ ಶುರು..!

ದೇಶದ ಅತ್ಯಂತ ಶ್ರೀಮಂತರಲ್ಲಿ ಒಬ್ಬರಾದ ರತನ್ ಟಾಟಾ ಕಳೆದ ವರ್ಷ ಇಹಲೋಕ ತ್ಯಜಿಸಿದ್ದರು. ರತನ್ ಟಾಟಾ ಅವರಿಗೆ ಮದುವೆಯಾಗಿರಲಿಲ್ಲ. ಹೀಗಾಗಿ…

9 minutes ago

ಬಗರ್‍ಹುಕುಂ ಅರ್ಜಿಗಳನ್ನು ಮರು ಪರಿಶೀಲಿಸಿ : ಕುಮಾರ್ ಸಮತಳ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 07…

15 minutes ago

ಹೈಕೋರ್ಟ್ ತೀರ್ಪು : ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಭ್ರಮಾಚರಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

20 minutes ago

ದಾವಣಗೆರೆ ವಿಶ್ವವಿದ್ಯಾನಿಲಯ : ಹೊಳಲ್ಕೆರೆ ವಿದ್ಯಾರ್ಥಿನಿ ಗಂಗಮ್ಮ ಪ್ರಥಮ ರ‌್ಯಾಂಕ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

23 minutes ago

ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮಕ್ಕೆ ಹೆಚ್ಚಿನ ಅನುದಾನ : ಸಚಿವ ಮಧು ಬಂಗಾರಪ್ಪ

ಚಿತ್ರದುರ್ಗ.ಫೆ.07: ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜತೆಗೆ ದೇಶದ, ರಾಜ್ಯದ ಸಾಂಸ್ಕøತಿಕ ರಾಯಬಾರಿಗಳಾಗಿ ಕಲೆ, ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ಕೊಂಡ್ಯೊಯುವ ಕೆಲಸ…

29 minutes ago

15 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ : ಸಚಿವ ಮಧು ಬಂಗಾರಪ್ಪ

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಶಿಕ್ಷಣ ಇಲಾಖೆಗೆ ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಹೊಸದಾಗಿ 15…

42 minutes ago