Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೂಡಾ ಸೈಟುಗಳನ್ನು ಹಿಂತಿರುಗಿಸಿದ ಸಿಎಂ ಧರ್ಮಪತ್ನಿ ಪಾರ್ವತಿ : ಸಿದ್ದರಾಮಯ್ಯ ಹೇಳಿದ್ದೇನು..? ಇದರಿಂದ ಆಗುವ ಪ್ರಯೋಜನವೇನು..?

---Advertisement---

ಮೈಸೂರು: ಕಳೆದ 40 ವರ್ಷಗಳಿಂದ ರಾಜಕೀಯದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇರಲಿಲ್ಲ. ಆದರೆ ಈ ಬಾರಿ ಎರಡನೇ ಸಲ ಮುಖ್ಯಮಂತ್ರಿಯಾದ ಮೇಲೆ ಮೂಡಾ ಹಗರಣ ಸುತ್ತಿಕೊಂಡಿದೆ. ಈ ಒಂದು ಪ್ರಕರಣ ಸಿಎಂ ಸ್ಥಾನಕ್ಕೆ ಕುತ್ತು ತಂದಿದೆ. ವಿಪಕ್ಷ ನಾಯಕರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಸಿದ್ದರಾಮಯ್ಯ ಅವರನ್ನು ಕೇಳುತ್ತಿದ್ದಾರೆ‌‌. ತನಿಖೆ ಎದುರಿಸುತ್ತೇನೆ, ಆದರೆ ರಾಜೀನಾಮೆ ಕೊಡಲ್ಲ ಎಂದಿದ್ದಾರೆ.

ಇದೀಗ ಆ ಸೈಟ್ ಗಳನ್ನು ವಾಪಾಸ್ ನೀಡಲು ಪಾರ್ವತಿ ಅವರು ಸಿದ್ದರಾಗಿದ್ದಾರೆ. ಮೂಡಾ ನಿವೇಶನ ಆರೋಪ ರಾಜಕೀಯ ಸಂಚು ಎಂದುಕೊಂಡಿದ್ದೆ. ಈ ಆರೋಪ ಕೇಳಿ ಬಂದಾಗಲೇ ವಾಪಾಸ್ ಮಾಡಬೇಕು ಎಂದುಕೊಂಡೆ. ಆದರೆ ಎದುರಾಳಿಗಳ ಸಂಚಿಗೆ ಬಲಿಯಾಗಬಾರದೆಂಬ ಆಪ್ತರ ಮಾತಿಗೆ ಸುಮ್ಮನೆ ಆದೆ. ಈಗ ಪತಿಯ ರಾಜಕೀಯ ಜೀವನದ ಮೇಲೆ ಪರಿಣಾಮ ಬೀರುತ್ತಿದೆ ಎಂದಾಗ ವಾಪಾಸ್ ನೀಡಲು ನಿರ್ಧರಿಸಿದ್ದೇನೆ. ಇದು ಮಗನಿಗಾಗಲೀ, ಪತಿಯ ಜೊತೆಗಾಗಲಿ ಚರ್ಚಿಸಿ ತೆಗೆದುಕೊಂಡ ನಿರ್ಧಾರವಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಕೂಡ ಮಾತನಾಡಿ, ನನ್ನ ನಾಲ್ಕು ದಶಕಗಳ ಸುಧೀರ್ಘ ರಾಜಕೀಯದಲ್ಲಿ ಎಂದು ಕೂಡ ಮಧ್ಯಪ್ರವೇಶಿಸದ ನನ್ನ ಧರ್ಮಪತ್ನಿ, ನನ್ನ ವಿರುದ್ಧ ದ್ವೇಷದ ರಾಜಕಾರಣಕ್ಕೆ ಮಾನಸಿಕವಾಗಿ ಹಿಂಸೆ ಅನುಭವಿಸುವಂತೆ ಆಗಿದೆ. ಇದಕ್ಕೆ ನನ್ನ ವಿಷಾಧವಿದೆ. ಹೀಗಿದ್ದರು ಸೈಟ್ ಗಳನ್ನು ಹಿಂತಿರುಗಿಸುವ ನಿರ್ಧಾರವನ್ನು ನಾನು ಗೌರವಿಸುತ್ತೇನೆ ಎಂದಿದ್ದಾರೆ.

ಸೈಟ್ ವಾಪಾಸ್ ಕೊಡಿಸುವುದರಿಂದ ಕಾನೂನಾತ್ಮಕ ಹೋರಾಟಕ್ಕೆ ಪ್ಲಸ್ ಪಾಯಿಂಟ್ ಆಗಬಹುದು. ಸುಪ್ರೀಂ ಕೋರ್ಟ್ ಹೋಗುವ ಸ್ಥಿತಿ ಬಂದರೆ, ಅಲ್ಲಿ ಸೈಟ್ ವಾಪಾಸ್ ನೀಡಿರುವ ಬಗ್ಗೆಯೂ ವಾದ ಮಂಡಿಸಬಹುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...