ಸುದ್ದಿಒನ್, ಏಪ್ರಿಲ್. 18 : ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಅಂಗೀಕರಿಸಿದ್ದಕ್ಕಾಗಿ ದಾವೂದಿ ಬೋಹ್ರಾ ಸಮುದಾಯದ ನಿಯೋಗವು ಪ್ರಧಾನಿ ಮೋದಿಯವರಿಗೆ ಧನ್ಯವಾದ ಅರ್ಪಿಸಿತು.
ಗುರುವಾರ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದ ತಂಡದ ಸದಸ್ಯರು ಈ ಹೊಸ ಕಾನೂನಿನ ಬಗ್ಗೆ ಸಂತೋಷ ವ್ಯಕ್ತಪಡಿಸಿದರು. ಇದು ತಮ್ಮ ಸಮುದಾಯದ ಪರವಾಗಿ ಬಹಳ ಹಿಂದಿನಿಂದಲೂ ಬಾಕಿ ಇರುವ ಬೇಡಿಕೆಯಾಗಿದೆ ಎಂದು ಅವರು ಹೇಳಿದರು. ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್ ಎಂಬ ಪ್ರಧಾನಿಯವರ ದೂರದೃಷ್ಟಿಯಲ್ಲಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ದೇಶಾದ್ಯಂತ ಮುಸ್ಲಿಮರು ವಕ್ಫ್ ತಿದ್ದುಪಡಿ ಕಾಯ್ದೆಗೆ ವಿರೋಧ ವ್ಯಕ್ತಪಡಿಸುತ್ತಿದ್ದರೆ, ದಾವೂದಿ ಬೊಹ್ರಾ ಸಮುದಾಯವು ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸುವುದು ಗಮನಾರ್ಹವಾಗಿದೆ.














