Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪತಂಜಲಿ ಯೋಗ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನಪ್ಪ ಹಾಗೂ ನರಹರಿ ಟ್ರೇಡರ್ಸ್ ಮಾಲೀಕ ರವಿಯವರ ಸವಿನೆನಪು ಕಾರ್ಯಕ್ರಮ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.30 : ಪತಂಜಲಿ ಯೋಗ ಸಮಿತಿಯ ಅಧ್ಯಕ್ಷ ಮಲ್ಲಿಕಾರ್ಜುನಪ್ಪ ಹಾಗೂ ನರಹರಿ ಟ್ರೇಡರ್ಸ್ ಮಾಲೀಕ ರವಿ ಜಿ. ಇವರುಗಳ ನಿಧನಕ್ಕೆ ಆಡುಮಲ್ಲೇಶ್ವರ ಸಮೀಪವಿರುವ ಸದ್ಗುರು ಸೇವಾಶ್ರಮದಲ್ಲಿ ಭಾನುವಾರ ಸವಿನೆನಪು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಅಂಚೆ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯ ನಂತರ ಪತಂಜಲಿ ಯೋಗ ಸಮಿತಿಯನ್ನು ಆರಂಭಿಸಿ ಜಿಲ್ಲೆಯಾದ್ಯಂತ ಯೋಗ ಶಿಬಿರಗಳನ್ನು ನಡೆಸಿದ ಮಲ್ಲಿಕಾರ್ಜುನಪ್ಪನವರ ನಿಧನದಿಂದ ಯೋಗ ಕಲಿಯುತ್ತಿದ್ದವರಿಗೆ ಅಪಾರ ನಷ್ಟವಾಗಿದೆ.

ಎಲ್ಲೆಡೆ ಯೋಗ ಶಿಬಿರಗಳನ್ನು ನಡೆಸಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಸಾರ್ವಜನಿಕರಲ್ಲಿ ಆಸಕ್ತಿ ಮೂಡಿಸುತ್ತಿದ್ದ ಮಲ್ಲಿಕಾರ್ಜುನಪ್ಪನವರ ಆತ್ಮಕ್ಕೆ ಚಿರಶಾಂತಿಯನ್ನು ಭಗವಂತ ಕರುಣಿಸಲಿ ಎಂದು ಅವರ ಅಪಾರ ಶಿಷ್ಯಂದಿರು ಪ್ರಾರ್ಥಿಸಿದರು.

ನರಹರಿ ಟ್ರೇಡರ್ಸ್ ಮಾಲೀಕ ರವಿ ಜಿ.ಇವರುಗಳು ಯೋಗಗುರು ಮಲ್ಲಿಕಾರ್ಜುನಪ್ಪನವರಿಗೆ ಬೆನ್ನುಲುಬಾಗಿ ನಿಂತು ಎಲ್ಲಾ ರೀತಿಯಲ್ಲಿಯೂ ಸಹಕರಿಸುತ್ತಿದ್ದರು. ಅವರ ಅಗಲಿಕೆಯೂ ಎಲ್ಲರ ಮನಸ್ಸಿಗೆ ನೋವುಂಟಾಗಿದೆ. ಆತ್ಮಕ್ಕೆ ಶಾಂತಿ ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿದರು.

ದಿವಂಗತ ಮಲ್ಲಿಕಾರ್ಜುನಪ್ಪನವರ ಪತ್ನಿ ಶ್ರೀಮತಿ ನಾಗರತ್ನಮ್ಮ, ಪುತ್ರ ಡಾ.ಭರತ್, ಅಳಿಯ ಡಾ.ರವಿಕುಮಾರ್, ದಿವಂಗತ ರವಿ ಜಿ.ರವರ ಪತ್ನಿ ಶ್ರೀಮತಿ ಲತಾ, ಪತಂಜಲಿ ಯೋಗ ಸಮಿತಿಯ ಕರ್ನಾಟಕ ರಾಜ್ಯ ಪ್ರಭಾರಿ ಭವರ್‍ಲಾಲ್ ಆರ್ಯ, ಶ್ರೀಮತಿ ಆರತಿ ಕಾಂಗೋ, ದೇವಾನಂದನಾಯ್ಕ, ಪತಂಜಲಿ ಯೋಗ ಸಮಿತಿಯ ಯೋಗ ಶಿಕ್ಷಕರು ಕಾರ್ಯದರ್ಶಿ, ಖಜಾಂಚಿ ವೇದಿಕೆಯಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

  ಸುದ್ದಿಒನ್ : ಬಾಳೆಹಣ್ಣಿನಲ್ಲಿ ಅನೇಕ ಪೋಷಕಾಂಶಗಳು ಅಡಗಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಸದಾ ಲಭ್ಯವಿರುವ ಬಾಳೆಹಣ್ಣನ್ನು ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಬಾಳೆ ಹಣ್ಣಿನಲ್ಲಿ ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು!

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು! ಈ ರಾಶಿಯವರು ದೊಡ್ಡ ಮಹಾತ್ಮಾಕಾಂಕ್ಷೆ ಹೊಂದಿರುವರು, ಸೋಮವಾರ- ರಾಶಿ ಭವಿಷ್ಯ ಮೇ-20,2024 ಸೂರ್ಯೋದಯ: 05:46, ಸೂರ್ಯಾಸಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

error: Content is protected !!