Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪತಂಜಲಿ ಯೋಗ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನಪ್ಪ ಹಾಗೂ ನರಹರಿ ಟ್ರೇಡರ್ಸ್ ಮಾಲೀಕ ರವಿಯವರ ಸವಿನೆನಪು ಕಾರ್ಯಕ್ರಮ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.30 : ಪತಂಜಲಿ ಯೋಗ ಸಮಿತಿಯ ಅಧ್ಯಕ್ಷ ಮಲ್ಲಿಕಾರ್ಜುನಪ್ಪ ಹಾಗೂ ನರಹರಿ ಟ್ರೇಡರ್ಸ್ ಮಾಲೀಕ ರವಿ ಜಿ. ಇವರುಗಳ ನಿಧನಕ್ಕೆ ಆಡುಮಲ್ಲೇಶ್ವರ ಸಮೀಪವಿರುವ ಸದ್ಗುರು ಸೇವಾಶ್ರಮದಲ್ಲಿ ಭಾನುವಾರ ಸವಿನೆನಪು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಅಂಚೆ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯ ನಂತರ ಪತಂಜಲಿ ಯೋಗ ಸಮಿತಿಯನ್ನು ಆರಂಭಿಸಿ ಜಿಲ್ಲೆಯಾದ್ಯಂತ ಯೋಗ ಶಿಬಿರಗಳನ್ನು ನಡೆಸಿದ ಮಲ್ಲಿಕಾರ್ಜುನಪ್ಪನವರ ನಿಧನದಿಂದ ಯೋಗ ಕಲಿಯುತ್ತಿದ್ದವರಿಗೆ ಅಪಾರ ನಷ್ಟವಾಗಿದೆ.

ಎಲ್ಲೆಡೆ ಯೋಗ ಶಿಬಿರಗಳನ್ನು ನಡೆಸಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಸಾರ್ವಜನಿಕರಲ್ಲಿ ಆಸಕ್ತಿ ಮೂಡಿಸುತ್ತಿದ್ದ ಮಲ್ಲಿಕಾರ್ಜುನಪ್ಪನವರ ಆತ್ಮಕ್ಕೆ ಚಿರಶಾಂತಿಯನ್ನು ಭಗವಂತ ಕರುಣಿಸಲಿ ಎಂದು ಅವರ ಅಪಾರ ಶಿಷ್ಯಂದಿರು ಪ್ರಾರ್ಥಿಸಿದರು.

ನರಹರಿ ಟ್ರೇಡರ್ಸ್ ಮಾಲೀಕ ರವಿ ಜಿ.ಇವರುಗಳು ಯೋಗಗುರು ಮಲ್ಲಿಕಾರ್ಜುನಪ್ಪನವರಿಗೆ ಬೆನ್ನುಲುಬಾಗಿ ನಿಂತು ಎಲ್ಲಾ ರೀತಿಯಲ್ಲಿಯೂ ಸಹಕರಿಸುತ್ತಿದ್ದರು. ಅವರ ಅಗಲಿಕೆಯೂ ಎಲ್ಲರ ಮನಸ್ಸಿಗೆ ನೋವುಂಟಾಗಿದೆ. ಆತ್ಮಕ್ಕೆ ಶಾಂತಿ ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿದರು.

ದಿವಂಗತ ಮಲ್ಲಿಕಾರ್ಜುನಪ್ಪನವರ ಪತ್ನಿ ಶ್ರೀಮತಿ ನಾಗರತ್ನಮ್ಮ, ಪುತ್ರ ಡಾ.ಭರತ್, ಅಳಿಯ ಡಾ.ರವಿಕುಮಾರ್, ದಿವಂಗತ ರವಿ ಜಿ.ರವರ ಪತ್ನಿ ಶ್ರೀಮತಿ ಲತಾ, ಪತಂಜಲಿ ಯೋಗ ಸಮಿತಿಯ ಕರ್ನಾಟಕ ರಾಜ್ಯ ಪ್ರಭಾರಿ ಭವರ್‍ಲಾಲ್ ಆರ್ಯ, ಶ್ರೀಮತಿ ಆರತಿ ಕಾಂಗೋ, ದೇವಾನಂದನಾಯ್ಕ, ಪತಂಜಲಿ ಯೋಗ ಸಮಿತಿಯ ಯೋಗ ಶಿಕ್ಷಕರು ಕಾರ್ಯದರ್ಶಿ, ಖಜಾಂಚಿ ವೇದಿಕೆಯಲ್ಲಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment