ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೊದಲ ಆರೋಪಿ ಪವಿತ್ರಾಗೌಡ ಅವರು ಹೈಕೋರ್ಟ್ಗೆ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಹಿಂಪಡೆದಿದ್ದಾರೆ.ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪವಿತ್ರಾಗೌಡ, ಮಗಳ ಎಸ್ಎಸ್ಎಲ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ 20 ದಿನಗಳ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ತಾಯಿಯಾಗಿ ಮಗಳ ಜೊತೆಗಿದ್ದು ಪರೀಕ್ಷಾ ಸಿದ್ಧತೆಗೆ ಸಹಾಯ ಮಾಡಲು ಅವಕಾಶ ನೀಡಬೇಕೆಂದು ಮನವಿ ಮಾಡಿದ್ದರು.ಆದರೆ ಅರ್ಜಿ ವಿಚಾರಣೆಗಾಗುವಷ್ಟರಲ್ಲಿ ಮಗಳ ಪರೀಕ್ಷೆಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ, ಅರ್ಜಿಯನ್ನು ಮುಂದುವರಿಸುವ ಅಗತ್ಯವಿಲ್ಲವೆಂದು ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ನ್ಯಾಯಮೂರ್ತಿ ರಾಚಯ್ಯ ಅವರ ಪೀಠವು ಈ ಮನವಿಯನ್ನು ಅಂಗೀಕರಿಸಿ ಅರ್ಜಿಯನ್ನು ವಜಾಗೊಳಿಸಿದೆ.
ಈ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ ಎರಡನೇ ಆರೋಪಿಯಾಗಿದ್ದು, ಇಬ್ಬರೂ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ರೇಣುಕಾಸ್ವಾಮಿ ಎಂಬಾತನನ್ನು ಅಪಹರಿಸಿ ಹಲ್ಲೆ ನಡೆಸಿ ಕೊಲೆ ಮಾಡಿರುವ ಆರೋಪ ಇವರ ಮೇಲೆ ಇದೆ.ಮಧ್ಯಂತರ ಜಾಮೀನು ಅರ್ಜಿ ಹಿಂಪಡೆಯಲ್ಪಟ್ಟಿದ್ದರೂ, ಪವಿತ್ರಾಗೌಡ ಅವರ ಮುಖ್ಯ ಜಾಮೀನು ಅರ್ಜಿಯ ವಿಚಾರಣೆ ಮುಂದುವರಿಯಲಿದೆ. ಈ ನಡುವೆ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಚಾರ್ಜ್ಶೀಟ್ ಸಲ್ಲಿಕೆಯಾಗಿರುವ ಹಿನ್ನೆಲೆ ನ್ಯಾಯಾಲಯದಲ್ಲಿ ವಿಚಾರಣೆ ವೇಗ ಪಡೆದುಕೊಂಡಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











